AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಗಿಲ್​ಗೆ ಗಾಯ! ರಾಹುಲ್- ಮಾಯಾಂಕ್​ಗೆ ಅವಕಾಶ ಸಿಗುವ ಸಾಧ್ಯತೆ

IND vs ENG: ಗಿಲ್ ಅವರ ನಿರ್ಗಮನದಿಂದ ಇತರ ಇಬ್ಬರು ಆರಂಭಿಕ ಆಟಗಾರರಾದ ಮಾಯಾಂಕ್ ಅಗರ್ವಾಲ್ ಮತ್ತು ಕೆ.ಎಲ್ ರಾಹುಲ್ ಲಾಭ ಪಡೆಯಬಹುದು. ಈ ಇಬ್ಬರಲ್ಲಿ ಯಾರಾದರೂ ಒಬ್ಬರು ಅಂತಿಮ 11 ಆಟಗಾರರ ಪಟ್ಟಿ ಪ್ರವೇಶಿಸಬಹುದು.

IND vs ENG: ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಗಿಲ್​ಗೆ ಗಾಯ! ರಾಹುಲ್- ಮಾಯಾಂಕ್​ಗೆ ಅವಕಾಶ ಸಿಗುವ ಸಾಧ್ಯತೆ
ಶುಭ್​ಮನ್ ಗಿಲ್
ಪೃಥ್ವಿಶಂಕರ
| Edited By: |

Updated on: Jul 01, 2021 | 9:02 AM

Share

ಟೀಂ ಇಂಡಿಯಾ ಪ್ರಸ್ತುತ ಇಂಗ್ಲೆಂಡ್‌ನಲ್ಲಿದೆ, ಅಲ್ಲಿ ಆಗಸ್ಟ್ 4 ರಿಂದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗವಹಿಸಬೇಕಾಗಿದೆ. ಆದರೆ ಈ ಮಹತ್ವದ ಸರಣಿಗೂ ಮೊದಲು ಭಾರತವು ದೊಡ್ಡ ಹಿನ್ನಡೆ ಎದುರಿಸುತ್ತಿದೆ. ಭಾರತದ ಆರಂಭಿಕ ಆಟಗಾರ ಶುಭ್​ಮನ್ ಗಿಲ್ ಈ ಸರಣಿಯಿಂದ ಹೊರಬಿಳುವ ಆತಂಕ ಮನೆಮಾಡಿದೆ. ಗಿಲ್​ ಇಂಜುರಿಯಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಇದು ಆಂತರಿಕ ಗಾಯವಾಗಿದ್ದು, ಇದರ ಬಗ್ಗೆ ಯಾವುದೇ ಮಾಹಿತಿ ಇನ್ನೂ ಬಹಿರಂಗಗೊಂಡಿಲ್ಲ. ಗಿಲ್ ತಂಡದಿಂದ ಹೊರನಡೆದರೆ, ಬಂಗಾಳದ ಆರಂಭಿಕ ಆಟಗಾರ ಅಭಿಮನ್ಯು ಈಶ್ವರನ್ ಮುಖ್ಯ ತಂಡಕ್ಕೆ ಬರಲು ದಾರಿ ತೆರೆಯಬಹುದು. ಅವರು ತಂಡದೊಂದಿಗೆ ಇಂಗ್ಲೆಂಡ್‌ಗೆ ಸ್ಟ್ಯಾಂಡ್-ಬೈ ಆಗಿ ಹೋಗಿದ್ದಾರೆ.

