AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಗಿಲ್​ಗೆ ಗಾಯ! ರಾಹುಲ್- ಮಾಯಾಂಕ್​ಗೆ ಅವಕಾಶ ಸಿಗುವ ಸಾಧ್ಯತೆ

IND vs ENG: ಗಿಲ್ ಅವರ ನಿರ್ಗಮನದಿಂದ ಇತರ ಇಬ್ಬರು ಆರಂಭಿಕ ಆಟಗಾರರಾದ ಮಾಯಾಂಕ್ ಅಗರ್ವಾಲ್ ಮತ್ತು ಕೆ.ಎಲ್ ರಾಹುಲ್ ಲಾಭ ಪಡೆಯಬಹುದು. ಈ ಇಬ್ಬರಲ್ಲಿ ಯಾರಾದರೂ ಒಬ್ಬರು ಅಂತಿಮ 11 ಆಟಗಾರರ ಪಟ್ಟಿ ಪ್ರವೇಶಿಸಬಹುದು.

IND vs ENG: ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಗಿಲ್​ಗೆ ಗಾಯ! ರಾಹುಲ್- ಮಾಯಾಂಕ್​ಗೆ ಅವಕಾಶ ಸಿಗುವ ಸಾಧ್ಯತೆ
ಶುಭ್​ಮನ್ ಗಿಲ್
ಪೃಥ್ವಿಶಂಕರ
| Edited By: |

Updated on: Jul 01, 2021 | 9:02 AM

Share

ಟೀಂ ಇಂಡಿಯಾ ಪ್ರಸ್ತುತ ಇಂಗ್ಲೆಂಡ್‌ನಲ್ಲಿದೆ, ಅಲ್ಲಿ ಆಗಸ್ಟ್ 4 ರಿಂದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗವಹಿಸಬೇಕಾಗಿದೆ. ಆದರೆ ಈ ಮಹತ್ವದ ಸರಣಿಗೂ ಮೊದಲು ಭಾರತವು ದೊಡ್ಡ ಹಿನ್ನಡೆ ಎದುರಿಸುತ್ತಿದೆ. ಭಾರತದ ಆರಂಭಿಕ ಆಟಗಾರ ಶುಭ್​ಮನ್ ಗಿಲ್ ಈ ಸರಣಿಯಿಂದ ಹೊರಬಿಳುವ ಆತಂಕ ಮನೆಮಾಡಿದೆ. ಗಿಲ್​ ಇಂಜುರಿಯಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಇದು ಆಂತರಿಕ ಗಾಯವಾಗಿದ್ದು, ಇದರ ಬಗ್ಗೆ ಯಾವುದೇ ಮಾಹಿತಿ ಇನ್ನೂ ಬಹಿರಂಗಗೊಂಡಿಲ್ಲ. ಗಿಲ್ ತಂಡದಿಂದ ಹೊರನಡೆದರೆ, ಬಂಗಾಳದ ಆರಂಭಿಕ ಆಟಗಾರ ಅಭಿಮನ್ಯು ಈಶ್ವರನ್ ಮುಖ್ಯ ತಂಡಕ್ಕೆ ಬರಲು ದಾರಿ ತೆರೆಯಬಹುದು. ಅವರು ತಂಡದೊಂದಿಗೆ ಇಂಗ್ಲೆಂಡ್‌ಗೆ ಸ್ಟ್ಯಾಂಡ್-ಬೈ ಆಗಿ ಹೋಗಿದ್ದಾರೆ.

