AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗರೂಗಳ ಬಾಲ ಕಟ್; 4ನೇ ಟೆಸ್ಟ್​ ಗೆದ್ದುಬೀಗಿದ ಭಾರತ: ಸರಣಿಯೂ ಬ್ಲೂ ಬಾಯ್ಸ್​ ಮಡಿಲಿಗೆ!

138 ಎಸೆತಗಳಲ್ಲಿ 89 ರನ್​ ಗಳಿಸಿ ಅಜೇಯರಾದ ರಿಷಬ್​ ಪಂತ್​ ಮತ್ತು 146 ಎಸೆತಗಳಲ್ಲಿ 91 ರನ್​ ಗಳಿಸಿದ ಶುಭ್​ಮನ್​ ಗಿಲ್​ ಎಲ್ಲರ ಗಮನ ಸೆಳೆದಿದ್ದಾರೆ. ಈ ಗೆಲುವಿನ ಮೂಲಕ ಟೆಸ್ಟ್​ ಸರಣಿ ಭಾರತದ ಪಾಲಾಗಿದೆ.

ಕಾಂಗರೂಗಳ ಬಾಲ ಕಟ್; 4ನೇ ಟೆಸ್ಟ್​ ಗೆದ್ದುಬೀಗಿದ ಭಾರತ: ಸರಣಿಯೂ ಬ್ಲೂ ಬಾಯ್ಸ್​ ಮಡಿಲಿಗೆ!
ಆಸಿಸ್​ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಗೆದ್ದು ಬೀಗಿದ ಭಾರತ
Skanda
| Updated By: ಸಾಧು ಶ್ರೀನಾಥ್​|

Updated on:Jan 19, 2021 | 3:38 PM

Share

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ಭಾರತ ವಿಜಯ ಸಾಧಿಸಿದೆ. ಕಾಂಗರೂ ಪಡೆ ನೀಡಿದ್ದ 328 ರನ್​ಗಳ ಗುರಿಯನ್ನು ಬೆನ್ನತ್ತಿದ ಭಾರತ 2ನೇ ಇನ್ನಿಂಗ್ಸ್​ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿಸಿ ಗೆಲುವು ದಕ್ಕಿಸಿಕೊಂಡಿದೆ. ಇನ್ನೂ 18 ಎಸೆತಗಳು ಬಾಕಿ ಇರುವಾಗಲೇ ಗೆಲುವಿನ ದಡ ಮುಟ್ಟಿದೆ. ಗೆಲ್ಲಲು 25 ಎಸೆತಕ್ಕೆ 10 ರನ್​ ಬಾಕಿ ಇರುವಾಗ ವಾಷಿಂಗ್ಟನ್​ ಸುಂದರ್​ ನಿರ್ಗಮಿಸಿದರಾದರೂ, ಅನಂತರ ಬಂದ ಶಾರ್ದೂಲ್​ ಠಾಕೂರ್, ರಿಷಬ್​ ಪಂತ್​ಗೆ ಸಾಥ್​ ನೀಡಿದರು.

138 ಎಸೆತಗಳಲ್ಲಿ 89 ರನ್​ ಗಳಿಸಿ ಅಜೇಯರಾದ ರಿಷಬ್​ ಪಂತ್​ ಮತ್ತು 146 ಎಸೆತಗಳಲ್ಲಿ 91 ರನ್​ ಗಳಿಸಿದ ಶುಭ್​ಮನ್​ ಗಿಲ್​ ಎಲ್ಲರ ಗಮನ ಸೆಳೆದಿದ್ದಾರೆ. ಈ ಗೆಲುವಿನ ಮೂಲಕ ಟೆಸ್ಟ್​ ಸರಣಿ ಭಾರತದ ಪಾಲಾಗಿದೆ. ವಿಶೇಷವೆಂದರೆ ಬ್ರಿಸ್ಬೇನ್​ನ ಗಬ್ಬಾ ಕ್ರೀಡಾಂಗಣದಲ್ಲಿ 32 ವರ್ಷಗಳ ಬಳಿಕ ಆಸ್ಟ್ರೇಲಿಯಾ ತಂಡ ಮಣ್ಣು ಮುಕ್ಕಿದೆ.

ಸರಣಿಯುದ್ದಕ್ಕೂ ಸ್ಲೆಡ್ಜಿಂಗ್ (Sledging) ​ ಮೂಲಕ ಭಾರತದ ಆಟಗಾರರರನ್ನು ಗೋಳು ಹೊಯ್ದುಕೊಂಡಿದ್ದ ಆಸ್ಟ್ರೇಲಿಯಾದ ಆಟಗಾರರಿಗೆ ಸರಣಿ ಸೋಲು ಉಣಿಸುವ ಮೂಲಕ ಭಾರತೀಯ ಆಟಗಾರರು ಸರಿಯಾಗಿ ನೀರು ಕುಡಿಸಿದ್ದಾರೆ.

ಪ್ರಧಾನ ಮಂತ್ರಿಗಳಿಂದ ಅಭಿನಂದನೆ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ವಿಜಯ ಸಾಧಿಸಿರುವ ಭಾರತ ತಂಡಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ಪಂದ್ಯದುದ್ದಕ್ಕೂ ಭಾರತೀಯ ಆಟಗಾರರು ಅತ್ಯುತ್ತಮ ಪ್ರದರ್ಶನ ತೋರಿದ್ದಾರೆ.

ಈ ಸರಣಿಯಲ್ಲಿ ಭಾರತ ತಂಡದ ಆಟಗಾರರು ತೋರಿದ ಉತ್ಸಾಹ ಮತ್ತು ಗೆಲುವಿನೆಡೆಗೆ ಸಾಗಿದ ಪರಿ ನಿಜಕ್ಕೂ ಅಭಿನಂದನೀಯ ಎಂದು ಬಣ್ಣಿಸಿರುವ ಮೋದಿ, ಟ್ವೀಟ್​ ಮಾಡುವ ಮೂಲಕ ಶುಭಾಶಯ ತಿಳಿಸಿದ್ದಾರೆ.

Published On - 1:08 pm, Tue, 19 January 21

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?