AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸಿಸಿ ಏಕದಿನ ರ್ಯಾಂಕಿಂಗ್​ನಲ್ಲಿ ವಿರಾಟ್​ ಕೊಹ್ಲಿ ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ ಬಾಬರ್ ಆಜಂ

ದಕ್ಷಿಣ ಆಫ್ರಿಕಾದ ವಿರುದ್ಧದ ಪಂದ್ಯದಲ್ಲಿ ಬಾಬರ್​ 82 ಬಾಲ್​ಗಳಲ್ಲಿ 94 ರನ್​ ಸಿಡಿಸಿದ್ದರು. ಈ ಮೂಲಕ 865 ಅಂಕ ಪಡೆದುಕೊಂಡು, ಭಾರತದ ನಾಯಕ ವಿರಾಟ್​ಗಿಂತ ಅವರು 8 ಅಂಕ ಮುಂದಿದ್ದಾರೆ.

ಐಸಿಸಿ ಏಕದಿನ ರ್ಯಾಂಕಿಂಗ್​ನಲ್ಲಿ ವಿರಾಟ್​ ಕೊಹ್ಲಿ ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ ಬಾಬರ್ ಆಜಂ
ಬಾಬರ್​ ಆಜಂ
ರಾಜೇಶ್ ದುಗ್ಗುಮನೆ
|

Updated on: Apr 14, 2021 | 10:24 PM

Share

ದುಬೈ: ಹಲವು ವರ್ಷಗಳ ಕಾಲ ಐಸಿಸಿ ಏಕದಿನ ರ್ಯಾಂಕಿಂಗ್​ನಲ್ಲಿ ಮೊದಲ ಸ್ಥಾನದಲ್ಲಿದ್ದ ವಿರಾಟ್​ ಕೊಹ್ಲಿ ಈಗ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ. ಐಸಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಪಾಕಿಸ್ತಾನದ ಬಾಬರ್​ ಆಜಂ​ ಮೊದಲ ಸ್ಥಾನಕ್ಕೇರಿದ್ದಾರೆ. ದಕ್ಷಿಣ ಆಫ್ರಿಕಾದ ವಿರುದ್ಧದ ಪಂದ್ಯದಲ್ಲಿ ಬಾಬರ್​ 82 ಬಾಲ್​ಗಳಲ್ಲಿ 94 ರನ್​ ಸಿಡಿಸಿದ್ದರು. ಈ ಮೂಲಕ 865 ಅಂಕ ಪಡೆದುಕೊಂಡು, ಭಾರತದ ನಾಯಕ ವಿರಾಟ್​ಗಿಂತ ಅವರು 8 ಅಂಕ ಮುಂದಿದ್ದಾರೆ.

2010 ಹಾಗೂ 2012ರ ಅಂಡರ್​ 19 ವರ್ಡ್​ಕಪ್​ನಲ್ಲಿ ಬಾಬರ್​ ಮಿಂಚಿದ್ದರು. 2015ರಿಂದ ಅವರು ಪಾಕಿಸ್ತಾನದ ರಾಷ್ಟ್ರೀಯ ತಂಡದ ಪರ ಆಡುತ್ತಿದ್ದಾರೆ. ಐಸಿಸಿ ಏಕದಿನ ರ್ಯಾಂಕಿಂಗ್​ನಲ್ಲಿ ವಿರಾಟ್​ ಕೊಹ್ಲಿ ಬರೋಬ್ಬರಿ 1,258 ದಿನ ಮೊದಲ ಸ್ಥಾನದಲ್ಲೇ ಇದ್ದರು. ಈಗ ಮೊದಲ ಸ್ಥಾನಕ್ಕೆ ಬಾಬರ್ ಬಂದಿದ್ದಾರೆ.

ಈ ಮೊದಲಿಗೆ ಹೋಲಿಸಿದರೆ ವಿರಾಟ್​ ಕೊಹ್ಲಿ ಪರ್ಫಾರ್ಮೆನ್ಸ್​ ಕುಗ್ಗಿದೆ. ಅವರ ಬ್ಯಾಟ್​​ನಿಂದ ಶತಕ ಸಿಡಿಯದೇ ಎರಡು ವರ್ಷಗಳಾಗುತ್ತಾ ಬಂದಿವೆ. ರ್ಯಾಂಕಿಂಗ್ ಪಟ್ಟಿಯಲ್ಲಿ ಸ್ಥಾನ ಕುಸಿಯೋಕೆ ಇದು ಕೂಡ ಕಾರಣವಾಗಿದೆ.

ಅಂದಹಾಗೆ, ಐಸಿಸಿ ರ್ಯಾಂಕಿಂಗ್​ನಲ್ಲಿ ಮೊದಲ ಸ್ಥಾನಕ್ಕೇರಿದ ಪಾಕಿಸ್ತಾನದ ನಾಲ್ಕನೇ ಬ್ಯಾಟ್ಸಮನ್​ ಬಾಬರ್​ ಆಗಿದ್ದಾರೆ. ಈ ಮೊದಲು ಜಾಹೀರ್​ ಅಬ್ಬಾಸ್​ (1983-84), ಜಾವೇದ್​ (1988-89), ಮೊಹ್ಮದ್​ ಯೂಸುಪ್​ (2003) ಮೊದಲ ಸ್ಥಾನದಲ್ಲಿದ್ದರು. 875 ಅಂಕ ಗಳಿಸಿ ವಿರಾಟ್​ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ. ರೋಹಿತ್​ ಶರ್ಮಾ (825) ಮೂರನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ: ಒಡಿಐಗಳಲ್ಲಿ ಕೇವಲ 76ನೇ ಇನ್ನಿಂಗ್ಸ್​ನಲ್ಲಿ 13 ನೇ ಶತಕ ಬಾರಿಸಿ ಕೊಹ್ಲಿ ಮತ್ತು ಆಮ್ಲಾರನ್ನು ಹಿಂದಿಕ್ಕಿದ ಬಾಬರ್ ಆಜಂ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್