AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final: ನ್ಯೂಜಿಲೆಂಡ್ ವಿರುದ್ಧ ಟಾಸ್ ಸೋತ ಕೊಹ್ಲಿ! ಈ ಪಂದ್ಯದಲ್ಲಿ ಅಂಕಿ- ಅಂಶಗಳು ಸುಳ್ಳಾಗಲಿ

WTC Final: ಈ 5 ಟೆಸ್ಟ್ ಪಂದ್ಯಗಳಲ್ಲಿ 3 ರಲ್ಲಿ ಭಾರತ ಜಯ ಸಾಧಿಸಿದೆ. ಆದರೆ ವಿರಾಟ್ ಕೊಹ್ಲಿ ಈ ಮೂರು ಟೆಸ್ಟ್ ಪಂದ್ಯಗಳಲ್ಲಿ ಟಾಸ್ ಗೆದ್ದಿದ್ದಾರೆ. ಅದೇ ಸಮಯದಲ್ಲಿ, ಭಾರತ ಸೋತ 2 ಪಂದ್ಯಗಳಲ್ಲಿ ಕೊಹ್ಲಿ ಟಾಸ್ ಸೋತಿದ್ದಾರೆ.

WTC Final: ನ್ಯೂಜಿಲೆಂಡ್ ವಿರುದ್ಧ ಟಾಸ್ ಸೋತ ಕೊಹ್ಲಿ! ಈ ಪಂದ್ಯದಲ್ಲಿ ಅಂಕಿ- ಅಂಶಗಳು ಸುಳ್ಳಾಗಲಿ
ಕೇನ್ ವಿಲಿಯಮ್ಸನ್, ವಿರಾಟ್ ಕೊಹ್ಲಿ ಟ್ರೋಪಿಯೊಂದಿಗೆ
ಪೃಥ್ವಿಶಂಕರ
|

Updated on: Jun 19, 2021 | 3:36 PM

Share

ಎರಡು ವರ್ಷಗಳ ಕಾಲ ನಡೆದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂತಿಮ ಪಂದ್ಯ ಸೌತಾಂಪ್ಟನ್‌ನಲ್ಲಿ ಪ್ರಾರಂಭವಾಗಿದೆ. ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದ ಮೊದಲ ದಿನ ಮಳೆಯಿಂದಾಗಿ ರದ್ದಾಯಿತು. ಟಾಸ್ ಪ್ರಕ್ರಿಯೆ ನಡೆದು ಪಂದ್ಯ ಪ್ರಾರಂಭವಾಗಿದೆ. ಆದರೆ, ಈ ಮಹಾನ್ ಪಂದ್ಯ ಪ್ರಾರಂಭವಾಗುವ ಮೊದಲು, ವಿರಾಟ್ ಕೊಹ್ಲಿಯೊಂದಿಗೆ ಸೌತಾಂಪ್ಟನ್ ಮೈದಾನದಲ್ಲಿ ಒಂದು ಘಟನೆ ಸಂಭವಿಸಿದೆ. ಕ್ಯಾಪ್ಟನ್ ಕೊಹ್ಲಿಯ ಇತಿಹಾಸ ಗಮನಿಸಿದಾಗ ಇದು ಈ ಮಹಾನ್ ಪಂದ್ಯದ ಮೇಲೂ ಪರಿಣಾಮ ಬೀರುವ ಆತಂಕ ಶುರುವಾಗಿದೆ.

ಟಾಸ್ ವೇಳೆ ಭಾರತದ ನಾಯಕ ವಿರಾಟ್ ಕೊಹ್ಲಿಗೆ ಮತ್ತೊಮ್ಮೆ ಅದೃಷ್ಟ ಕೈಕೊಟ್ಟಿದೆ. ಟಾಸ್ಗಾಗಿ ನಾಣ್ಯವನ್ನು ಎಸೆದಾಗ, ಫಲಿತಾಂಶವು ಕೊಹ್ಲಿಯ ಪರವಾಗಿ ಬರಲಿಲ್ಲ. ಬದಲಿಗೆ, ನ್ಯೂಜಿಲೆಂಡ್ ನಾಯಕ ವಿಲಿಯಮ್ಸನ್ ಪರ ಹೋಯಿತು. ಈ ಪಂದ್ಯದಲ್ಲಿ ಗೆಲುವಿನ ಹಾದಿಗೆ ಅಡ್ಡಿಯಾಗುವ ಏಕೈಕ ಅವ್ಯವಸ್ಥೆ ಇದು. ಇದರ ಒಂದು ಪರಿಣಾಮವೆಂದರೆ, ಎಲ್ಲಾ ಅನುಭವಿಗಳು ಸೇರಿದಂತೆ ವಿರಾಟ್ ಕೊಹ್ಲಿ ಸ್ವತಃ ಪಂದ್ಯದಲ್ಲಿ ಮೊದಲು ಬೌಲಿಂಗ್ ಮಾಡಲು ಬಯಸಿದ್ದು ಇದರಿಂದ ಹಾಳಾಯಿತು.

