AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC 2021: ನಶಿಸುತ್ತಿರುವ ಸಾಂಪ್ರದಾಯಿಕ ಟೆಸ್ಟ್ ಕ್ರಿಕೆಟ್​ಗೆ ಇಂದಿನ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ ಜೀವ ತುಂಬುವುದೇ?

ICC World Test Championship Final 2021: ಅಂದರೆ ಈಗಲೂ ಅಷ್ಟೇ.. ವಿರಾಟ್​ ಕೊಹ್ಲಿ ಸಾರಥ್ಯದಲ್ಲಿ ಭಾರತ ತಂಡ ಗೆದ್ದರೆ ಅದು ಟೆಸ್ಟ್​ ಕ್ರಿಕೆಟ್​​ ಜಗತ್ತಿನ ಮೇಲೆ ಅಪಾರ ಪ್ರಭಾವ ಬೀರಲಿದೆ. ಅಂದರೆ ನ್ಯೂಜಿಲ್ಯಾಂಡ್​ ಗೆಲುವು ಸಾಧಿಸುವುದಕ್ಕಿಂತ ಭಾರತ ಯಶಸ್ಸು ಸಾಧಿಸಿದರೆ ಅದು ಟೆಸ್ಟ್​ ಕ್ರಿಕೆಟ್​ಗೆ ಶ್ರೇಯಸ್ಕರ. ಏಕೆಂದರೆ ಪುಟ್ಟ ರಾಷ್ಟ್ರ ನ್ಯೂಜಿಲ್ಯಾಂಡ್ ಬೀಗುವುದಕ್ಕಿಂತ ಭಾರತ ಗೆದ್ದರೆ ಅದರ ತೂಕವೇ ಬೇರೆ ಆಗಿರುತ್ತದೆ.

WTC 2021: ನಶಿಸುತ್ತಿರುವ ಸಾಂಪ್ರದಾಯಿಕ ಟೆಸ್ಟ್ ಕ್ರಿಕೆಟ್​ಗೆ ಇಂದಿನ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ ಜೀವ ತುಂಬುವುದೇ?
ನ್ಯೂಜಿಲ್ಯಾಂಡ್​ ಗೆಲುವು ಸಾಧಿಸುವುದಕ್ಕಿಂತ ಭಾರತ ಯಶಸ್ಸು ಸಾಧಿಸಿದರೆ ಅದು ಟೆಸ್ಟ್​ ಕ್ರಿಕೆಟ್​ಗೆ ಶ್ರೇಯಸ್ಕರ
ಸಾಧು ಶ್ರೀನಾಥ್​
|

Updated on:Jun 18, 2021 | 11:38 AM

Share

ಸೌಥಾಂಪ್ಟನ್​​ ಕ್ರಿಕೆಟ್​ ಮೈದಾನ (Ageas Bowl, Southampton) ಇಂದು ಐತಿಹಾಸಿಕ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಅಂತಾರಾಷ್ಟ್ರೀಯ ಕ್ರಿಕೆಟ್​ ಕೌನ್ಸಿಲ್ (ICC)​ ಮಹತ್ತರ ಉದ್ದೇಶದಿಂದ ಆಯೋಜಿಸಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ ಇದಾಗಿದೆ. ಇದರ ಸದುದ್ದೇಶ ಇಷ್ಟೇ… ಸೀಮಿತ ಓವರುಗಳ ಆರ್ಭಟದಲ್ಲಿ ನಶಿಸುತ್ತಿರುವ ಸಾಂಪ್ರದಾಯಿಕ ಟೆಸ್ಟ್ ಕ್ರಿಕೆಟ್​ಗೆ ಮರುಜೀವ ತುಂಬುವ ಪ್ರಯತ್ನ ಇದಾಗಿದೆ. ಇದರಿಂದ ಟೆಸ್ಟ್ ಕ್ರಿಕೆಟ್​ ಜಗತ್ತಿಗೆ ಏನಾದೀತು!?

