Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸಿಸಿ ಏಕದಿನ ರ್ಯಾಂಕಿಂಗ್​ನಲ್ಲಿ ವಿರಾಟ್​ ಕೊಹ್ಲಿ ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ ಬಾಬರ್ ಆಜಂ

ದಕ್ಷಿಣ ಆಫ್ರಿಕಾದ ವಿರುದ್ಧದ ಪಂದ್ಯದಲ್ಲಿ ಬಾಬರ್​ 82 ಬಾಲ್​ಗಳಲ್ಲಿ 94 ರನ್​ ಸಿಡಿಸಿದ್ದರು. ಈ ಮೂಲಕ 865 ಅಂಕ ಪಡೆದುಕೊಂಡು, ಭಾರತದ ನಾಯಕ ವಿರಾಟ್​ಗಿಂತ ಅವರು 8 ಅಂಕ ಮುಂದಿದ್ದಾರೆ.

ಐಸಿಸಿ ಏಕದಿನ ರ್ಯಾಂಕಿಂಗ್​ನಲ್ಲಿ ವಿರಾಟ್​ ಕೊಹ್ಲಿ ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ ಬಾಬರ್ ಆಜಂ
ಬಾಬರ್​ ಆಜಂ
Follow us
ರಾಜೇಶ್ ದುಗ್ಗುಮನೆ
|

Updated on: Apr 14, 2021 | 10:24 PM

ದುಬೈ: ಹಲವು ವರ್ಷಗಳ ಕಾಲ ಐಸಿಸಿ ಏಕದಿನ ರ್ಯಾಂಕಿಂಗ್​ನಲ್ಲಿ ಮೊದಲ ಸ್ಥಾನದಲ್ಲಿದ್ದ ವಿರಾಟ್​ ಕೊಹ್ಲಿ ಈಗ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ. ಐಸಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಪಾಕಿಸ್ತಾನದ ಬಾಬರ್​ ಆಜಂ​ ಮೊದಲ ಸ್ಥಾನಕ್ಕೇರಿದ್ದಾರೆ. ದಕ್ಷಿಣ ಆಫ್ರಿಕಾದ ವಿರುದ್ಧದ ಪಂದ್ಯದಲ್ಲಿ ಬಾಬರ್​ 82 ಬಾಲ್​ಗಳಲ್ಲಿ 94 ರನ್​ ಸಿಡಿಸಿದ್ದರು. ಈ ಮೂಲಕ 865 ಅಂಕ ಪಡೆದುಕೊಂಡು, ಭಾರತದ ನಾಯಕ ವಿರಾಟ್​ಗಿಂತ ಅವರು 8 ಅಂಕ ಮುಂದಿದ್ದಾರೆ.

2010 ಹಾಗೂ 2012ರ ಅಂಡರ್​ 19 ವರ್ಡ್​ಕಪ್​ನಲ್ಲಿ ಬಾಬರ್​ ಮಿಂಚಿದ್ದರು. 2015ರಿಂದ ಅವರು ಪಾಕಿಸ್ತಾನದ ರಾಷ್ಟ್ರೀಯ ತಂಡದ ಪರ ಆಡುತ್ತಿದ್ದಾರೆ. ಐಸಿಸಿ ಏಕದಿನ ರ್ಯಾಂಕಿಂಗ್​ನಲ್ಲಿ ವಿರಾಟ್​ ಕೊಹ್ಲಿ ಬರೋಬ್ಬರಿ 1,258 ದಿನ ಮೊದಲ ಸ್ಥಾನದಲ್ಲೇ ಇದ್ದರು. ಈಗ ಮೊದಲ ಸ್ಥಾನಕ್ಕೆ ಬಾಬರ್ ಬಂದಿದ್ದಾರೆ.

