AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೌಲರ್​ಗಳ ಸಾಂಘಿಕ ದಾಳಿಗೆ ಬೆದರಿದ ಬಾಂಗ್ಲಾ; ಭಾರತಕ್ಕೆ 257 ರನ್​ಗಳ ಗೆಲುವಿನ ಗುರಿ

IND vs BAN, ICC World Cup 2023: ಪುಣೆಯಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ತಂಡ ಭಾರತದ ದಾಳಿಗೆ ನಲುಗಿ ನಿಗದಿತ 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 256 ಕಲೆಹಾಕಿದೆ.

ಬೌಲರ್​ಗಳ ಸಾಂಘಿಕ ದಾಳಿಗೆ ಬೆದರಿದ ಬಾಂಗ್ಲಾ; ಭಾರತಕ್ಕೆ 257 ರನ್​ಗಳ ಗೆಲುವಿನ ಗುರಿ
ಬಾಂಗ್ಲಾದೇಶ- ಭಾರತ
ಪೃಥ್ವಿಶಂಕರ
|

Updated on:Oct 19, 2023 | 6:43 PM

Share

ಪುಣೆಯಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾದೇಶ (India vs Bangladesh) ನಡುವಿನ ವಿಶ್ವಕಪ್ (ICC World Cup 2023) ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ತಂಡ ಭಾರತದ ದಾಳಿಗೆ ನಲುಗಿ ನಿಗದಿತ 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 256 ಕಲೆಹಾಕಿದೆ. ಬಾಂಗ್ಲಾದೇಶದ ಪರ ಆರಂಭಿಕ ಆಟಗಾರ ಲಿಟನ್ ದಾಸ್ 66 ರನ್ ಗಳಿಸಿದರೆ, ಭಾರತದ ಪರ ಜಸ್ಪ್ರೀತ್ ಬುಮ್ರಾ (Jasprit Bumrah), ರವೀಂದ್ರ ಜಡೇಜಾ (Ravindra Jadeja) ಮತ್ತು ಮೊಹಮ್ಮದ್ ಸಿರಾಜ್ ತಲಾ ಎರಡು ವಿಕೆಟ್ ಪಡೆದರು.

ಬಾಂಗ್ಲಾದೇಶದ ಇನ್ನಿಂಗ್ಸ್

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ತಂಡದ ಪರ ಲಿಟನ್ ದಾಸ್ ಮತ್ತು ತಂಜಿದ್ ಹಸನ್ ಇಬ್ಬರು ಉತ್ತಮ ಆರಂಭ ನೀಡಿದರು. ಆರಂಭದಲ್ಲಿ ಎಚ್ಚರಿಕೆಯ ಆಟಕ್ಕೆ ಮುಂದಾದ ಇಬ್ಬರೂ, ಒಮ್ಮೆ ಸೆಟ್ ಆದ ನಂತರ ಗೇರ್ ಬದಲಾಯಿಸಿ ಆಕ್ರಮಣಕಾರಿ ಆಟ ಆರಂಭಿಸಿದರು. ಆರಂಭದಲ್ಲಿ ಭಾರತದ ಬೌಲರ್‌ಗಳು ಕೂಡ ವಿಕೆಟ್‌ ಪಡೆಯುವಲ್ಲಿ ವಿಫಲರಾದರು. ಹೀಗಾಗಿ ಈ ಜೋಡಿ ಬೃಹತ್ ಜೊತೆಯಾಟವನ್ನಾಡುವ ಸುಳಿವು ನೀಡಿತು. ಆದರೆ ಸ್ಪಿನ್ ದಾಳಿ ಆರಂಭಿಸಿದ ಕುಲ್ದೀಪ್ ಯಾದವ್ ಈ ಜೋಡಿಯ ಜೊತೆಯಾಟವನ್ನು ಮುರಿದರು. ಮೊದಲ ವಿಕೆಟ್​ಗೆ ಈ ಇಬ್ಬರೂ 93 ರನ್‌ಗಳ ಜೊತೆಯಾಟ ನಡೆಸಿದರು. ಈ ಒಂದು ವಿಕೆಟ್ ಪತನದ ನಂತರ ಬಾಂಗ್ಲಾದೇಶ ತಂಡದ ವಿಕೆಟ್‌ಗಳು ಒಂದರ ಹಿಂದೆ ಒಂದರಂತೆ ಪತನಗೊಂಡವು.