1983 World Cup ಮ್ಯಾಜಿಕ್​​ಗೆ ಘಟಿಸುವುದೇ? ಅದಕ್ಕೂ ಮುನ್ನ ಸರಿಯಾಗಿ ಇದೇ ತಿಂಗಳಲ್ಲಿ 1983ರಲ್ಲಿ ಕಪಿಲ್​ ದೇವ್​ ನೇತೃತ್ವದಲ್ಲಿ ಭಾರತ ಗೆದ್ದು ಬೀಗಿದಾಗ ಕ್ರಿಕೆಟ್​ ಜಗತ್ತಿನ ಮೇಲೆ ಅದರ ಪರಿಣಾಮ/ಪ್ರಭಾವಗಳು ಅಗಾಧವಾಗಿದ್ದವು. ಭಾರತಕ್ಕಂತೂ ಕ್ರಿಕೆಟ್​ ಧರ್ಮವಾಗಿ ಪರಿವರ್ತನೆಗೊಂಡಿತು. ಚಿಕ್ಕಪುಟ್ಟ ಮಕ್ಕಳೂ ಬ್ಯಾಟು-ಬಾಲು ಹಿಡಿದು ಆಡತೊಡಗಿದರು. ಅಂದರೆ ಅಷ್ಟರಮಟ್ಟಿಗೆ ಕಪಿಲ್​ ಪಡೆಯ ಗೆಲುವು ಪ್ರಭಾವ ಬೀರಿತ್ತು. ಇನ್ನು ಕ್ರಿಕೆಟ್​ ಆಟವನ್ನು ಪರಿಗಣಿಸಿದಾಗ ಮೈದಾನದ ಆಚೆಗೆ ಅದರ ರೂಪುರೇಷೆಗಳೇ ಬದಲಾದವು. ವಾಣಿಜ್ಯ ರಂಗದಲ್ಲಂತೂ ಅಪರಿಮಿತ ಸಾಧ್ಯತೆಗಳನ್ನು ತೆರೆದಿಟ್ಟಿತು. ಅಂದರೆ ಒಟ್ಟಾರೆಯಾಗಿ ಕ್ರಿಕೆಟ್​​ ಜಗತ್ತಿಗೆ ಜೀವ ಚೈತನ್ಯ ತುಂಬಿತು.

ಧೋನಿ ಪಡೆ ಚೊಚ್ಚಲ T20 ವಿಶ್ವ ಕಪ್ ಗೆದ್ದಾಗಲೂ ಕ್ರಿಕೆಟ್​ ಸ್ವರೂಪವೇ ಬದಲಾಯಿತು ಎಕ್ಸಾಕ್ಟ್​ಲಿ ಈಗಲೂ ಅದೇ ಅವಕಾಶ ಒದಗಿಬಂದಿದೆ. 1983 World Cup ಗೆಲುವು ಟೆಸ್ಟ್​ ಕ್ರಿಕೆಟ್​​ ಅನ್ನು ಮರೆಮಾಚಿ, ಸೀಮಿತ ಓವರುಗಳ ಆರ್ಭಟಕ್ಕೆ ನಾಂದಿ ಹಾಡಿತು ಅನ್ನಬಹುದು. ಆದರೆ ಈಗ ಅದರ ರಿವರ್ಸ್​ ಆ್ಯಕ್ಷನ್​ ಆಗಬೇಕಿದೆ. ಇದೇನು ಈಗ ಸೀಮಿತ ಓವರುಗಳ ಆರ್ಭಟ ನಡೆದಿದೆ, ಅದರ ಜೊತೆಜೊತೆಗೆ ಸಾಂಪ್ರದಾಯಿಕ ಟೆಸ್ಟ್ ​ಕ್ರಿಕೆಟ್​ ಮತ್ತೆ ಜೀವಂತಿಕೆ ಪಡೆಯಬೇಕಿದೆ. ಮತ್ತು 1983ರಲ್ಲಿ ನಡೆದ ಪವಾಡದಂತೆ ಅದು ಈ ಬಾರಿಯೂ ಭಾರತದಿಂದಲೇ ಆಗಬೇಕಿದೆ. 2007ರಲ್ಲಿ ಧೋನಿ ಪಡೆ T20 ವಿಶ್ವ ಕಪ್ ಗೆದ್ದಾಗಲಂತೂ ಕ್ರಿಕೆಟ್​ ಸ್ವರೂಪವೇ ಬದಲಾಗಿಬಿಟ್ಟಿತು. ಐಪಿಎಲ್ ನಂತಹ ಕ್ರಾಂತಿಕಾರಿ ಬದಲಾವಣೆಗಳು ಕಂಡುಬಂದವು.​​

