AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Test Championship: 2ನೇ ಟೆಸ್ಟ್ ಗೆಲುವಿನೊಂದಿಗೆ ಡಬ್ಲ್ಯುಟಿಸಿ ಪಾಯಿಂಟ್ಸ್ ಟೇಬಲ್​ನಲ್ಲಿ 2ನೇ ಸ್ಥಾನಕ್ಕೆ ಜಿಗಿದ ಭಾರತ

ಮೊದಲ ಟೆಸ್ಟ್​ ಪಂದ್ಯವನ್ನುಅವಮಾನಕರ ರೀತಿಯಲ್ಲಿ ಸೋತಿದ್ದ ಭಾರತ ಡಬ್ಲ್ಯುಟಿಸಿ ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಜಾರಿತ್ತು. ಆದರೆ ಈ ಗೆಲುವಿನ ನಂತರ ಭಾರತ ಎರಡನೇ ಸ್ಥಾನಕ್ಕೆ ಜಿಗಿದಿದೆ.

World Test Championship: 2ನೇ ಟೆಸ್ಟ್ ಗೆಲುವಿನೊಂದಿಗೆ ಡಬ್ಲ್ಯುಟಿಸಿ ಪಾಯಿಂಟ್ಸ್ ಟೇಬಲ್​ನಲ್ಲಿ 2ನೇ ಸ್ಥಾನಕ್ಕೆ ಜಿಗಿದ ಭಾರತ
ಎರಡನೇ ಟೆಸ್ಟ್​ ಸುಲಭವಾಗಿ ಗೆದ್ದ ಟೀಮ್ ಇಂಡಿಯಾ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Feb 16, 2021 | 4:48 PM

Share

ಇಂಗ್ಲೆಂಡ್ ವಿರುದ್ಧ ಚೆನೈನಲ್ಲಿ ಇಂದು (ಫೆ.16) 317 ರನ್​ಗಳ ಬೃಹತ್ ಅಂತರದ ಗೆಲುವು ಸಾಧಿಸಿದ ನಂತರ ಭಾರತಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ (ಡಬ್ಲ್ಯುಟಿಸಿ) ಪೈನಲ್​ಗೆ ಅರ್ಹತೆ ಗಿಟ್ಟಿಸುವ ಸಾಧ್ಯತೆ ಮತ್ತೊಮ್ಮೆ ಹೆಚ್ಚಾಗಿದೆ. ಕ್ರಿಕೆಟ್ ಪ್ರೇಮಿಗಳಿಗೆ ನೆನಪಿರಬಹುದು. ಇಂಗ್ಲೆಂಡ್ ವಿರುದ್ಧ ಇದೇ ಮೈದಾನದಲ್ಲಿ ಆಡಿದ ಮೊದಲ ಟೆಸ್ಟ್​ ಪಂದ್ಯವನ್ನು ಅವಮಾನಕರ ರೀತಿಯಲ್ಲಿ ಸೋತಿದ್ದ ಭಾರತ ಡಬ್ಲ್ಯುಟಿಸಿ ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಜಾರಿತ್ತು. ಆದರೆ ಈ ಗೆಲುವಿನ ನಂತರ ಭಾರತ ಎರಡನೇ ಸ್ಥಾನಕ್ಕೆ ಜಿಗಿದಿದೆ.

ಈಗಾಗಲೇ ಫೈನಲ್ ಅಡುವ ಅರ್ಹತೆ ಗಿಟ್ಟಿಸಿರುವ ನ್ಯೂಜಿಲೆಂಡ್ ಮೊದಲ ಸ್ಥಾನದಲ್ಲಿದೆ. ಇಂಗ್ಲೆಂಡ್ 4ನೇ ಸ್ಥಾನಕ್ಕೆ ಕುಸಿದಿದೆ ಮತ್ತು ಆಸ್ಟ್ರೇಲಿಯಾ 3ನೇ ಸ್ಥಾನದಲ್ಲಿದೆ.

ಭಾರತ ಫೈನಲ್ ಅಡುವುದು ಇನ್ನೂ ನಿಶ್ಚಿತವಲ್ಲ. ಪಾಯಿಂಟ್ಸ್ ಟೇಬಲ್​ನಲ್ಲಿ ಮೂರನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾ ಕೂಡ ಅರ್ಹತೆ ಗಿಟ್ಟಿಸುವ ಸಾಧ್ಯತೆಯಿದೆ.

ಭಾರತ ಮತ್ತು ಇಂಗ್ಲೆಂಡ್​ ಮಧ್ಯೆ ನಡೆಯುತ್ತಿರುವ ಸರಣಿಯಲ್ಲಿ ಇನ್ನೂ ಎರಡು ಟೆಸ್ಟ್​ ಆಡುವುದು ಬಾಕಿಯಿವೆ. ಭಾರತ 2-1 ಇಲ್ಲವೇ 3-1 ಅಂತರದಿಂದ ಸರಣಿ ಗೆದ್ದರೆ ಭಾರತ ಅರ್ಹತೆ ಪಡೆದುಕೊಂಡುಬಿಡುತ್ತದೆ. ಇಂಗ್ಲೆಂಡ್ ಸರಣಿಯನ್ನು 3-1 ಅಂತರದಿಂದ ತನ್ನದಾಗಿಸಿಕೊಂಡರೆ ಅದು ನ್ಯೂಜಿಲೆಂಡ್ ಜೊತೆ ಲಾರ್ಡ್ಸ್​ನಲ್ಲಿ ಚಾಂಪಿಯನ್​ಶಿಪ್​ಗಾಗಿ ಸೆಣಸುತ್ತದೆ. ಹಾಗೆಯೇ ಒಂದು ಪಕ್ಷ ಸದರಿ ಸರಣಿಯು 1-1 ಇಲ್ಲವೇ 2-2 ರಿಂದ ಸಮವಾದರೆ ಆಸ್ಟ್ರೇಲಿಯಾ ಕ್ವಾಲಿಫೈ ಆಗಲಿದೆ.

Published On - 4:47 pm, Tue, 16 February 21

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