AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final: ನ್ಯೂಜಿಲೆಂಡ್ ವಿರುದ್ಧ ಟಾಸ್ ಸೋತ ಕೊಹ್ಲಿ! ಈ ಪಂದ್ಯದಲ್ಲಿ ಅಂಕಿ- ಅಂಶಗಳು ಸುಳ್ಳಾಗಲಿ

WTC Final: ಈ 5 ಟೆಸ್ಟ್ ಪಂದ್ಯಗಳಲ್ಲಿ 3 ರಲ್ಲಿ ಭಾರತ ಜಯ ಸಾಧಿಸಿದೆ. ಆದರೆ ವಿರಾಟ್ ಕೊಹ್ಲಿ ಈ ಮೂರು ಟೆಸ್ಟ್ ಪಂದ್ಯಗಳಲ್ಲಿ ಟಾಸ್ ಗೆದ್ದಿದ್ದಾರೆ. ಅದೇ ಸಮಯದಲ್ಲಿ, ಭಾರತ ಸೋತ 2 ಪಂದ್ಯಗಳಲ್ಲಿ ಕೊಹ್ಲಿ ಟಾಸ್ ಸೋತಿದ್ದಾರೆ.

WTC Final: ನ್ಯೂಜಿಲೆಂಡ್ ವಿರುದ್ಧ ಟಾಸ್ ಸೋತ ಕೊಹ್ಲಿ! ಈ ಪಂದ್ಯದಲ್ಲಿ ಅಂಕಿ- ಅಂಶಗಳು ಸುಳ್ಳಾಗಲಿ
ಕೇನ್ ವಿಲಿಯಮ್ಸನ್, ವಿರಾಟ್ ಕೊಹ್ಲಿ ಟ್ರೋಪಿಯೊಂದಿಗೆ
ಪೃಥ್ವಿಶಂಕರ
|

Updated on: Jun 19, 2021 | 3:36 PM

Share

ಎರಡು ವರ್ಷಗಳ ಕಾಲ ನಡೆದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂತಿಮ ಪಂದ್ಯ ಸೌತಾಂಪ್ಟನ್‌ನಲ್ಲಿ ಪ್ರಾರಂಭವಾಗಿದೆ. ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದ ಮೊದಲ ದಿನ ಮಳೆಯಿಂದಾಗಿ ರದ್ದಾಯಿತು. ಟಾಸ್ ಪ್ರಕ್ರಿಯೆ ನಡೆದು ಪಂದ್ಯ ಪ್ರಾರಂಭವಾಗಿದೆ. ಆದರೆ, ಈ ಮಹಾನ್ ಪಂದ್ಯ ಪ್ರಾರಂಭವಾಗುವ ಮೊದಲು, ವಿರಾಟ್ ಕೊಹ್ಲಿಯೊಂದಿಗೆ ಸೌತಾಂಪ್ಟನ್ ಮೈದಾನದಲ್ಲಿ ಒಂದು ಘಟನೆ ಸಂಭವಿಸಿದೆ. ಕ್ಯಾಪ್ಟನ್ ಕೊಹ್ಲಿಯ ಇತಿಹಾಸ ಗಮನಿಸಿದಾಗ ಇದು ಈ ಮಹಾನ್ ಪಂದ್ಯದ ಮೇಲೂ ಪರಿಣಾಮ ಬೀರುವ ಆತಂಕ ಶುರುವಾಗಿದೆ.

ಟಾಸ್ ವೇಳೆ ಭಾರತದ ನಾಯಕ ವಿರಾಟ್ ಕೊಹ್ಲಿಗೆ ಮತ್ತೊಮ್ಮೆ ಅದೃಷ್ಟ ಕೈಕೊಟ್ಟಿದೆ. ಟಾಸ್ಗಾಗಿ ನಾಣ್ಯವನ್ನು ಎಸೆದಾಗ, ಫಲಿತಾಂಶವು ಕೊಹ್ಲಿಯ ಪರವಾಗಿ ಬರಲಿಲ್ಲ. ಬದಲಿಗೆ, ನ್ಯೂಜಿಲೆಂಡ್ ನಾಯಕ ವಿಲಿಯಮ್ಸನ್ ಪರ ಹೋಯಿತು. ಈ ಪಂದ್ಯದಲ್ಲಿ ಗೆಲುವಿನ ಹಾದಿಗೆ ಅಡ್ಡಿಯಾಗುವ ಏಕೈಕ ಅವ್ಯವಸ್ಥೆ ಇದು. ಇದರ ಒಂದು ಪರಿಣಾಮವೆಂದರೆ, ಎಲ್ಲಾ ಅನುಭವಿಗಳು ಸೇರಿದಂತೆ ವಿರಾಟ್ ಕೊಹ್ಲಿ ಸ್ವತಃ ಪಂದ್ಯದಲ್ಲಿ ಮೊದಲು ಬೌಲಿಂಗ್ ಮಾಡಲು ಬಯಸಿದ್ದು ಇದರಿಂದ ಹಾಳಾಯಿತು.