ಗಿಲ್‌ಗೆ ಸಂಬಂಧಿಸಿದಂತೆ, ಅವರಿಗೆ ಯಾವ ರೀತಿಯ ಇಂಜುರಿಯಾಗಿದೆ ಮತ್ತು ಅವರಿಗೆ ಶಸ್ತ್ರಚಿಕಿತ್ಸೆ ಅಗತ್ಯವಿದೆಯೇ ಎಂಬುದು ಸಹ ಸ್ಪಷ್ಟವಾಗಿಲ್ಲ. ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಈ ಬಗ್ಗೆ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದರು. ಗಿಲ್ ಇಡೀ ಟೆಸ್ಟ್ ಪ್ರವಾಸದಿಂದ ಹೊರಗುಳಿಯುವ ಸಾಧ್ಯತೆಯಿದೆ. ಆದರೂ ಟೆಸ್ಟ್​ ಸರಣಿಗೆ ಇನ್ನೂ ಒಂದು ತಿಂಗಳು ಕಾಲಾವಕಾಶವಿದೆ. ಗಾಯವು ಗಂಭೀರವಾಗಿರದಿದ್ದರೆ ಗಿಲ್ ಚೇರಿಸಿಕೊಂಡು ಮತ್ತೆ ಅಖಾಡಕ್ಕಿಳಿಯುವ ಸಾಧ್ಯತೆಯಿದೆ.

ಸ್ನಾಯು ಸೆಳೆತಕ್ಕೊಳಗಾಗಿರುವ ಗಿಲ್ ಶುಭ್​ಮನ್ ಸ್ನಾಯು ಸೆಳೆತದ ಒತ್ತಡದಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ, ಅದು ಚೇತರಿಸಿಕೊಳ್ಳಲು ಸಮಯ ತೆಗೆದುಕೊಳ್ಳುತ್ತದೆ. ಅವರಿಗೆ ಯಾವಾಗ ಈ ಗಾಯವಾಯಿತು ಎಂಬುದು ಸ್ಪಷ್ಟವಾಗಿಲ್ಲ. ಅವರು ಪ್ರಸ್ತುತ ಇಂಗ್ಲೆಂಡ್‌ನಲ್ಲಿ ಫೀಸಿಯೋ ಆದ ನಿತಿನ್ ಪಟೇಲ್, ಕಂಡೀಷನಿಂಗ್ ತರಬೇತುದಾರ ಸೋಹಮ್ ದೇಸಾಯಿ ಅವರ ಬಳಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಐದು ಪಂದ್ಯಗಳ ಟೆಸ್ಟ್ ಸರಣಿಯಾಗಿದ್ದು, ಸೆಪ್ಟೆಂಬರ್​ವರೆಗೆ ನಡೆಯುತ್ತದೆ, ಸರಣಿಯ ಕೊನೆಯ ಟೆಸ್ಟ್​ಗೆ ಗಿಲ್ ಪುನರಾಗಮನ ಮಾಡುವ ಸಾಧ್ಯತೆಯಿದೆ.

ಮಾಯಾಂಕ್ ಅಗರ್ವಾಲ್, ಕೆ.ಎಲ್.ರಾಹುಲ್ಗೆ ಅವಕಾಶ ಗಿಲ್ ಅವರ ನಿರ್ಗಮನದಿಂದ ಇತರ ಇಬ್ಬರು ಆರಂಭಿಕ ಆಟಗಾರರಾದ ಮಾಯಾಂಕ್ ಅಗರ್ವಾಲ್ ಮತ್ತು ಕೆ.ಎಲ್ ರಾಹುಲ್ ಲಾಭ ಪಡೆಯಬಹುದು. ಈ ಇಬ್ಬರಲ್ಲಿ ಯಾರಾದರೂ ಒಬ್ಬರು ಅಂತಿಮ 11 ಆಟಗಾರರ ಪಟ್ಟಿ ಪ್ರವೇಶಿಸಬಹುದು ಮತ್ತು ರೋಹಿತ್ ಶರ್ಮಾ ಅವರೊಂದಿಗೆ ಇನ್ನಿಂಗ್ಸ್ ತೆರೆಯಬಹುದು.

ಇದನ್ನೂ ಓದಿ: ಭಾರತೀಯ ಆಟಗಾರರು ಕ್ರಿಕೆಟ್​ನ ಶ್ರೇಷ್ಠ ರಾಯಭಾರಿಗಳು! ಟೀಂ ಇಂಡಿಯಾವನ್ನು ಶ್ಲಾಘಿಸಿದ ಕೇನ್ ವಿಲಿಯಮ್ಸನ್

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