Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಗಿಲ್​ಗೆ ಗಾಯ! ರಾಹುಲ್- ಮಾಯಾಂಕ್​ಗೆ ಅವಕಾಶ ಸಿಗುವ ಸಾಧ್ಯತೆ

IND vs ENG: ಗಿಲ್ ಅವರ ನಿರ್ಗಮನದಿಂದ ಇತರ ಇಬ್ಬರು ಆರಂಭಿಕ ಆಟಗಾರರಾದ ಮಾಯಾಂಕ್ ಅಗರ್ವಾಲ್ ಮತ್ತು ಕೆ.ಎಲ್ ರಾಹುಲ್ ಲಾಭ ಪಡೆಯಬಹುದು. ಈ ಇಬ್ಬರಲ್ಲಿ ಯಾರಾದರೂ ಒಬ್ಬರು ಅಂತಿಮ 11 ಆಟಗಾರರ ಪಟ್ಟಿ ಪ್ರವೇಶಿಸಬಹುದು.

IND vs ENG: ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಗಿಲ್​ಗೆ ಗಾಯ! ರಾಹುಲ್- ಮಾಯಾಂಕ್​ಗೆ ಅವಕಾಶ ಸಿಗುವ ಸಾಧ್ಯತೆ
ಶುಭ್​ಮನ್ ಗಿಲ್
Follow us
ಪೃಥ್ವಿಶಂಕರ
| Updated By: Skanda

Updated on: Jul 01, 2021 | 9:02 AM

ಟೀಂ ಇಂಡಿಯಾ ಪ್ರಸ್ತುತ ಇಂಗ್ಲೆಂಡ್‌ನಲ್ಲಿದೆ, ಅಲ್ಲಿ ಆಗಸ್ಟ್ 4 ರಿಂದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗವಹಿಸಬೇಕಾಗಿದೆ. ಆದರೆ ಈ ಮಹತ್ವದ ಸರಣಿಗೂ ಮೊದಲು ಭಾರತವು ದೊಡ್ಡ ಹಿನ್ನಡೆ ಎದುರಿಸುತ್ತಿದೆ. ಭಾರತದ ಆರಂಭಿಕ ಆಟಗಾರ ಶುಭ್​ಮನ್ ಗಿಲ್ ಈ ಸರಣಿಯಿಂದ ಹೊರಬಿಳುವ ಆತಂಕ ಮನೆಮಾಡಿದೆ. ಗಿಲ್​ ಇಂಜುರಿಯಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಇದು ಆಂತರಿಕ ಗಾಯವಾಗಿದ್ದು, ಇದರ ಬಗ್ಗೆ ಯಾವುದೇ ಮಾಹಿತಿ ಇನ್ನೂ ಬಹಿರಂಗಗೊಂಡಿಲ್ಲ. ಗಿಲ್ ತಂಡದಿಂದ ಹೊರನಡೆದರೆ, ಬಂಗಾಳದ ಆರಂಭಿಕ ಆಟಗಾರ ಅಭಿಮನ್ಯು ಈಶ್ವರನ್ ಮುಖ್ಯ ತಂಡಕ್ಕೆ ಬರಲು ದಾರಿ ತೆರೆಯಬಹುದು. ಅವರು ತಂಡದೊಂದಿಗೆ ಇಂಗ್ಲೆಂಡ್‌ಗೆ ಸ್ಟ್ಯಾಂಡ್-ಬೈ ಆಗಿ ಹೋಗಿದ್ದಾರೆ.