IND vs BAN: 6 ವರ್ಷಗಳ ಬಳಿಕ ಬೌಲಿಂಗ್ ಮಾಡಿದ ಕಿಂಗ್ ಕೊಹ್ಲಿ..! ಅಪರೂಪದ ಕ್ಷಣದ ವಿಡಿಯೋ ಇಲ್ಲಿದೆ

ಆರಂಭಿಕರ ಅರ್ಧಶತಕ

ಆರಂಭಿಕ ಆಟಗಾರ ತಂಜಿದ್ ಹಸನ್ (51 ರನ್) ಅರ್ಧಶತಕ ಸಿಡಿಸಿ ಕುಲ್ದೀಪ್​ಗೆ ಬಲಿಯಾದರೆ, ನಂತರ ಶಾಂಟೊ ಅವರನ್ನು 8 ರನ್‌ಗಳಿಗೆ ಜಡೇಜಾ ಪೆವಿಲಿಯನ್​ಗಟ್ಟಿದರು. ಮೆಹದಿ ಹಸನ್ ಮಿರಾಜ್ (3 ರನ್) ಕೂಡ ಹೆಚ್ಚು ಹೊತ್ತು ಮೈದಾನದಲ್ಲಿ ನಿಲ್ಲಲಿಲ್ಲ. ತೌಹೀದ್ ಹೃದಯೋ ಕೂಡ (16 ರನ್) ಬೇಗನೇ ಔಟಾದರು. ಆದರೆ ಆ ಬಳಿಕ ಒಂದಾದ ಮುಶ್ಫಿಕರ್ ರಹೀಮ್ ಮತ್ತು ಮಹಮ್ಮದುಲ್ಲಾ ಉತ್ತಮ ಜೊತೆಯಾಟವನ್ನು ರಚಿಸುವ ಮೂಲಕ ತಂಡದ ಇನ್ನಿಂಗ್ಸ್ ಮುನ್ನಡೆಸಿದರು.

ರೋಹಿತ್ ಮೇಲೆ ನಿರೀಕ್ಷೆ

ಈ ವೇಳೆ ಮುಶ್ಫಿಕರ್ ರಹೀಮ್ (38 ರನ್) ಬುಮ್ರಾಗೆ ಬಲಿಯಾದರೆ, ಆ ನಂತರ ಮಹಮ್ಮದುಲ್ಲಾ (46 ರನ್) ಕೂಡ ಬುಮ್ರಾಗೆ ವಿಕೆಟ್ ಒಪ್ಪಿಸಿದರು. ಭಾರತದ ಪರ ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ 2 ವಿಕೆಟ್ ಪಡೆದರು. ಭಾರತ ಇಂದು ಕೂಡ ಮತ್ತೊಮ್ಮೆ ರೋಹಿತ್‌ ಅವರ ಆಕ್ರಮಣಕಾರಿ ಇನ್ನಿಂಗ್ಸ್‌ನ ನಿರೀಕ್ಷೆಯಲ್ಲಿದೆ.

ಉಭಯ ತಂಡಗಳು

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್

ಬಾಂಗ್ಲಾದೇಶ ತಂಡ: ಲಿಟನ್ ದಾಸ್, ತನ್ಜಿದ್, ನಜ್ಮುಲ್ ಹುಸೇನ್ ಶಾಂಟೊ (ನಾಯಕ), ಮೆಹದಿ ಹಸನ್ ಮಿರಾಜ್, ತೌಹೀದ್ ಹ್ರಾದೋಯ್, ಮುಶ್ಫಿಕರ್ ರಹೀಮ್, ಮಹಮ್ಮದುಲ್ಲಾ, ನಸುಮ್ ಅಹ್ಮದ್, ಹಸನ್ ಮಹಮೂದ್, ಮುಸ್ತಫಿಜುರ್ ರಹಮಾನ್, ಶರೀಫುಲ್ ಇಸ್ಲಾಂ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:24 pm, Thu, 19 October 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