AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಲಂಕನ್ನರನ್ನು ಸುಲಭವಾಗಿ ಮಣಿಸಿದ ಯುವ ಭಾರತ; ಹುಡುಗರ ಆಟಕ್ಕೆ ಗೆಲುವಿನ ಆಸೆಯನ್ನೇ ಮರೆತ ಸಿಂಹಳೀಯರು

IND vs SL: ಬೌಲರ್‌ಗಳ ಅದ್ಭುತ ಪ್ರದರ್ಶನದ ನಂತರ ನಾಯಕ ಶಿಖರ್ ಧವನ್ (ಔಟಾಗದೆ 86) ಮತ್ತು ಇಶಾನ್ ಕಿಶನ್ (59) ಅರ್ಧಶತಕ ಬಾರಿಸಿದ್ದರಿಂದ ಭಾರತ ಮೂರು ವಿಕೆಟ್‌ಗಳನ್ನು ಕಳೆದುಕೊಂಡು 263 ರನ್‌ಗಳ ಗುರಿಯನ್ನು ಬೆನ್ನಟ್ಟಿತು.

IND vs SL: ಲಂಕನ್ನರನ್ನು ಸುಲಭವಾಗಿ ಮಣಿಸಿದ ಯುವ ಭಾರತ; ಹುಡುಗರ ಆಟಕ್ಕೆ ಗೆಲುವಿನ ಆಸೆಯನ್ನೇ ಮರೆತ ಸಿಂಹಳೀಯರು
ವಿಕೆಟ್ ಕಿತ್ತ ಸಂಭ್ರಮದಲ್ಲಿ ಭಾರತ
TV9 Web
| Edited By: |

Updated on:Jul 18, 2021 | 10:25 PM

Share

ಟೀಂ ಇಂಡಿಯಾ ಗೆಲುವಿನೊಂದಿಗೆ ಶ್ರೀಲಂಕಾ ಪ್ರವಾಸವನ್ನು ಪ್ರಾರಂಭಿಸಿದೆ. ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಏಳು ವಿಕೆಟ್‌ಗಳಿಂದ ಜಯಗಳಿಸಿದೆ. ಬೌಲರ್‌ಗಳ ಅದ್ಭುತ ಪ್ರದರ್ಶನದ ನಂತರ ನಾಯಕ ಶಿಖರ್ ಧವನ್ (ಔಟಾಗದೆ 86) ಮತ್ತು ಇಶಾನ್ ಕಿಶನ್ (59) ಅರ್ಧಶತಕ ಬಾರಿಸಿದ್ದರಿಂದ ಭಾರತ ಮೂರು ವಿಕೆಟ್‌ಗಳನ್ನು ಕಳೆದುಕೊಂಡು 263 ರನ್‌ಗಳ ಗುರಿಯನ್ನು ಬೆನ್ನಟ್ಟಿತು. ಪೃಥ್ವಿ ಶಾ (43) ಮತ್ತು ಸೂರ್ಯಕುಮಾರ್ ಯಾದವ್ (31 ನಾಟ್ ಔಟ್) ಕೂಡ ಭಾರತ ಪರ ಬಿರುಗಾಳಿಯ ಇನ್ನಿಂಗ್ಸ್ ಆಡಿದರು. ಟಾಸ್ ಗೆದ್ದ ನಂತರ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ಒಂಬತ್ತು ವಿಕೆಟ್‌ಗೆ 262 ರನ್ ಗಳಿಸಿತು. ಅವರ ಪರ ಚಮಿಕಾ ಕರುಣರತ್ನ ಅಜೇಯ 41 ರನ್ ಗಳಿಸಿದರು. ಮೂರು ಏಕದಿನ ಸರಣಿಯಲ್ಲಿ ಭಾರತ ತಂಡ 1-0 ಮುನ್ನಡೆ ಸಾಧಿಸಿದೆ.

