AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC World Test Championship: ‘ಫೈನಲ್​ನಲ್ಲಿ ನ್ಯೂಜಿಲ್ಯಾಂಡ್​ ತಂಡವನ್ನು ಮಣಿಸಲು ಭಾರತ ಇಷ್ಟು ಮಾಡಿದರೆ ಸಾಕು!’

ಇತ್ತೀಚಿನ ಆಸ್ಟ್ರೇಲಿಯಾ ಪ್ರವಾಸದಲ್ಲಿ ನಮ್ಮ ಆಟಗಾರರು ಎಂತಹ ಪ್ರತಿಕೂಲ ಪರಿಸ್ಥಿತಿಯಲ್ಲಿದ್ದರು. ಆದರೂ ಎದೆಗುಂದದೆ ಪರಾಕ್ರಮಿಗಳಾದರು. ಒಟ್ಟಿನಲ್ಲಿ ನಮ್ಮ ತಂಡ ತನ್ನ ಹಾಲಿ ಸಾಮರ್ಥ್ಯಕ್ಕೆ ತಕ್ಕಂತೆ ಆಡಿಬಿಟ್ಟರೆ ಜಯ ಕಟ್ಟಿಟ್ಟಬುತ್ತಿ ಎಂದು ಥಮ್ಸ್​ಅಪ್​ ಮಾಡುತ್ತಾರೆ ಮಾಜಿ ಕ್ರಿಕೆಟಿಗ ರಿತೀಂದರ್​ ಸಿಂಗ್​ ಸೋಧಿ.

ICC World Test Championship: ‘ಫೈನಲ್​ನಲ್ಲಿ ನ್ಯೂಜಿಲ್ಯಾಂಡ್​ ತಂಡವನ್ನು ಮಣಿಸಲು ಭಾರತ ಇಷ್ಟು ಮಾಡಿದರೆ ಸಾಕು!’
ಚೊಚ್ಚಲ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:May 12, 2021 | 2:15 PM

Share

ಚೊಚ್ಚಲ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ಗೆ ವೇದಿಕೆ ಸಜ್ಜಾಗುತ್ತಿದೆ. ಭಾರತ ಮತ್ತು ನ್ಯೂಜಿಲ್ಯಾಂಡ್​ ತಂಡಗಳು ವಿಶ್ವ ಮುಕುಟ ಧರಿಸಲು ಸೆಣಸಾಟ ನಡೆಸಲಿವೆ. ಆ ಪಟ್ಟ ಗಿಟ್ಟಿಸಲು ಭಾರತ ತಂಡ ಇಷ್ಟು ಮಾಡಿದರೆ ಸಾಕು ಅಂತಿದ್ದಾರೆ ಮಾಜಿ ಕ್ರಿಕೆಟಿಗ ರಿತೀಂದರ್​ ಸಿಂಗ್​ ಸೋಧಿ. ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ಗಾಗಿ ನ್ಯೂಜಿಲ್ಯಾಂಡ್ ತಂಡದ ವಿರುದ್ಧ ಸೆಣೆಸಾಡಲು ಯಾವುದೇ ಕಂಡೀಷನ್​ಗೆ ಒಗ್ಗಿಕೊಳ್ಳಬಲ್ಲ ಆಟಗಾರರು ವಿರಾಟ್​ ಕೊಹ್ಲಿ ನೇತೃತ್ವದಲ್ಲಿ ಭಾರತ ತಂಡದಲ್ಲಿದ್ದಾರೆ ಅನ್ನುತ್ತಾರೆ ರಿತೀಂದರ್​ ಸಿಂಗ್​ ಸೋಧಿ.

ಜೂನ್ 18ರಿಂದ ಇಂಗ್ಲೆಂಡ್​ನ ಸೌಥಾಂಪ್ಟನ್​ ಮೈದಾನದಲ್ಲಿ World Test Championship (WTC) ಟೆಸ್ಟ್​ ಪಂದ್ಯ ನಡೆಯಲಿದೆ. ಕೊಹ್ಲಿ ಅಂಡ್​ ಕಂಪನಿ ನ್ಯೂಜಿಲ್ಯಾಂಡ್​ ತಂಡವನ್ನು ಎದುರಿಸಲಿದೆ. ಇದಕ್ಕಾಗಿ ಭಾರತೀಯ ಕ್ರಿಕೆಟ್​ ಆಡಳಿತ ಮಂಡಳಿ ಬಿಸಿಸಿಐ (BCCI) 20 ಆಟಗಾರರನ್ನೊಳಗೊಂಡ ತಂಡವನ್ನು ಪ್ರಕಟಿಸಿದೆ. ಜೊತೆಗೆ ನಾಲ್ಕು ಮಂದಿ ರಿಸರ್ವ್​ ಆಟಗಾರರೂ ಇದ್ದಾರೆ.