ನ್ಯೂಜಿಲ್ಯಾಂಡ್​ ಗೆಲುವಿಗಿಂತ ಭಾರತ ಯಶಸ್ಸು ಸಾಧಿಸಿದರೆ ಅದು ಟೆಸ್ಟ್​ ಕ್ರಿಕೆಟ್​ಗೆ ಶ್ರೇಯಸ್ಕರ ಅಂದರೆ ಈಗಲೂ ಅಷ್ಟೇ.. ವಿರಾಟ್​ ಕೊಹ್ಲಿ ಸಾರಥ್ಯದಲ್ಲಿ ಭಾರತ ತಂಡ ಗೆದ್ದರೆ ಅದು ಟೆಸ್ಟ್​ ಕ್ರಿಕೆಟ್​​ ಜಗತ್ತಿನ ಮೇಲೆ ಅಪಾರ ಪ್ರಭಾವ ಬೀರಲಿದೆ. ಅಂದರೆ ನ್ಯೂಜಿಲ್ಯಾಂಡ್​ ಗೆಲುವು ಸಾಧಿಸುವುದಕ್ಕಿಂತ ಭಾರತ ಯಶಸ್ಸು ಸಾಧಿಸಿದರೆ ಅದು ಟೆಸ್ಟ್​ ಕ್ರಿಕೆಟ್​ಗೆ ಶ್ರೇಯಸ್ಕರ. ಏಕೆಂದರೆ ಪುಟ್ಟ ರಾಷ್ಟ್ರ ನ್ಯೂಜಿಲ್ಯಾಂಡ್ ಬೀಗುವುದಕ್ಕಿಂತ ಭಾರತ ಗೆದ್ದರೆ ಅದರ ತೂಕವೇ ಬೇರೆ ಆಗಿರುತ್ತದೆ. ಇದು ಸ್ವತಃ ಅಂತಾರಾಷ್ಟ್ರೀಯ ಕ್ರಿಕೆಟ್​ ಕೌನ್ಸಿಲ್ (ICC)​ ಗೂ ಚೆನ್ನಾಗಿ ಗೊತ್ತಾಗಿದೆ. ಹಾಗಾಗಿಯೇ ಮೊಟ್ಟಮೊದಲ ಬಾರಿಗೆ ಟೆಸ್ಟ್​ ಕ್ರಿಕೆಟ್​ನಲ್ಲಿ ಇಂತಹ ಪಂದ್ಯಾವಳಿಯನ್ನು ಆಯೋಜಿಸಿದೆ. ಟೆಸ್ಟ್ ಕ್ರಿಕೆಟ್​ ಪುನ:ಶ್ಚೇತನಕ್ಕಾಗಿಯೇ ಇಂತಹ ಚೊಚ್ಚಲ ಚಾಂಪಿಯನ್​ಶಿಪ್​ ಆಯೋಜಿಸಿದೆ ಅಂದರೆ ತಪ್ಪಾಗಲಾರದು. ​

ಸೀಮಿತ ಓವರುಗಳ ಆರ್ಭಟದಲ್ಲಿ ನಶಿಸುತ್ತಿರುವ ಸಾಂಪ್ರದಾಯಿಕ ಟೆಸ್ಟ್ ಕ್ರಿಕೆಟ್ ಬಾರಿ ಕೊಹ್ಲಿ ಪಡೆ ಗೆದ್ದರೆ ಅನೇಕ ಯುವ ಪೀಳಿಗೆಗಳು ಮತ್ತೆ ದೀರ್ಘಾವಧಿ ಕಾಲ ಆಟದ ಮೈದಾನದಲ್ಲಿ ಬ್ಯಾಟ್​-ಬಾಲ್​ ಹಿಡಿದು ಆಡತೊಡಗುತ್ತಾರೆ. ಇಲ್ಲಾಂದ್ರೆ ಭ್ರಮನಿರಸನಗೊಂಡು ಇಂದಿನ ಫಾಸ್ಟ್​​ ಯುಗಕ್ಕೆ ತಕ್ಕಂತೆ ಅದೇ ಸೀಮಿತ ಓವರುಗಳ ಪಂದ್ಯಗಳಿಗೆ ಜೋತುಬೀಳುತ್ತಾರೆ. ಹಾಗಾಗದಿರಲಿ… ನಮ್ಮ ನೆಚ್ಚಿನ ಭಾರತ ತಂಡ ಗೆದ್ದು ಬೀಗಲಿ ಎಂಬುದೇ ನೂರಾರು ಕೋಟಿ ಭಾರತೀಯರ ಹೃದಯಾಳದ ಬಯಕೆ.

(ICC WTC Final 2021: what does it mean to test cricket if team india win inaugural WTC)

Published On - 11:30 am, Fri, 18 June 21

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?