ಈ ಮೊದಲಿಗೆ ಹೋಲಿಸಿದರೆ ವಿರಾಟ್​ ಕೊಹ್ಲಿ ಪರ್ಫಾರ್ಮೆನ್ಸ್​ ಕುಗ್ಗಿದೆ. ಅವರ ಬ್ಯಾಟ್​​ನಿಂದ ಶತಕ ಸಿಡಿಯದೇ ಎರಡು ವರ್ಷಗಳಾಗುತ್ತಾ ಬಂದಿವೆ. ರ್ಯಾಂಕಿಂಗ್ ಪಟ್ಟಿಯಲ್ಲಿ ಸ್ಥಾನ ಕುಸಿಯೋಕೆ ಇದು ಕೂಡ ಕಾರಣವಾಗಿದೆ.

ಅಂದಹಾಗೆ, ಐಸಿಸಿ ರ್ಯಾಂಕಿಂಗ್​ನಲ್ಲಿ ಮೊದಲ ಸ್ಥಾನಕ್ಕೇರಿದ ಪಾಕಿಸ್ತಾನದ ನಾಲ್ಕನೇ ಬ್ಯಾಟ್ಸಮನ್​ ಬಾಬರ್​ ಆಗಿದ್ದಾರೆ. ಈ ಮೊದಲು ಜಾಹೀರ್​ ಅಬ್ಬಾಸ್​ (1983-84), ಜಾವೇದ್​ (1988-89), ಮೊಹ್ಮದ್​ ಯೂಸುಪ್​ (2003) ಮೊದಲ ಸ್ಥಾನದಲ್ಲಿದ್ದರು. 875 ಅಂಕ ಗಳಿಸಿ ವಿರಾಟ್​ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ. ರೋಹಿತ್​ ಶರ್ಮಾ (825) ಮೂರನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ: ಒಡಿಐಗಳಲ್ಲಿ ಕೇವಲ 76ನೇ ಇನ್ನಿಂಗ್ಸ್​ನಲ್ಲಿ 13 ನೇ ಶತಕ ಬಾರಿಸಿ ಕೊಹ್ಲಿ ಮತ್ತು ಆಮ್ಲಾರನ್ನು ಹಿಂದಿಕ್ಕಿದ ಬಾಬರ್ ಆಜಂ

ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ
Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ
ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್​ ಗುಂಡೇಗೆ ಬಲಿ: ಕಮಿಷನರ್​ಗೆ ಜೈಕಾರ
ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್​ ಗುಂಡೇಗೆ ಬಲಿ: ಕಮಿಷನರ್​ಗೆ ಜೈಕಾರ
ಐಪಿಎಲ್​ಗೆ ಎಂಟ್ರಿಕೊಟ್ಟ ರೋಬೋ ಶ್ವಾನ; ವಿಡಿಯೋ ನೋಡಿ
ಐಪಿಎಲ್​ಗೆ ಎಂಟ್ರಿಕೊಟ್ಟ ರೋಬೋ ಶ್ವಾನ; ವಿಡಿಯೋ ನೋಡಿ
ಡಿಫರೆಂಟ್ ಆಗಿ ‘ಯುದ್ಧಕಾಂಡ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ರವಿಚಂದ್ರನ್
ಡಿಫರೆಂಟ್ ಆಗಿ ‘ಯುದ್ಧಕಾಂಡ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ರವಿಚಂದ್ರನ್
33 ಎಸೆತಗಳಲ್ಲಿ 65 ರನ್​ ಸಿಡಿಸಿದ ಫಿಲ್ ಸಾಲ್ಟ್
33 ಎಸೆತಗಳಲ್ಲಿ 65 ರನ್​ ಸಿಡಿಸಿದ ಫಿಲ್ ಸಾಲ್ಟ್
ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರಿಡಲು ಕೇಂದ್ರ ಒಪ್ಪಿಗೆ
ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರಿಡಲು ಕೇಂದ್ರ ಒಪ್ಪಿಗೆ
ಪತ್ನಿಯ ಕಿರುಕುಳಕ್ಕೆ ಬೇಸತ್ತು ರಾಜಭವನದ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಪತಿ
ಪತ್ನಿಯ ಕಿರುಕುಳಕ್ಕೆ ಬೇಸತ್ತು ರಾಜಭವನದ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಪತಿ