AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA 5th T20I: ಭಾರತ-ಸೌತ್ ಆಫ್ರಿಕಾ ಪಂದ್ಯ ರದ್ದು

IND vs SA 5th T20I: ಓವರ್​ ಕಡಿತದೊಂದಿಗೆ ಪಂದ್ಯ ಮುಂದುವರೆಯಬಹುದು. ಇತ್ತ ಮಳೆ ಬಂದರೂ ಮೈದಾನದಿಂದ ನೀರು ಹೊರಹೋಗಲು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉತ್ತಮ ವ್ಯವಸ್ಥೆಯಿದೆ. ಹೀಗಾಗಿ ತಡವಾಗಿ ಪಂದ್ಯ ನಡೆಯುವ ಸಾಧ್ಯತೆಯಿದೆ.

IND vs SA 5th T20I: ಭಾರತ-ಸೌತ್ ಆಫ್ರಿಕಾ ಪಂದ್ಯ ರದ್ದು
IND vs SA 5th T20I
TV9 Web
| Updated By: ಝಾಹಿರ್ ಯೂಸುಫ್|

Updated on:Jun 19, 2022 | 9:59 PM

Share

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಭಾರತ-ಸೌತ್ ಆಫ್ರಿಕಾ ನಡುವಣ ಪಂದ್ಯವು ಮಳೆಯ ಕಾರಣ ರದ್ದಾಗಿದೆ. ಟಾಸ್​ಗೂ ಮುನ್ನ ಮಳೆಯಾಗಿದ್ದರಿಂದ ಪಂದ್ಯವು ವಿಳಂಬವಾಗಿ ಶುರು ಮಾಡಲಾಗಿತ್ತು. ಅದರಂತೆ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡವು ಬೌಲಿಂಗ್ ಆಯ್ದುಕೊಂಡಿತು. ಇನಿಂಗ್ಸ್​ ಆರಂಭಿಸಿದ ಟೀಮ್ ಇಂಡಿಯಾ ಆರಂಭದಲ್ಲೇ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಲುಂಗಿ ಎನ್​ಗಿಡಿ ಎಸೆದ 2ನೇ ಓವರ್​ನ ಕೊನೆಯ ಎಸೆತದಲ್ಲಿ ಇಶಾನ್ ಕಿಶನ್ (15) ಕ್ಲೀನ್ ಬೌಲ್ಡ್ ಆಗಿ ಹೊರನಡೆದರೆ, ಎನ್​ಗಿಡಿ ಎಸೆದ 4ನೇ ಓವರ್​ನ 2ನೇ ಎಸೆತದಲ್ಲಿ ರುತುರಾಜ್ ಗಾಯಕ್ವಾಡ್ (10) ಕ್ಯಾಚ್ ನೀಡಿ ನಿರ್ಗಮಿಸಿದರು. ಈ ವೇಳೆ ಮತ್ತೆ ಮಳೆ ಸುರಿಯಲಾರಂಭಿಸಿದ ಕಾರಣ ಪಂದ್ಯವನ್ನು ಸ್ಥಗಿತಗೊಳಿಸಲಾಗಿತ್ತು.

ಇದಾಗ್ಯೂ ಪಂದ್ಯವನ್ನು ಮುಂದುವರೆಸಲು ಬಯಸಿದರೂ ಮಳೆ ಬಿಡುವ ಸಾಧ್ಯತೆಗಳಿರಲಿಲ್ಲ. ಈ ಬಗ್ಗೆ ಚರ್ಚಿಸಿದ ಅಂಪೈರ್‌ಗಳಾದ ಅನಿಲ್ ಚೌಧರಿ ಮತ್ತು ಕೆಎನ್ ಅನಂತ ಪದ್ಮನಾಭನ್ 5 ಓವರ್‌ಗಳ ಪಂದ್ಯ ನಡೆಸುವ ಆಯ್ಕೆಗಳ ಬಗ್ಗೆ ಪರಿಶೀಲಿಸಿದರು. ಆದರೆ ನಿರಂತರವಾಗಿ ಮಳೆಯಾಗುತ್ತಿದ್ದರಿಂದ ಇದಕ್ಕೂ ಅವಕಾಶ ಇರಲಿಲ್ಲ. ಹೀಗಾಗಿ ಅಂತಿಮವಾಗಿ ಪಂದ್ಯವನ್ನು ರದ್ದುಗೊಳಿಸುವ ನಿರ್ಧಾರಕ್ಕೆ ಬಂದಿದ್ದಾರೆ.

