AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸಿಸಿ ಏಕದಿನ ರ್ಯಾಂಕಿಂಗ್​ನಲ್ಲಿ ವಿರಾಟ್​ ಕೊಹ್ಲಿ ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ ಬಾಬರ್ ಆಜಂ

ದಕ್ಷಿಣ ಆಫ್ರಿಕಾದ ವಿರುದ್ಧದ ಪಂದ್ಯದಲ್ಲಿ ಬಾಬರ್​ 82 ಬಾಲ್​ಗಳಲ್ಲಿ 94 ರನ್​ ಸಿಡಿಸಿದ್ದರು. ಈ ಮೂಲಕ 865 ಅಂಕ ಪಡೆದುಕೊಂಡು, ಭಾರತದ ನಾಯಕ ವಿರಾಟ್​ಗಿಂತ ಅವರು 8 ಅಂಕ ಮುಂದಿದ್ದಾರೆ.

ಐಸಿಸಿ ಏಕದಿನ ರ್ಯಾಂಕಿಂಗ್​ನಲ್ಲಿ ವಿರಾಟ್​ ಕೊಹ್ಲಿ ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ ಬಾಬರ್ ಆಜಂ
ಬಾಬರ್​ ಆಜಂ
ರಾಜೇಶ್ ದುಗ್ಗುಮನೆ
|

Updated on: Apr 14, 2021 | 10:24 PM

Share

ದುಬೈ: ಹಲವು ವರ್ಷಗಳ ಕಾಲ ಐಸಿಸಿ ಏಕದಿನ ರ್ಯಾಂಕಿಂಗ್​ನಲ್ಲಿ ಮೊದಲ ಸ್ಥಾನದಲ್ಲಿದ್ದ ವಿರಾಟ್​ ಕೊಹ್ಲಿ ಈಗ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ. ಐಸಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಪಾಕಿಸ್ತಾನದ ಬಾಬರ್​ ಆಜಂ​ ಮೊದಲ ಸ್ಥಾನಕ್ಕೇರಿದ್ದಾರೆ. ದಕ್ಷಿಣ ಆಫ್ರಿಕಾದ ವಿರುದ್ಧದ ಪಂದ್ಯದಲ್ಲಿ ಬಾಬರ್​ 82 ಬಾಲ್​ಗಳಲ್ಲಿ 94 ರನ್​ ಸಿಡಿಸಿದ್ದರು. ಈ ಮೂಲಕ 865 ಅಂಕ ಪಡೆದುಕೊಂಡು, ಭಾರತದ ನಾಯಕ ವಿರಾಟ್​ಗಿಂತ ಅವರು 8 ಅಂಕ ಮುಂದಿದ್ದಾರೆ.

2010 ಹಾಗೂ 2012ರ ಅಂಡರ್​ 19 ವರ್ಡ್​ಕಪ್​ನಲ್ಲಿ ಬಾಬರ್​ ಮಿಂಚಿದ್ದರು. 2015ರಿಂದ ಅವರು ಪಾಕಿಸ್ತಾನದ ರಾಷ್ಟ್ರೀಯ ತಂಡದ ಪರ ಆಡುತ್ತಿದ್ದಾರೆ. ಐಸಿಸಿ ಏಕದಿನ ರ್ಯಾಂಕಿಂಗ್​ನಲ್ಲಿ ವಿರಾಟ್​ ಕೊಹ್ಲಿ ಬರೋಬ್ಬರಿ 1,258 ದಿನ ಮೊದಲ ಸ್ಥಾನದಲ್ಲೇ ಇದ್ದರು. ಈಗ ಮೊದಲ ಸ್ಥಾನಕ್ಕೆ ಬಾಬರ್ ಬಂದಿದ್ದಾರೆ.

ಈ ಮೊದಲಿಗೆ ಹೋಲಿಸಿದರೆ ವಿರಾಟ್​ ಕೊಹ್ಲಿ ಪರ್ಫಾರ್ಮೆನ್ಸ್​ ಕುಗ್ಗಿದೆ. ಅವರ ಬ್ಯಾಟ್​​ನಿಂದ ಶತಕ ಸಿಡಿಯದೇ ಎರಡು ವರ್ಷಗಳಾಗುತ್ತಾ ಬಂದಿವೆ. ರ್ಯಾಂಕಿಂಗ್ ಪಟ್ಟಿಯಲ್ಲಿ ಸ್ಥಾನ ಕುಸಿಯೋಕೆ ಇದು ಕೂಡ ಕಾರಣವಾಗಿದೆ.

ಅಂದಹಾಗೆ, ಐಸಿಸಿ ರ್ಯಾಂಕಿಂಗ್​ನಲ್ಲಿ ಮೊದಲ ಸ್ಥಾನಕ್ಕೇರಿದ ಪಾಕಿಸ್ತಾನದ ನಾಲ್ಕನೇ ಬ್ಯಾಟ್ಸಮನ್​ ಬಾಬರ್​ ಆಗಿದ್ದಾರೆ. ಈ ಮೊದಲು ಜಾಹೀರ್​ ಅಬ್ಬಾಸ್​ (1983-84), ಜಾವೇದ್​ (1988-89), ಮೊಹ್ಮದ್​ ಯೂಸುಪ್​ (2003) ಮೊದಲ ಸ್ಥಾನದಲ್ಲಿದ್ದರು. 875 ಅಂಕ ಗಳಿಸಿ ವಿರಾಟ್​ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ. ರೋಹಿತ್​ ಶರ್ಮಾ (825) ಮೂರನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ: ಒಡಿಐಗಳಲ್ಲಿ ಕೇವಲ 76ನೇ ಇನ್ನಿಂಗ್ಸ್​ನಲ್ಲಿ 13 ನೇ ಶತಕ ಬಾರಿಸಿ ಕೊಹ್ಲಿ ಮತ್ತು ಆಮ್ಲಾರನ್ನು ಹಿಂದಿಕ್ಕಿದ ಬಾಬರ್ ಆಜಂ

ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್