AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಭಾರತ-ಶ್ರೀಲಂಕಾ ನಡುವಣ ಸರಣಿಯ ವೇಳಾಪಟ್ಟಿಯಲ್ಲಿ ಬದಲಾವಣೆ! ಜುಲೈ 18 ರಿಂದ ಸರಣಿ ಆರಂಭ.. ಹೊಸ ವೇಳಾಪಟ್ಟಿ ಹೀಗಿದೆ

IND vs SL: ಈ ಮೊದಲು ಜುಲೈ 13 ರಿಂದ ಪ್ರಾರಂಭವಾಗಿದ್ದ ಏಕದಿನ ಸರಣಿ ಈಗ ಜುಲೈ 18 ರಿಂದ ಪ್ರಾರಂಭವಾಗಲಿದೆ. ಅದೇ ಸಮಯದಲ್ಲಿ ಟಿ 20 ಸರಣಿಯನ್ನು ಜುಲೈ 25 ರಿಂದ ಆಡಲಾಗುವುದು.

IND vs SL: ಭಾರತ-ಶ್ರೀಲಂಕಾ ನಡುವಣ ಸರಣಿಯ ವೇಳಾಪಟ್ಟಿಯಲ್ಲಿ ಬದಲಾವಣೆ! ಜುಲೈ 18 ರಿಂದ ಸರಣಿ ಆರಂಭ.. ಹೊಸ ವೇಳಾಪಟ್ಟಿ ಹೀಗಿದೆ
ಭಾರತ-ಶ್ರೀಲಂಕಾ
TV9 Web
| Edited By: |

Updated on:Jul 10, 2021 | 2:38 PM

Share

ಟೀಮ್ ಇಂಡಿಯಾದ ಶ್ರೀಲಂಕಾ ಪ್ರವಾಸದ ಮೇಲೆ ಕೊರೊನಾ ತನ್ನ ಪರಿಣಾಮ ಬೀರಿದೆ. ಇಂಗ್ಲೆಂಡ್‌ನಿಂದ ಹಿಂದಿರುಗಿದ ಶ್ರೀಲಂಕಾ ತಂಡದ ಶಿಬಿರದಲ್ಲಿ ಕೊರೊನಾ ಪ್ರಕರಣಗಳು ಕಂಡುಬಂದ ನಂತರ ಪ್ರವಾಸದ ವೇಳಾಪಟ್ಟಿಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ಭಾರತ-ಶ್ರೀಲಂಕಾ ಸರಣಿಯ ಪ್ರಾರಂಭವನ್ನು ಈಗ 5 ದಿನಗಳು ಮುಂದಕ್ಕೆ ತಳ್ಳಲಾಗಿದೆ. ಈ ಮಾಹಿತಿಯನ್ನು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜೇ ಶಾ ಇಬ್ಬರೂ ನೀಡಿದ್ದಾರೆ. ಈ ಮೊದಲು ಜುಲೈ 13 ರಿಂದ ಪ್ರಾರಂಭವಾಗಿದ್ದ ಏಕದಿನ ಸರಣಿ ಈಗ ಜುಲೈ 18 ರಿಂದ ಪ್ರಾರಂಭವಾಗಲಿದೆ. ಅದೇ ಸಮಯದಲ್ಲಿ ಟಿ 20 ಸರಣಿಯನ್ನು ಜುಲೈ 25 ರಿಂದ ಆಡಲಾಗುವುದು. ಹಳೆಯ ವೇಳಾಪಟ್ಟಿಯ ಪ್ರಕಾರ ಈ ಸರಣಿಯನ್ನು ಜುಲೈ 21 ರಿಂದ ಪ್ರಾರಂಭಿಸಬೇಕಿತ್ತು.

ಶ್ರೀಲಂಕಾ ತಂಡದ ಸಹಾಯಕ ಸಿಬ್ಬಂದಿ ಕೊರೊನಾ ಪಾಸಿಟಿವ್ ಎಂದು ಕಂಡುಬಂದ ನಂತರ ಪ್ರವಾಸದ ವೇಳಾಪಟ್ಟಿಯನ್ನು ಬದಲಾಯಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮೊದಲ ಬ್ಯಾಟಿಂಗ್ ತರಬೇತುದಾರ ಗ್ರಾಂಟ್ ಫ್ಲವರ್ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಅವರ ನಂತರ ಅವರ ವೀಡಿಯೊ ಡೇಟಾ ವಿಶ್ಲೇಷಕರಿಗೆ ಕೊರೊನಾ ತಗುಲಿತ್ತು. ಈ ಕಾರಣಗಳನ್ನು ಗಮನದಲ್ಲಿಟ್ಟುಕೊಂಡು ಸರಣಿಯನ್ನು ಮುಂದೂಡಲು ನಿರ್ಧರಿಸಲಾಯಿತು. ಶ್ರೀಲಂಕಾ ತಂಡದ ಶಿಬಿರದಲ್ಲಿ ಕೊರೊನಾ ವೈರಸ್ ಕಂಡು ಬಂದಿರುವುದರಿಂದ ಸರಣಿಯನ್ನು 5 ದಿನಗಳವರೆಗೆ ವಿಸ್ತರಿಸಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜೇ ಶಾ ಶನಿವಾರ ಹೇಳಿದ್ದಾರೆ. ಏಕದಿನ ಸರಣಿ ಈಗ ಜುಲೈ 18 ರಿಂದ ಪ್ರಾರಂಭವಾಗಲಿದೆ.

ಶ್ರೀಲಂಕಾ ಪ್ರವಾಸದ ಹೊಸ ವೇಳಾಪಟ್ಟಿ ಹೊಸ ವೇಳಾಪಟ್ಟಿಯ ಪ್ರಕಾರ, ಏಕದಿನ ಸರಣಿಯ ಎಲ್ಲಾ ಮೂರು ಪಂದ್ಯಗಳನ್ನು ಈ ಮೊದಲು ಜುಲೈ 13, ಜುಲೈ 16 ಮತ್ತು ಜುಲೈ 18 ರಂದು ಆಡಲು ನಿರ್ಧರಿಸಲಾಗಿತ್ತು. ಆದರೆ ಇವುಗಳನ್ನು ಈಗ 18, 20 ಮತ್ತು 23 ರಂದು ಆಡಲಾಗುವುದು. ಅದೇ ಸಮಯದಲ್ಲಿ, ಜುಲೈ 21 ರಿಂದ ಜುಲೈ 25 ರವರೆಗೆ ನಡೆಯಬೇಕಿದ್ದ ಟಿ 20 ಸರಣಿ ಈಗ ಜುಲೈ 25 ಮತ್ತು 29 ರ ನಡುವೆ ನಡೆಯಲಿದೆ. ಆದಾಗ್ಯೂ, ಈ ಎಲ್ಲಾ ಪಂದ್ಯಗಳು ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ.

Published On - 2:32 pm, Sat, 10 July 21

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