ಐಸಿಸಿ ನಿಮಯದ ಪ್ರಕಾರ ಮಳೆ ಬಂದರೆ ಕನಿಷ್ಠ 5 ಓವರ್​ಗಳ ಪಂದ್ಯ ನಡೆಯಬೇಕು. ಇದಕ್ಕಿಂತ ಕಡಿಮೆ ಓವರ್​ಗಳ ಪಂದ್ಯ ನಡೆಸಲಾಗುವುದಿಲ್ಲ. ಅಂದರೆ ಇಲ್ಲಿ ಒಂದು ತಂಡವು 5 ಓವರ್​ಗಳನ್ನು ಆಡಲೇಬೇಕು. ಇದಾಗ್ಯೂ ಸೂಪರ್ ಓವರ್​ ಮೂಲಕ ಸರಣಿ ಫಲಿತಾಂಶವನ್ನು ನಿರ್ಧರಿಸಲಾಗುವುದಿಲ್ಲ.

ಇದನ್ನೂ ಓದಿ
Image
On This Day: ಏಕದಿನ ವಿಶ್ವಕಪ್​: ಕೇವಲ 45 ರನ್​ಗೆ ಆಲೌಟ್..!
Image
Heinrich Klaasen: ಬಡವರ ಧೋನಿ, RCB ಆಟಗಾರ…ಯಾರು ಈ ಹೆನ್ರಿಕ್ ಕ್ಲಾಸೆನ್..?
Image
Hardik Pandya: ದಿನೇಶ್ ಕಾರ್ತಿಕ್ ವಿರುದ್ದ ಸೇಡು ತೀರಿಸಿಕೊಂಡ್ರಾ ಹಾರ್ದಿಕ್ ಪಾಂಡ್ಯ?
Image
Dinesh Karthik: ಟೀಮ್ ಇಂಡಿಯಾ ಪರ ಯಾರೂ ಮಾಡದ ದಾಖಲೆ ಬರೆದ ದಿನೇಶ್ ಕಾರ್ತಿಕ್

ಇನ್ನು ಮಳೆ ನಿಲ್ಲದಿದ್ದರೆ ಪಂದ್ಯವನ್ನು ರದ್ದುಗೊಳಿಸಲಾಗುತ್ತದೆ. ಇದಾಗ್ಯೂ ಈ ಪಂದ್ಯಕ್ಕೆ ಮೀಸಲು ದಿನ ನೀಡಲಾಗಿಲ್ಲ. ಹಾಗಾಗಿ ಪಂದ್ಯ ನಾಳೆ ನಡೆಯುವುದಿಲ್ಲ. ಬದಲಾಗಿ ಸರಣಿಯು ಸಮಬಲದೊಂದಿಗೆ ಅಂತ್ಯಗೊಳಿಸಲಾಗಿದೆ. ಅಂದರೆ ಐದು ಪಂದ್ಯಗಳ ಸರಣಿಯಲ್ಲಿ ಉಭಯ ತಂಡಗಳು 2-2 ಸಮಬಲ ಸಾಧಿಸಿದ್ದು, ಅದರಂತೆ ಉಭಯ ತಂಡಗಳನ್ನು ಸರಣಿ ವಿಜೇತರೆಂದು ಘೋಷಿಸಲಾಗಿದೆ.

ಟೀಮ್ ಇಂಡಿಯಾ ಪ್ಲೇಯಿಂಗ್ 11: ರಿಷಬ್ ಪಂತ್ (ನಾಯಕ), ಇಶಾನ್ ಕಿಶನ್, ರಿತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆವೇಶ್ ಖಾನ್ ಮತ್ತು ಯುಜುವೇಂದ್ರ ಚಾಹಲ್

ಸೌತ್ ಆಫ್ರಿಕಾ ಪ್ಲೇಯಿಂಗ್ 11: ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್ , ಡ್ವೈನ್ ಪ್ರಿಟೋರಿಯಸ್ , ರಾಸ್ಸಿ ವಾನ್ ಡೆರ್ ಡುಸ್ಸೆನ್ , ಹೆನ್ರಿಕ್ ಕ್ಲಾಸೆನ್ , ಡೇವಿಡ್ ಮಿಲ್ಲರ್ , ಟ್ರಿಸ್ಟಾನ್ ಸ್ಟಬ್ಸ್ , ಕಗಿಸೊ ರಬಾಡಾ , ಕೇಶವ್ ಮಹಾರಾಜ್ (ನಾಯಕ) , ಲುಂಗಿ ಎನ್​ಗಿಡಿ , ಅನ್ರಿಕ್ ನೋಕಿಯಾ

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:46 pm, Sun, 19 June 22

ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