ಭಾರತ ಸೀಮಿತ ಓವರ್‌ಗಳ ತಂಡದಲ್ಲಿ ಕಡಿಮೆ ಅನುಭವಿ ಆಟಗಾರರನ್ನು ಆಯ್ಕೆ ಮಾಡಿದೆ. ಭಾರತವು ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್ ಅವರಿಗೆ ಚೊಚ್ಚಲ ಪಂದ್ಯಗಳನ್ನು ನೀಡಿದರೆ, ರಾಜಪಕ್ಸೆ ಶ್ರೀಲಂಕಾ ಪರ ಚೊಚ್ಚಲ ಪ್ರವೇಶ ಮಾಡಿದರು. ಟಿ 20 ಕ್ರಿಕೆಟ್‌ನಂತೆ ಇಶಾನ್ ಮತ್ತು ಸೂರ್ಯಕುಮಾರ್ ಏಕದಿನ ಪಂದ್ಯಗಳಲ್ಲೂ ಒಟ್ಟಿಗೆ ಪಾದಾರ್ಪಣೆ ಮಾಡಿದರು. ಇಶಾನ್ ತಮ್ಮ ಜನ್ಮದಿನದಂದು ಏಕದಿನ ಪಂದ್ಯಕ್ಕೆ ಪಾದಾರ್ಪಣೆ ಮಾಡಿದ ಎರಡನೇ ಮತ್ತು 16 ನೇ ಆಟಗಾರ. ಗುರ್ಷರನ್ ಸಿಂಗ್ ಅವರು 1990 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಹ್ಯಾಮಿಲ್ಟನ್‌ನಲ್ಲಿ ತಮ್ಮ ಜನ್ಮದಿನದಂದು ಭಾರತಕ್ಕೆ ಪಾದಾರ್ಪಣೆ ಮಾಡಿದರು.

ಮಿಂಚಿದ ಭಾರತೀಯ ಸ್ಪಿನ್ನರ್‌ಗಳು ಇದಕ್ಕೂ ಮೊದಲು ಭಾರತವು ಶ್ರೀಲಂಕಾದ ಒಂಬತ್ತು ವಿಕೆಟ್‌ ಉರುಳಿಸಿ 262 ರನ್‌ಗಳಿಗೆ ಸೀಮಿತಗೊಳಿಸಿತು. ಸ್ಪಿನ್ ಜೋಡಿ ಕುಲದೀಪ್ ಯಾದವ್ ಮತ್ತು ಯುಜ್ವೇಂದ್ರ ಚಹಲ್ ಅವರ ಉತ್ತಮ ಪ್ರದರ್ಶನ ನೀಡಿದರು. ಚಹರ್ 37 ರನ್‌ಗಳಿಗೆ ಎರಡು ವಿಕೆಟ್ ಪಡೆದರೆ, ಕುಲದೀಪ್ (48 ಕ್ಕೆ 2), ಚಹಲ್ (52 ಕ್ಕೆ 2) ತಲಾ ಎರಡು ವಿಕೆಟ್ ಪಡೆದರು. ಆರ್ಥಿಕ ಬೌಲಿಂಗ್ ಮಾಡಿದ ಕ್ರುನಾಲ್ ಪಾಂಡ್ಯ 10 ಓವರ್‌ಗಳಲ್ಲಿ ಕೇವಲ 26 ರನ್‌ ನೀಡಿ ಒಂದು ವಿಕೆಟ್ ಪಡೆದರು. ಭಾರತದ ನಿಖರವಾದ ಬೌಲಿಂಗ್ ಎದುರು ಶ್ರೀಲಂಕಾ ನಿಯಮಿತ ಅವಧಿಯಲ್ಲಿ ವಿಕೆಟ್ ಕಳೆದುಕೊಂಡಿತು ಮತ್ತು ಮೊದಲ ಆರು ಬ್ಯಾಟ್ಸ್‌ಮನ್‌ಗಳು ಎರಡು ಅಂಕೆಗಳನ್ನು ತಲುಪಿದ್ದರೂ ಅರ್ಧಶತಕ ಗಳಿಸಲಿಲ್ಲ. ಎಂಟನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಬಂದ ಚಮಿಕಾ ಕರುಣರತ್ನ ಅಜೇಯ 43 ರನ್ ಗಳಿಸಿ ಅಗ್ರ ಸ್ಕೋರರ್ ಆಗಿದ್ದರೆ, ನಾಯಕ ದಾಸುನ್ ಶಾನಕಾ (39), ಚರಿತ್ ಅಸಲಂಕಾ (38) ಮತ್ತು ಅವಿಷ್ಕಾ ಫರ್ನಾಂಡೊ (32) ಸಹ ಉಪಯುಕ್ತ ಇನ್ನಿಂಗ್ಸ್ ಆಡಿದರು.

Published On - 10:17 pm, Sun, 18 July 21

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!