ಗಿಲ್‌ಗೆ ಸಂಬಂಧಿಸಿದಂತೆ, ಅವರಿಗೆ ಯಾವ ರೀತಿಯ ಇಂಜುರಿಯಾಗಿದೆ ಮತ್ತು ಅವರಿಗೆ ಶಸ್ತ್ರಚಿಕಿತ್ಸೆ ಅಗತ್ಯವಿದೆಯೇ ಎಂಬುದು ಸಹ ಸ್ಪಷ್ಟವಾಗಿಲ್ಲ. ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಈ ಬಗ್ಗೆ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದರು. ಗಿಲ್ ಇಡೀ ಟೆಸ್ಟ್ ಪ್ರವಾಸದಿಂದ ಹೊರಗುಳಿಯುವ ಸಾಧ್ಯತೆಯಿದೆ. ಆದರೂ ಟೆಸ್ಟ್​ ಸರಣಿಗೆ ಇನ್ನೂ ಒಂದು ತಿಂಗಳು ಕಾಲಾವಕಾಶವಿದೆ. ಗಾಯವು ಗಂಭೀರವಾಗಿರದಿದ್ದರೆ ಗಿಲ್ ಚೇರಿಸಿಕೊಂಡು ಮತ್ತೆ ಅಖಾಡಕ್ಕಿಳಿಯುವ ಸಾಧ್ಯತೆಯಿದೆ.

ಸ್ನಾಯು ಸೆಳೆತಕ್ಕೊಳಗಾಗಿರುವ ಗಿಲ್ ಶುಭ್​ಮನ್ ಸ್ನಾಯು ಸೆಳೆತದ ಒತ್ತಡದಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ, ಅದು ಚೇತರಿಸಿಕೊಳ್ಳಲು ಸಮಯ ತೆಗೆದುಕೊಳ್ಳುತ್ತದೆ. ಅವರಿಗೆ ಯಾವಾಗ ಈ ಗಾಯವಾಯಿತು ಎಂಬುದು ಸ್ಪಷ್ಟವಾಗಿಲ್ಲ. ಅವರು ಪ್ರಸ್ತುತ ಇಂಗ್ಲೆಂಡ್‌ನಲ್ಲಿ ಫೀಸಿಯೋ ಆದ ನಿತಿನ್ ಪಟೇಲ್, ಕಂಡೀಷನಿಂಗ್ ತರಬೇತುದಾರ ಸೋಹಮ್ ದೇಸಾಯಿ ಅವರ ಬಳಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಐದು ಪಂದ್ಯಗಳ ಟೆಸ್ಟ್ ಸರಣಿಯಾಗಿದ್ದು, ಸೆಪ್ಟೆಂಬರ್​ವರೆಗೆ ನಡೆಯುತ್ತದೆ, ಸರಣಿಯ ಕೊನೆಯ ಟೆಸ್ಟ್​ಗೆ ಗಿಲ್ ಪುನರಾಗಮನ ಮಾಡುವ ಸಾಧ್ಯತೆಯಿದೆ.

ಮಾಯಾಂಕ್ ಅಗರ್ವಾಲ್, ಕೆ.ಎಲ್.ರಾಹುಲ್ಗೆ ಅವಕಾಶ ಗಿಲ್ ಅವರ ನಿರ್ಗಮನದಿಂದ ಇತರ ಇಬ್ಬರು ಆರಂಭಿಕ ಆಟಗಾರರಾದ ಮಾಯಾಂಕ್ ಅಗರ್ವಾಲ್ ಮತ್ತು ಕೆ.ಎಲ್ ರಾಹುಲ್ ಲಾಭ ಪಡೆಯಬಹುದು. ಈ ಇಬ್ಬರಲ್ಲಿ ಯಾರಾದರೂ ಒಬ್ಬರು ಅಂತಿಮ 11 ಆಟಗಾರರ ಪಟ್ಟಿ ಪ್ರವೇಶಿಸಬಹುದು ಮತ್ತು ರೋಹಿತ್ ಶರ್ಮಾ ಅವರೊಂದಿಗೆ ಇನ್ನಿಂಗ್ಸ್ ತೆರೆಯಬಹುದು.

ಇದನ್ನೂ ಓದಿ: ಭಾರತೀಯ ಆಟಗಾರರು ಕ್ರಿಕೆಟ್​ನ ಶ್ರೇಷ್ಠ ರಾಯಭಾರಿಗಳು! ಟೀಂ ಇಂಡಿಯಾವನ್ನು ಶ್ಲಾಘಿಸಿದ ಕೇನ್ ವಿಲಿಯಮ್ಸನ್

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು