AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಜೂ.14 ರಿಂದ ಮುಂಬೈನಲ್ಲಿ ಕ್ವಾರಂಟೈನ್! ಶ್ರೀಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾದ ಸಿದ್ಧತೆ ಹೇಗಿದೆ ಗೊತ್ತಾ?

IND vs SL: ಜುಲೈ 2 ರಿಂದ ಗುಂಪುಗಳಾಗಿ ಭಾರತ ತಂಡದ ಆಟಗಾರರು ಅಭ್ಯಾಸವನ್ನು ನಡೆಸಲಿದ್ದಾರೆ. ನಂತರ ಜುಲೈ 12ಕ್ಕೆ ತಂಡದ ಎಲ್ಲಾ ಆಟಗಾರರು ಒಟ್ಟಿಗೆ ತರಬೇತಿಯಲ್ಲಿ ಭಾಗವಹಿಸಿಲಿದ್ದಾರೆ.

IND vs SL: ಜೂ.14 ರಿಂದ ಮುಂಬೈನಲ್ಲಿ ಕ್ವಾರಂಟೈನ್! ಶ್ರೀಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾದ ಸಿದ್ಧತೆ ಹೇಗಿದೆ ಗೊತ್ತಾ?
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on: Jun 12, 2021 | 3:50 PM

Share

ಶಿಖರ್ ಧವನ್ ನೇತೃತ್ವದ ಭಾರತದ ವೈಟ್ ಬಾಲ್ ಸ್ಕ್ವಾಡ್ ಜೂನ್ 14 ರಿಂದ 28 ರವರೆಗೆ ಮುಂಬೈನಲ್ಲಿ ಕ್ಯಾರೆಂಟೈನ್ ಆಗಲಿದೆ. ಶ್ರೀಲಂಕಾ ವಿರುದ್ಧದ ಆರು ಪಂದ್ಯಗಳ ಸರಣಿಗಾಗಿ ಕೊಲಂಬೊಗೆ ಹಾರಾಟ ನಡೆಸುವ ಮೊದಲು ಪರ್ಯಾಯ ದಿನಗಳಲ್ಲಿ ಆರು ಆರ್ಟಿ-ಪಿಸಿಆರ್ ಪರೀಕ್ಷೆಗಳಿಗೆ ಒಳಗಾಗಲಿದೆ ಎಂದು ವರದಿಯಾಗಿದೆ. ಲಂಕಾ ಪ್ರವಾಸ ಜುಲೈ 13 ರಿಂದ ಪ್ರಾರಂಭವಾಗುತ್ತದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಮತ್ತು ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಸರಣಿಗಾಗಿ ಪ್ರಸ್ತುತ ಯುನೈಟೆಡ್ ಕಿಂಗ್‌ಡಂನಲ್ಲಿರುವ ಮೊದಲ ತಂಡದಂತೆಯೇ ಲಂಕಾ ಪ್ರವಾಸಕ್ಕೆ ಪ್ರಕಟವಾಗಿರುವ ತಂಡಕ್ಕೂ ಎಲ್ಲಾ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ (ಎಸ್‌ಒಪಿ) ಗಳು ಒಂದೇ ಆಗಿರುತ್ತವೆ ಎಂದು ತಿಳಿದುಬಂದಿದೆ.

ಹೋಟೆಲ್‌ನಲ್ಲಿ ಮೂರು ದಿನಗಳ ಕ್ವಾರಂಟೈನ್‌ ನಾವು ಇಂಗ್ಲೆಂಡ್‌ನಲ್ಲಿ ಅನುಸರಿಸಿದಂತೆ ಎಲ್ಲಾ ನಿಯಮಗಳು ಈ ತಂಡಕ್ಕೂ ಅನ್ವಯವಾಗುತ್ತವೆ. ಮನೆಯಲ್ಲಿರುವ ಆಟಗಾರರು ಚಾರ್ಟರ್ ಫ್ಲೈಟ್ ಮತ್ತು ವಾಣಿಜ್ಯ ವಿಮಾನಯಾನ ಸಂಸ್ಥೆಗಳ ಕೆಲವು ಫ್ಲೈ ಬಿಸಿನೆಸ್ ವರ್ಗದ ಮೂಲಕ ಮುಂಬೈಗೆ ಬರಲಿದ್ದಾರೆ ಎಂದು ಬಿಸಿಸಿಐ ಮೂಲವು ಪಿಟಿಐಗೆ ತಿಳಿಸಿದೆ. ಮೂರು ಪಂದ್ಯಗಳ ಏಕದಿನ ಸರಣಿಯು ಜುಲೈ 13 ರಿಂದ ಪ್ರಾರಂಭವಾಗಲಿದ್ದು, ಕೊಲಂಬೊಕ್ಕೆ ತೆರಳಿದ ನಂತರ ತಂಡದ ಆಟಗಾರರು ಅಲ್ಲಿನ ಹೋಟೆಲ್‌ನಲ್ಲಿ ಮೂರು ದಿನಗಳ ಕ್ವಾರಂಟೈನ್‌ ಮುಗಿಸಿದ ಬಳಿಕ ಟೀಮ್ ಇಂಡಿಯಾ, ಶ್ರೀಲಂಕಾ ಕ್ರಿಕೆಟ್‌ ಮಾರ್ಗಸೂಚಿಗಳ ಅನ್ವಯ ತರಬೇತಿ ಆರಂಭಿಸಲಿದೆ.

ಶ್ರೀಲಂಕಾ ಪ್ರವಾಸದಲ್ಲಿ ಭಾರತ ತಂಡದ ತರಬೇತಿ ಯೋಜನೆಯ ಮಾಹಿತಿಯನ್ನು ಎಸ್‌ಎಲ್‌ಸಿ ಶುಕ್ರವಾರ ಮಾಧ್ಯಮ ಪ್ರಕಟನೆಯಲ್ಲಿ ತಿಳಿಸಿದೆ. ಜುಲೈ 2 ರಿಂದ ಗುಂಪುಗಳಾಗಿ ಭಾರತ ತಂಡದ ಆಟಗಾರರು ಅಭ್ಯಾಸವನ್ನು ನಡೆಸಲಿದ್ದಾರೆ. ನಂತರ ಜುಲೈ 12ಕ್ಕೆ ತಂಡದ ಎಲ್ಲಾ ಆಟಗಾರರು ಒಟ್ಟಿಗೆ ತರಬೇತಿಯಲ್ಲಿ ಭಾಗವಹಿಸಿಲಿದ್ದಾರೆ.

ಮೊದಲ ಬಾರಿಗೆ ನಾಯಕತ್ವ; ಧವನ್ ಹೇಳಿದ್ದೇನು? ಮೊದಲ ಬಾರಿಗೆ ಟೀಮ್ ಇಂಡಿಯಾ ಮುನ್ನಡೆಸುವ ಅವಕಾಶ ಸಿಕ್ಕಿರುವುದರಿಂದ ಶಿಖರ್ ಧವನ್ ಖುಷಿಯಾಗಿದ್ದಾರೆ. ಈ ಖುಷಿಯನ್ನು ಗಬ್ಬರ್​ ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಂಡಿದ್ದಾರೆ. ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ 20 ಮಂದಿಯ ಭಾರತೀಯ ತಂಡವನ್ನು ಧವನ್ ಮುನ್ನಡೆಸಲಿದ್ದಾರೆ. ದೇಶವನ್ನು ಮುನ್ನಡೆಸುವ ಅವಕಾಶಕ್ಕೆ ನಾನು ವಿನಮ್ರನಾಗಿದ್ದೇನೆ. ನಿಮ್ಮೆಲ್ಲಾ ಶುಭಹಾರೈಕೆಗಳಿಗೆ ನನ್ನ ಧನ್ಯವಾದಗಳು’ ಎಂದು ಧವನ್ ತನ್ನ ಅಧಿಕೃತ ಟ್ವಿಟರ್, ಫೇಸ್ಬುಕ್, ಇನ್‌ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ. ಧವನ್ ಭಾರತ ಪರ 34 ಟೆಸ್ಟ್‌, 142 ಏಕದಿನ ಮತ್ತು 64 ಟಿ20ಐ ಪಂದ್ಯಗಳನ್ನಾಡಿದ್ದಾರೆ.