ಈ ಸಂದರ್ಭದಲ್ಲಿ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿರುವ ಮಾಜಿ ಕ್ರಿಕೆಟಿಗ ರಿತೀಂದರ್​ ಸಿಂಗ್​ ಸೋಧಿ, WTC ಪಂದ್ಯ ಭಾರತದಲ್ಲಿ ನಡೆಯುವುದಲ್ಲ; ಅದು ಇಂಗ್ಲೆಂಡ್​ನಲ್ಲಿ ಜರುಗಲಿದೆ. ಅಲ್ಲಿನ ಮೈದಾನದ ವಾತಾವರಣ ಭಾರತ ತಂಡಕ್ಕೆ ಪ್ರತಿಕೂಲ ವಾತಾವರಣ (adverse conditions) ಎದುರುಗೊಳ್ಳಲಿದೆ. ಆದರೆ ಭಾರತ ತಂಡದ ಈಗಿನ ಮನಸ್ಥಿತಿ, ದೃಢತೆ, ಫಾರಂ ಅನ್ನು ಗಣನೆಗೆ ತೆಗೆದುಕೊಂಡಾಗ ಮತ್ತು ಭಾರತ ತಂಡ ಈಗಾಗಲೇ ಇಂತಹ ಪ್ರತಿಕೂಲ ವಾತಾವರಣದಲ್ಲಿ ಆಡಿ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿರುವುದರಿಂದ ಅದಕ್ಕೆ ಭಾರತ ತಂಡ ಈಗಾಗಲೇ ಒಗ್ಗಿಕೊಂಡಿದೆ ಎಂಬುದು ಅರಿವಿಗೆ ಬರುತ್ತದೆ. ಸಮರ್ಥ ಬೌಲರ್​ಗಳು ನಮ್ಮಲ್ಲಿದ್ದಾರೆ, ಬ್ಯಾಟಿಂಗ್​ ಅದ್ಭುತವಾಗಿದೆ, ಇನ್ನು ಟೆಸ್ಟ್​ ಮ್ಯಾಚ್​ಗಳಲ್ಲಿ ಸ್ಲಿಪ್​ ಕ್ಯಾಚಿಂಗ್ ಸಹ ಸುಧಾರಿಸಿದೆ ಎನ್ನುತ್ತಾರೆ.

Former cricketer Reetinder Singh Sodhi 1

ಭಾರತದ ಮಾಜಿ ಕ್ರಿಕೆಟಿಗ ರಿತೀಂದರ್​ ಸಿಂಗ್​ ಸೋಧಿ

ಪ್ರಚಲಿತ ಭಾರತ ತಂಡ ಒತ್ತಡದಲ್ಲಿ ಕುಸಿಯುವುದಿಲ್ಲ. ನಮ್ಮ ಆಟಗಾರರು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಆಡಿದರೆ ಚೊಚ್ಚಲ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ನಲ್ಲಿ ಭಾರತ ಗೆಲುವಿನ ಪತಾಕೆ ಹಾರಿಸಬಲ್ಲದು ಅನ್ನುತ್ತಾರೆ ಮಾಜಿ ಕ್ರಿಕೆಟಿಗ ರಿತೀಂದರ್​ ಸಿಂಗ್​ ಸೋಧಿ.

ಇದೇ ಪರಿಸ್ಥಿತಿಯನ್ನು ಹಿಂದಿನ ವರ್ಷಗಳಿಗೆ ಹೋಲಿಸಿ ನೋಡಿದರೆ ನಾವು ಪ್ರೆಷರ್​ನಲ್ಲಿ ಆಡುವಾಗ ವಿಫಲರಾಗುತ್ತಿದ್ದೆವು. ಏನೋ ಒಂದು ಸಮಸ್ಯೆ ಎದುರಾಗುತ್ತಿತ್ತು. ಆದರೆ ಈಗಿನ ತಂಡವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಅಂತಹ ಯಾವುದೇ ಪ್ರೆಷರ್​ ಇದ್ದರೂ ಅದನ್ನು ನೀಗಿಕೊಂಡು ಜಯ ಸಾಧಿಸಬಲ್ಲದು ಅಂತಾ ನನಗೆ ಅನ್ನಿಸುತ್ತದೆ. ತಾಜಾ ಉದಾಹರಣೆ ಅಂದ್ರೆ ಆಸ್ಟ್ರೇಲಿಯಾ ಪ್ರವಾಸ. ನಮ್ಮ ಆಟಗಾರರು ಎಂತಹ ಪ್ರತಿಕೂಲ ಪರಿಸ್ಥಿತಿಯಲ್ಲಿದ್ದರು. ಆದರೂ ಎದೆಗುಂದದೆ ಪರಾಕ್ರಮಿಗಳಾದರು. ಒಟ್ಟಿನಲ್ಲಿ ನಮ್ಮ ತಂಡ ತನ್ನ ಹಾಲಿ ಸಾಮರ್ಥ್ಯಕ್ಕೆ ತಕ್ಕಂತೆ ಆಡಿಬಿಟ್ಟರೆ ಜಯ ಕಟ್ಟಿಟ್ಟಬುತ್ತಿ ಎಂದು ಥಮ್ಸ್​ಅಪ್​ ಮಾಡುತ್ತಾರೆ ಮಾಜಿ ಕ್ರಿಕೆಟಿಗ ರಿತೀಂದರ್​ ಸಿಂಗ್​ ಸೋಧಿ.

(If India plays to their potential, the first World Test Championship will definitely be ours says Former cricketer Reetinder Singh Sodhi)

ಭಾರತದಲ್ಲಿ ಕ್ರಿಕೆಟ್​ ವ್ಯವಸ್ಥೆ ಬಲಿಷ್ಠವಾಗಿದ್ದು, ಉಚ್ಛ್ರಾಯ ಸ್ಥಿತಿಯಲ್ಲಿದೆ.. ಇದಕ್ಕೆ ಬಿಸಿಸಿಐ ದಾದಾ ಗಂಗೂಲಿ ಕೊಡುವ ಕಾರಣಗಳು ಏನು ಗೊತ್ತಾ!?

Published On - 4:35 pm, Tue, 11 May 21

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​