ಟಾಸ್ ಸೋತರೆ ಪಂದ್ಯದ ಮೇಲೆ ಎಷ್ಟು ಪರಿಣಾಮ ಬೀರಬಹುದು? ಸೌತಾಂಪ್ಟನ್‌ನಲ್ಲಿ ಟಾಸ್ ಕಳೆದುಕೊಂಡ ದೊಡ್ಡ ಪರಿಣಾಮ ಏನು ಎಂಬುದರ ಬಗ್ಗೆ ಗಮನ ಹರಿಸಿದರೆ, ಈ ಅಂಕಿ ಅಂಶದಿಂದ ಭಾರತೀಯ ಅಭಿಮಾನಿಗಳಿಗೆ ಕೊಂಚ ನಿರಾಸೆಯಾಗಬಹುದು. ವಾಸ್ತವವಾಗಿ, ವಿರಾಟ್ ಕೊಹ್ಲಿ ಟಾಸ್ ಗೆದ್ದಾಗ ಮಾತ್ರ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಗೆದ್ದಿದ್ದಾರೆ. ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ಇದುವರೆಗೆ ನ್ಯೂಜಿಲೆಂಡ್ ವಿರುದ್ಧ 5 ಟೆಸ್ಟ್ ಪಂದ್ಯಗಳನ್ನು ಆಡಿದೆ. ಈ 5 ಟೆಸ್ಟ್ ಪಂದ್ಯಗಳಲ್ಲಿ 3 ರಲ್ಲಿ ಭಾರತ ಜಯ ಸಾಧಿಸಿದೆ. ಆದರೆ ವಿರಾಟ್ ಕೊಹ್ಲಿ ಈ ಮೂರು ಟೆಸ್ಟ್ ಪಂದ್ಯಗಳಲ್ಲಿ ಟಾಸ್ ಗೆದ್ದಿದ್ದಾರೆ. ಅದೇ ಸಮಯದಲ್ಲಿ, ಭಾರತ ಸೋತ 2 ಪಂದ್ಯಗಳಲ್ಲಿ ಕೊಹ್ಲಿ ಟಾಸ್ ಸೋತಿದ್ದಾರೆ.

ಟಾಸ್ ಇತಿಹಾಸ ಬದಲಾಯಿಸಿ, ಸೌತಾಂಪ್ಟನ್ನಲ್ಲಿ ಇತಿಹಾಸ ರಚಿಸಿ ಈಗ ಸೌತಾಂಪ್ಟನ್‌ನಲ್ಲೂ ಇದೇ ಪ್ರವೃತ್ತಿ ಮುಂದುವರಿದರೆ, ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಭಾರತ ತಪ್ಪಿಸಿಕೊಳ್ಳಬಹುದೆಂಬ ಭಯವಿದೆ. ಭಾರತ ಟೆಸ್ಟ್ ಕ್ರಿಕೆಟ್‌ನ ಮೊದಲ ವಿಶ್ವ ಚಾಂಪಿಯನ್ ಆಗಿ ಮುಂದುವರಿಯಬೇಕು. ಆದ್ದರಿಂದ, ವಿರಾಟ್ ಕೊಹ್ಲಿ ಸೌತಾಂಪ್ಟನ್‌ನಲ್ಲಿ ಇತಿಹಾಸವನ್ನು ರಚಿಸಬೇಕಾದರೆ, ಟಾಸ್ ಕಳೆದುಕೊಂಡು ನ್ಯೂಜಿಲೆಂಡ್ ವಿರುದ್ಧದ ಪಂದ್ಯವನ್ನು ಸೋತ ಇತಿಹಾಸವನ್ನು ಬದಲಾಯಿಸಬೇಕಾಗುತ್ತದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