13 ಜುಲೈನಿಂದ ಪ್ರವಾಸ ಆರಂಭ ಈ ಪ್ರವಾಸದಲ್ಲಿ ಟೀಮ್ ಇಂಡಿಯಾ ಆತಿಥೇಯ ರಾಷ್ಟ್ರದ ವಿರುದ್ಧ 3 ಏಕದಿನ ಮತ್ತು 3 ಟಿ 20 ಪಂದ್ಯಗಳ ಸರಣಿಯನ್ನು ಆಡಲಿದೆ. ಏಕದಿನ ಪಂದ್ಯಗಳು ಜುಲೈ 13 ರಿಂದ ಪ್ರಾರಂಭವಾಗಲಿದ್ದು, ಟಿ 20 ಸರಣಿ ಜುಲೈ 21 ರಿಂದ ಪ್ರಾರಂಭವಾಗಲಿದೆ. ಏಕದಿನ ಪಂದ್ಯಗಳು ಜುಲೈ 13, 16 ಮತ್ತು 18 ರಂದು ನಡೆಯಲಿದೆ. ಟಿ 20 ಪಂದ್ಯಗಳು ಜುಲೈ 21, 23 ಮತ್ತು 25 ರಂದು ನಡೆಯಲಿದೆ. ಕೊರೊನಾ ವೈರಸ್ ದೃಷ್ಟಿಯಿಂದ, ಎಲ್ಲಾ ಪಂದ್ಯಗಳನ್ನು ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಆಯೋಜಿಸಲಾಗುವುದು.

ಆಟಗಾರರ ಪಟ್ಟಿ ಹೀಗಿದೆ ಶಿಖರ್ ಧವನ್ (ನಾಯಕ), ಭುವನೇಶ್ವರ್ ಕುಮಾರ್ (ಉಪನಾಯಕ), ಪೃಥ್ವಿ ಶಾ, ದೇವದತ್ತ್ ಪಡಿಕ್ಕಲ್, ರುತುರಾಜ್ ಗೈಕ್ವಾಡ್, ಸೂರ್ಯಕುಮಾರ್ ಯಾದವ್, ಮನೀಷ್ ಪಾಂಡೆ, ಹಾರ್ದಿಕ್ ಪಾಂಡ್ಯ, ನಿತೀಶ್ ರಾಣಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಎಸ್ ಸ್ಯಾಮ್ಸನ್ (ವಿಕೆಟ್ ಕೀಪರ್), ಯಜ್ವೇಂದ್ರ ಚಹಲ್, ರಾಹುಲ್ ಚಹರ್ , ಕೆ ಗೌತಮ್, ಕೃನಾಲ್ ಪಾಂಡ್ಯ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ದೀಪಕ್ ಚಹರ್, ನವ್​ದೀಪ್ ಸೈನಿ, ಚೇತನ್ ಸಕರಿಯಾ

ನೆಟ್ ಬೌಲರ್ ಇಶಾನ್ ಪೊರೆಲ್, ಸಂದೀಪ್ ವಾರಿಯರ್, ಅರ್ಷ್‌ದೀಪ್ ಸಿಂಗ್, ಸಾಯಿ ಕಿಶೋರ್, ಸಿಮಾರ್ಜೀತ್ ಸಿಂಗ್

ಇದನ್ನೂ ಓದಿ:ಶ್ರೀಲಂಕಾ ಪ್ರವಾಸದಲ್ಲಿ ಟೀಂ ಇಂಡಿಯಾದ ಓಪನರ್ಸ್​ ಯಾರು? ಮಧ್ಯಮ ಕ್ರಮಾಂಕದಲ್ಲಿ ಯಾರಿಗಿದೆ ಅವಕಾಶ?

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