AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC 2021: ನಶಿಸುತ್ತಿರುವ ಸಾಂಪ್ರದಾಯಿಕ ಟೆಸ್ಟ್ ಕ್ರಿಕೆಟ್​ಗೆ ಇಂದಿನ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ ಜೀವ ತುಂಬುವುದೇ?

ICC World Test Championship Final 2021: ಅಂದರೆ ಈಗಲೂ ಅಷ್ಟೇ.. ವಿರಾಟ್​ ಕೊಹ್ಲಿ ಸಾರಥ್ಯದಲ್ಲಿ ಭಾರತ ತಂಡ ಗೆದ್ದರೆ ಅದು ಟೆಸ್ಟ್​ ಕ್ರಿಕೆಟ್​​ ಜಗತ್ತಿನ ಮೇಲೆ ಅಪಾರ ಪ್ರಭಾವ ಬೀರಲಿದೆ. ಅಂದರೆ ನ್ಯೂಜಿಲ್ಯಾಂಡ್​ ಗೆಲುವು ಸಾಧಿಸುವುದಕ್ಕಿಂತ ಭಾರತ ಯಶಸ್ಸು ಸಾಧಿಸಿದರೆ ಅದು ಟೆಸ್ಟ್​ ಕ್ರಿಕೆಟ್​ಗೆ ಶ್ರೇಯಸ್ಕರ. ಏಕೆಂದರೆ ಪುಟ್ಟ ರಾಷ್ಟ್ರ ನ್ಯೂಜಿಲ್ಯಾಂಡ್ ಬೀಗುವುದಕ್ಕಿಂತ ಭಾರತ ಗೆದ್ದರೆ ಅದರ ತೂಕವೇ ಬೇರೆ ಆಗಿರುತ್ತದೆ.

WTC 2021: ನಶಿಸುತ್ತಿರುವ ಸಾಂಪ್ರದಾಯಿಕ ಟೆಸ್ಟ್ ಕ್ರಿಕೆಟ್​ಗೆ ಇಂದಿನ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ ಜೀವ ತುಂಬುವುದೇ?
ನ್ಯೂಜಿಲ್ಯಾಂಡ್​ ಗೆಲುವು ಸಾಧಿಸುವುದಕ್ಕಿಂತ ಭಾರತ ಯಶಸ್ಸು ಸಾಧಿಸಿದರೆ ಅದು ಟೆಸ್ಟ್​ ಕ್ರಿಕೆಟ್​ಗೆ ಶ್ರೇಯಸ್ಕರ
ಸಾಧು ಶ್ರೀನಾಥ್​
|

Updated on:Jun 18, 2021 | 11:38 AM

Share

ಸೌಥಾಂಪ್ಟನ್​​ ಕ್ರಿಕೆಟ್​ ಮೈದಾನ (Ageas Bowl, Southampton) ಇಂದು ಐತಿಹಾಸಿಕ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಅಂತಾರಾಷ್ಟ್ರೀಯ ಕ್ರಿಕೆಟ್​ ಕೌನ್ಸಿಲ್ (ICC)​ ಮಹತ್ತರ ಉದ್ದೇಶದಿಂದ ಆಯೋಜಿಸಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ ಇದಾಗಿದೆ. ಇದರ ಸದುದ್ದೇಶ ಇಷ್ಟೇ… ಸೀಮಿತ ಓವರುಗಳ ಆರ್ಭಟದಲ್ಲಿ ನಶಿಸುತ್ತಿರುವ ಸಾಂಪ್ರದಾಯಿಕ ಟೆಸ್ಟ್ ಕ್ರಿಕೆಟ್​ಗೆ ಮರುಜೀವ ತುಂಬುವ ಪ್ರಯತ್ನ ಇದಾಗಿದೆ. ಇದರಿಂದ ಟೆಸ್ಟ್ ಕ್ರಿಕೆಟ್​ ಜಗತ್ತಿಗೆ ಏನಾದೀತು!?