ಗಿಲ್‌ಗೆ ಸಂಬಂಧಿಸಿದಂತೆ, ಅವರಿಗೆ ಯಾವ ರೀತಿಯ ಇಂಜುರಿಯಾಗಿದೆ ಮತ್ತು ಅವರಿಗೆ ಶಸ್ತ್ರಚಿಕಿತ್ಸೆ ಅಗತ್ಯವಿದೆಯೇ ಎಂಬುದು ಸಹ ಸ್ಪಷ್ಟವಾಗಿಲ್ಲ. ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಈ ಬಗ್ಗೆ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದರು. ಗಿಲ್ ಇಡೀ ಟೆಸ್ಟ್ ಪ್ರವಾಸದಿಂದ ಹೊರಗುಳಿಯುವ ಸಾಧ್ಯತೆಯಿದೆ. ಆದರೂ ಟೆಸ್ಟ್​ ಸರಣಿಗೆ ಇನ್ನೂ ಒಂದು ತಿಂಗಳು ಕಾಲಾವಕಾಶವಿದೆ. ಗಾಯವು ಗಂಭೀರವಾಗಿರದಿದ್ದರೆ ಗಿಲ್ ಚೇರಿಸಿಕೊಂಡು ಮತ್ತೆ ಅಖಾಡಕ್ಕಿಳಿಯುವ ಸಾಧ್ಯತೆಯಿದೆ.

ಸ್ನಾಯು ಸೆಳೆತಕ್ಕೊಳಗಾಗಿರುವ ಗಿಲ್ ಶುಭ್​ಮನ್ ಸ್ನಾಯು ಸೆಳೆತದ ಒತ್ತಡದಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ, ಅದು ಚೇತರಿಸಿಕೊಳ್ಳಲು ಸಮಯ ತೆಗೆದುಕೊಳ್ಳುತ್ತದೆ. ಅವರಿಗೆ ಯಾವಾಗ ಈ ಗಾಯವಾಯಿತು ಎಂಬುದು ಸ್ಪಷ್ಟವಾಗಿಲ್ಲ. ಅವರು ಪ್ರಸ್ತುತ ಇಂಗ್ಲೆಂಡ್‌ನಲ್ಲಿ ಫೀಸಿಯೋ ಆದ ನಿತಿನ್ ಪಟೇಲ್, ಕಂಡೀಷನಿಂಗ್ ತರಬೇತುದಾರ ಸೋಹಮ್ ದೇಸಾಯಿ ಅವರ ಬಳಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಐದು ಪಂದ್ಯಗಳ ಟೆಸ್ಟ್ ಸರಣಿಯಾಗಿದ್ದು, ಸೆಪ್ಟೆಂಬರ್​ವರೆಗೆ ನಡೆಯುತ್ತದೆ, ಸರಣಿಯ ಕೊನೆಯ ಟೆಸ್ಟ್​ಗೆ ಗಿಲ್ ಪುನರಾಗಮನ ಮಾಡುವ ಸಾಧ್ಯತೆಯಿದೆ.

ಮಾಯಾಂಕ್ ಅಗರ್ವಾಲ್, ಕೆ.ಎಲ್.ರಾಹುಲ್ಗೆ ಅವಕಾಶ ಗಿಲ್ ಅವರ ನಿರ್ಗಮನದಿಂದ ಇತರ ಇಬ್ಬರು ಆರಂಭಿಕ ಆಟಗಾರರಾದ ಮಾಯಾಂಕ್ ಅಗರ್ವಾಲ್ ಮತ್ತು ಕೆ.ಎಲ್ ರಾಹುಲ್ ಲಾಭ ಪಡೆಯಬಹುದು. ಈ ಇಬ್ಬರಲ್ಲಿ ಯಾರಾದರೂ ಒಬ್ಬರು ಅಂತಿಮ 11 ಆಟಗಾರರ ಪಟ್ಟಿ ಪ್ರವೇಶಿಸಬಹುದು ಮತ್ತು ರೋಹಿತ್ ಶರ್ಮಾ ಅವರೊಂದಿಗೆ ಇನ್ನಿಂಗ್ಸ್ ತೆರೆಯಬಹುದು.

ಇದನ್ನೂ ಓದಿ: ಭಾರತೀಯ ಆಟಗಾರರು ಕ್ರಿಕೆಟ್​ನ ಶ್ರೇಷ್ಠ ರಾಯಭಾರಿಗಳು! ಟೀಂ ಇಂಡಿಯಾವನ್ನು ಶ್ಲಾಘಿಸಿದ ಕೇನ್ ವಿಲಿಯಮ್ಸನ್

ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?