ಟಾಸ್ ಸೋತರೆ ಪಂದ್ಯದ ಮೇಲೆ ಎಷ್ಟು ಪರಿಣಾಮ ಬೀರಬಹುದು? ಸೌತಾಂಪ್ಟನ್‌ನಲ್ಲಿ ಟಾಸ್ ಕಳೆದುಕೊಂಡ ದೊಡ್ಡ ಪರಿಣಾಮ ಏನು ಎಂಬುದರ ಬಗ್ಗೆ ಗಮನ ಹರಿಸಿದರೆ, ಈ ಅಂಕಿ ಅಂಶದಿಂದ ಭಾರತೀಯ ಅಭಿಮಾನಿಗಳಿಗೆ ಕೊಂಚ ನಿರಾಸೆಯಾಗಬಹುದು. ವಾಸ್ತವವಾಗಿ, ವಿರಾಟ್ ಕೊಹ್ಲಿ ಟಾಸ್ ಗೆದ್ದಾಗ ಮಾತ್ರ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಗೆದ್ದಿದ್ದಾರೆ. ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ಇದುವರೆಗೆ ನ್ಯೂಜಿಲೆಂಡ್ ವಿರುದ್ಧ 5 ಟೆಸ್ಟ್ ಪಂದ್ಯಗಳನ್ನು ಆಡಿದೆ. ಈ 5 ಟೆಸ್ಟ್ ಪಂದ್ಯಗಳಲ್ಲಿ 3 ರಲ್ಲಿ ಭಾರತ ಜಯ ಸಾಧಿಸಿದೆ. ಆದರೆ ವಿರಾಟ್ ಕೊಹ್ಲಿ ಈ ಮೂರು ಟೆಸ್ಟ್ ಪಂದ್ಯಗಳಲ್ಲಿ ಟಾಸ್ ಗೆದ್ದಿದ್ದಾರೆ. ಅದೇ ಸಮಯದಲ್ಲಿ, ಭಾರತ ಸೋತ 2 ಪಂದ್ಯಗಳಲ್ಲಿ ಕೊಹ್ಲಿ ಟಾಸ್ ಸೋತಿದ್ದಾರೆ.

ಟಾಸ್ ಇತಿಹಾಸ ಬದಲಾಯಿಸಿ, ಸೌತಾಂಪ್ಟನ್ನಲ್ಲಿ ಇತಿಹಾಸ ರಚಿಸಿ ಈಗ ಸೌತಾಂಪ್ಟನ್‌ನಲ್ಲೂ ಇದೇ ಪ್ರವೃತ್ತಿ ಮುಂದುವರಿದರೆ, ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಭಾರತ ತಪ್ಪಿಸಿಕೊಳ್ಳಬಹುದೆಂಬ ಭಯವಿದೆ. ಭಾರತ ಟೆಸ್ಟ್ ಕ್ರಿಕೆಟ್‌ನ ಮೊದಲ ವಿಶ್ವ ಚಾಂಪಿಯನ್ ಆಗಿ ಮುಂದುವರಿಯಬೇಕು. ಆದ್ದರಿಂದ, ವಿರಾಟ್ ಕೊಹ್ಲಿ ಸೌತಾಂಪ್ಟನ್‌ನಲ್ಲಿ ಇತಿಹಾಸವನ್ನು ರಚಿಸಬೇಕಾದರೆ, ಟಾಸ್ ಕಳೆದುಕೊಂಡು ನ್ಯೂಜಿಲೆಂಡ್ ವಿರುದ್ಧದ ಪಂದ್ಯವನ್ನು ಸೋತ ಇತಿಹಾಸವನ್ನು ಬದಲಾಯಿಸಬೇಕಾಗುತ್ತದೆ.

ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್