1983 World Cup ಮ್ಯಾಜಿಕ್​​ಗೆ ಘಟಿಸುವುದೇ? ಅದಕ್ಕೂ ಮುನ್ನ ಸರಿಯಾಗಿ ಇದೇ ತಿಂಗಳಲ್ಲಿ 1983ರಲ್ಲಿ ಕಪಿಲ್​ ದೇವ್​ ನೇತೃತ್ವದಲ್ಲಿ ಭಾರತ ಗೆದ್ದು ಬೀಗಿದಾಗ ಕ್ರಿಕೆಟ್​ ಜಗತ್ತಿನ ಮೇಲೆ ಅದರ ಪರಿಣಾಮ/ಪ್ರಭಾವಗಳು ಅಗಾಧವಾಗಿದ್ದವು. ಭಾರತಕ್ಕಂತೂ ಕ್ರಿಕೆಟ್​ ಧರ್ಮವಾಗಿ ಪರಿವರ್ತನೆಗೊಂಡಿತು. ಚಿಕ್ಕಪುಟ್ಟ ಮಕ್ಕಳೂ ಬ್ಯಾಟು-ಬಾಲು ಹಿಡಿದು ಆಡತೊಡಗಿದರು. ಅಂದರೆ ಅಷ್ಟರಮಟ್ಟಿಗೆ ಕಪಿಲ್​ ಪಡೆಯ ಗೆಲುವು ಪ್ರಭಾವ ಬೀರಿತ್ತು. ಇನ್ನು ಕ್ರಿಕೆಟ್​ ಆಟವನ್ನು ಪರಿಗಣಿಸಿದಾಗ ಮೈದಾನದ ಆಚೆಗೆ ಅದರ ರೂಪುರೇಷೆಗಳೇ ಬದಲಾದವು. ವಾಣಿಜ್ಯ ರಂಗದಲ್ಲಂತೂ ಅಪರಿಮಿತ ಸಾಧ್ಯತೆಗಳನ್ನು ತೆರೆದಿಟ್ಟಿತು. ಅಂದರೆ ಒಟ್ಟಾರೆಯಾಗಿ ಕ್ರಿಕೆಟ್​​ ಜಗತ್ತಿಗೆ ಜೀವ ಚೈತನ್ಯ ತುಂಬಿತು.

ಧೋನಿ ಪಡೆ ಚೊಚ್ಚಲ T20 ವಿಶ್ವ ಕಪ್ ಗೆದ್ದಾಗಲೂ ಕ್ರಿಕೆಟ್​ ಸ್ವರೂಪವೇ ಬದಲಾಯಿತು ಎಕ್ಸಾಕ್ಟ್​ಲಿ ಈಗಲೂ ಅದೇ ಅವಕಾಶ ಒದಗಿಬಂದಿದೆ. 1983 World Cup ಗೆಲುವು ಟೆಸ್ಟ್​ ಕ್ರಿಕೆಟ್​​ ಅನ್ನು ಮರೆಮಾಚಿ, ಸೀಮಿತ ಓವರುಗಳ ಆರ್ಭಟಕ್ಕೆ ನಾಂದಿ ಹಾಡಿತು ಅನ್ನಬಹುದು. ಆದರೆ ಈಗ ಅದರ ರಿವರ್ಸ್​ ಆ್ಯಕ್ಷನ್​ ಆಗಬೇಕಿದೆ. ಇದೇನು ಈಗ ಸೀಮಿತ ಓವರುಗಳ ಆರ್ಭಟ ನಡೆದಿದೆ, ಅದರ ಜೊತೆಜೊತೆಗೆ ಸಾಂಪ್ರದಾಯಿಕ ಟೆಸ್ಟ್ ​ಕ್ರಿಕೆಟ್​ ಮತ್ತೆ ಜೀವಂತಿಕೆ ಪಡೆಯಬೇಕಿದೆ. ಮತ್ತು 1983ರಲ್ಲಿ ನಡೆದ ಪವಾಡದಂತೆ ಅದು ಈ ಬಾರಿಯೂ ಭಾರತದಿಂದಲೇ ಆಗಬೇಕಿದೆ. 2007ರಲ್ಲಿ ಧೋನಿ ಪಡೆ T20 ವಿಶ್ವ ಕಪ್ ಗೆದ್ದಾಗಲಂತೂ ಕ್ರಿಕೆಟ್​ ಸ್ವರೂಪವೇ ಬದಲಾಗಿಬಿಟ್ಟಿತು. ಐಪಿಎಲ್ ನಂತಹ ಕ್ರಾಂತಿಕಾರಿ ಬದಲಾವಣೆಗಳು ಕಂಡುಬಂದವು.​​

