AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸಿಸಿ ಏಕದಿನ ರ್ಯಾಂಕಿಂಗ್​ನಲ್ಲಿ ವಿರಾಟ್​ ಕೊಹ್ಲಿ ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ ಬಾಬರ್ ಆಜಂ

ದಕ್ಷಿಣ ಆಫ್ರಿಕಾದ ವಿರುದ್ಧದ ಪಂದ್ಯದಲ್ಲಿ ಬಾಬರ್​ 82 ಬಾಲ್​ಗಳಲ್ಲಿ 94 ರನ್​ ಸಿಡಿಸಿದ್ದರು. ಈ ಮೂಲಕ 865 ಅಂಕ ಪಡೆದುಕೊಂಡು, ಭಾರತದ ನಾಯಕ ವಿರಾಟ್​ಗಿಂತ ಅವರು 8 ಅಂಕ ಮುಂದಿದ್ದಾರೆ.

ಐಸಿಸಿ ಏಕದಿನ ರ್ಯಾಂಕಿಂಗ್​ನಲ್ಲಿ ವಿರಾಟ್​ ಕೊಹ್ಲಿ ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ ಬಾಬರ್ ಆಜಂ
ಬಾಬರ್​ ಆಜಂ
ರಾಜೇಶ್ ದುಗ್ಗುಮನೆ
|

Updated on: Apr 14, 2021 | 10:24 PM

Share

ದುಬೈ: ಹಲವು ವರ್ಷಗಳ ಕಾಲ ಐಸಿಸಿ ಏಕದಿನ ರ್ಯಾಂಕಿಂಗ್​ನಲ್ಲಿ ಮೊದಲ ಸ್ಥಾನದಲ್ಲಿದ್ದ ವಿರಾಟ್​ ಕೊಹ್ಲಿ ಈಗ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ. ಐಸಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಪಾಕಿಸ್ತಾನದ ಬಾಬರ್​ ಆಜಂ​ ಮೊದಲ ಸ್ಥಾನಕ್ಕೇರಿದ್ದಾರೆ. ದಕ್ಷಿಣ ಆಫ್ರಿಕಾದ ವಿರುದ್ಧದ ಪಂದ್ಯದಲ್ಲಿ ಬಾಬರ್​ 82 ಬಾಲ್​ಗಳಲ್ಲಿ 94 ರನ್​ ಸಿಡಿಸಿದ್ದರು. ಈ ಮೂಲಕ 865 ಅಂಕ ಪಡೆದುಕೊಂಡು, ಭಾರತದ ನಾಯಕ ವಿರಾಟ್​ಗಿಂತ ಅವರು 8 ಅಂಕ ಮುಂದಿದ್ದಾರೆ.

2010 ಹಾಗೂ 2012ರ ಅಂಡರ್​ 19 ವರ್ಡ್​ಕಪ್​ನಲ್ಲಿ ಬಾಬರ್​ ಮಿಂಚಿದ್ದರು. 2015ರಿಂದ ಅವರು ಪಾಕಿಸ್ತಾನದ ರಾಷ್ಟ್ರೀಯ ತಂಡದ ಪರ ಆಡುತ್ತಿದ್ದಾರೆ. ಐಸಿಸಿ ಏಕದಿನ ರ್ಯಾಂಕಿಂಗ್​ನಲ್ಲಿ ವಿರಾಟ್​ ಕೊಹ್ಲಿ ಬರೋಬ್ಬರಿ 1,258 ದಿನ ಮೊದಲ ಸ್ಥಾನದಲ್ಲೇ ಇದ್ದರು. ಈಗ ಮೊದಲ ಸ್ಥಾನಕ್ಕೆ ಬಾಬರ್ ಬಂದಿದ್ದಾರೆ.

ಈ ಮೊದಲಿಗೆ ಹೋಲಿಸಿದರೆ ವಿರಾಟ್​ ಕೊಹ್ಲಿ ಪರ್ಫಾರ್ಮೆನ್ಸ್​ ಕುಗ್ಗಿದೆ. ಅವರ ಬ್ಯಾಟ್​​ನಿಂದ ಶತಕ ಸಿಡಿಯದೇ ಎರಡು ವರ್ಷಗಳಾಗುತ್ತಾ ಬಂದಿವೆ. ರ್ಯಾಂಕಿಂಗ್ ಪಟ್ಟಿಯಲ್ಲಿ ಸ್ಥಾನ ಕುಸಿಯೋಕೆ ಇದು ಕೂಡ ಕಾರಣವಾಗಿದೆ.

ಅಂದಹಾಗೆ, ಐಸಿಸಿ ರ್ಯಾಂಕಿಂಗ್​ನಲ್ಲಿ ಮೊದಲ ಸ್ಥಾನಕ್ಕೇರಿದ ಪಾಕಿಸ್ತಾನದ ನಾಲ್ಕನೇ ಬ್ಯಾಟ್ಸಮನ್​ ಬಾಬರ್​ ಆಗಿದ್ದಾರೆ. ಈ ಮೊದಲು ಜಾಹೀರ್​ ಅಬ್ಬಾಸ್​ (1983-84), ಜಾವೇದ್​ (1988-89), ಮೊಹ್ಮದ್​ ಯೂಸುಪ್​ (2003) ಮೊದಲ ಸ್ಥಾನದಲ್ಲಿದ್ದರು. 875 ಅಂಕ ಗಳಿಸಿ ವಿರಾಟ್​ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ. ರೋಹಿತ್​ ಶರ್ಮಾ (825) ಮೂರನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ: ಒಡಿಐಗಳಲ್ಲಿ ಕೇವಲ 76ನೇ ಇನ್ನಿಂಗ್ಸ್​ನಲ್ಲಿ 13 ನೇ ಶತಕ ಬಾರಿಸಿ ಕೊಹ್ಲಿ ಮತ್ತು ಆಮ್ಲಾರನ್ನು ಹಿಂದಿಕ್ಕಿದ ಬಾಬರ್ ಆಜಂ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