ನ್ಯೂಜಿಲ್ಯಾಂಡ್​ ಗೆಲುವಿಗಿಂತ ಭಾರತ ಯಶಸ್ಸು ಸಾಧಿಸಿದರೆ ಅದು ಟೆಸ್ಟ್​ ಕ್ರಿಕೆಟ್​ಗೆ ಶ್ರೇಯಸ್ಕರ ಅಂದರೆ ಈಗಲೂ ಅಷ್ಟೇ.. ವಿರಾಟ್​ ಕೊಹ್ಲಿ ಸಾರಥ್ಯದಲ್ಲಿ ಭಾರತ ತಂಡ ಗೆದ್ದರೆ ಅದು ಟೆಸ್ಟ್​ ಕ್ರಿಕೆಟ್​​ ಜಗತ್ತಿನ ಮೇಲೆ ಅಪಾರ ಪ್ರಭಾವ ಬೀರಲಿದೆ. ಅಂದರೆ ನ್ಯೂಜಿಲ್ಯಾಂಡ್​ ಗೆಲುವು ಸಾಧಿಸುವುದಕ್ಕಿಂತ ಭಾರತ ಯಶಸ್ಸು ಸಾಧಿಸಿದರೆ ಅದು ಟೆಸ್ಟ್​ ಕ್ರಿಕೆಟ್​ಗೆ ಶ್ರೇಯಸ್ಕರ. ಏಕೆಂದರೆ ಪುಟ್ಟ ರಾಷ್ಟ್ರ ನ್ಯೂಜಿಲ್ಯಾಂಡ್ ಬೀಗುವುದಕ್ಕಿಂತ ಭಾರತ ಗೆದ್ದರೆ ಅದರ ತೂಕವೇ ಬೇರೆ ಆಗಿರುತ್ತದೆ. ಇದು ಸ್ವತಃ ಅಂತಾರಾಷ್ಟ್ರೀಯ ಕ್ರಿಕೆಟ್​ ಕೌನ್ಸಿಲ್ (ICC)​ ಗೂ ಚೆನ್ನಾಗಿ ಗೊತ್ತಾಗಿದೆ. ಹಾಗಾಗಿಯೇ ಮೊಟ್ಟಮೊದಲ ಬಾರಿಗೆ ಟೆಸ್ಟ್​ ಕ್ರಿಕೆಟ್​ನಲ್ಲಿ ಇಂತಹ ಪಂದ್ಯಾವಳಿಯನ್ನು ಆಯೋಜಿಸಿದೆ. ಟೆಸ್ಟ್ ಕ್ರಿಕೆಟ್​ ಪುನ:ಶ್ಚೇತನಕ್ಕಾಗಿಯೇ ಇಂತಹ ಚೊಚ್ಚಲ ಚಾಂಪಿಯನ್​ಶಿಪ್​ ಆಯೋಜಿಸಿದೆ ಅಂದರೆ ತಪ್ಪಾಗಲಾರದು. ​

ಸೀಮಿತ ಓವರುಗಳ ಆರ್ಭಟದಲ್ಲಿ ನಶಿಸುತ್ತಿರುವ ಸಾಂಪ್ರದಾಯಿಕ ಟೆಸ್ಟ್ ಕ್ರಿಕೆಟ್ ಬಾರಿ ಕೊಹ್ಲಿ ಪಡೆ ಗೆದ್ದರೆ ಅನೇಕ ಯುವ ಪೀಳಿಗೆಗಳು ಮತ್ತೆ ದೀರ್ಘಾವಧಿ ಕಾಲ ಆಟದ ಮೈದಾನದಲ್ಲಿ ಬ್ಯಾಟ್​-ಬಾಲ್​ ಹಿಡಿದು ಆಡತೊಡಗುತ್ತಾರೆ. ಇಲ್ಲಾಂದ್ರೆ ಭ್ರಮನಿರಸನಗೊಂಡು ಇಂದಿನ ಫಾಸ್ಟ್​​ ಯುಗಕ್ಕೆ ತಕ್ಕಂತೆ ಅದೇ ಸೀಮಿತ ಓವರುಗಳ ಪಂದ್ಯಗಳಿಗೆ ಜೋತುಬೀಳುತ್ತಾರೆ. ಹಾಗಾಗದಿರಲಿ… ನಮ್ಮ ನೆಚ್ಚಿನ ಭಾರತ ತಂಡ ಗೆದ್ದು ಬೀಗಲಿ ಎಂಬುದೇ ನೂರಾರು ಕೋಟಿ ಭಾರತೀಯರ ಹೃದಯಾಳದ ಬಯಕೆ.

(ICC WTC Final 2021: what does it mean to test cricket if team india win inaugural WTC)

Published On - 11:30 am, Fri, 18 June 21

ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