AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Test Championship: 2ನೇ ಟೆಸ್ಟ್ ಗೆಲುವಿನೊಂದಿಗೆ ಡಬ್ಲ್ಯುಟಿಸಿ ಪಾಯಿಂಟ್ಸ್ ಟೇಬಲ್​ನಲ್ಲಿ 2ನೇ ಸ್ಥಾನಕ್ಕೆ ಜಿಗಿದ ಭಾರತ

ಮೊದಲ ಟೆಸ್ಟ್​ ಪಂದ್ಯವನ್ನುಅವಮಾನಕರ ರೀತಿಯಲ್ಲಿ ಸೋತಿದ್ದ ಭಾರತ ಡಬ್ಲ್ಯುಟಿಸಿ ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಜಾರಿತ್ತು. ಆದರೆ ಈ ಗೆಲುವಿನ ನಂತರ ಭಾರತ ಎರಡನೇ ಸ್ಥಾನಕ್ಕೆ ಜಿಗಿದಿದೆ.

World Test Championship: 2ನೇ ಟೆಸ್ಟ್ ಗೆಲುವಿನೊಂದಿಗೆ ಡಬ್ಲ್ಯುಟಿಸಿ ಪಾಯಿಂಟ್ಸ್ ಟೇಬಲ್​ನಲ್ಲಿ 2ನೇ ಸ್ಥಾನಕ್ಕೆ ಜಿಗಿದ ಭಾರತ
ಎರಡನೇ ಟೆಸ್ಟ್​ ಸುಲಭವಾಗಿ ಗೆದ್ದ ಟೀಮ್ ಇಂಡಿಯಾ
ಅರುಣ್​ ಕುಮಾರ್​ ಬೆಳ್ಳಿ
|

Updated on:Feb 16, 2021 | 4:48 PM

Share

ಇಂಗ್ಲೆಂಡ್ ವಿರುದ್ಧ ಚೆನೈನಲ್ಲಿ ಇಂದು (ಫೆ.16) 317 ರನ್​ಗಳ ಬೃಹತ್ ಅಂತರದ ಗೆಲುವು ಸಾಧಿಸಿದ ನಂತರ ಭಾರತಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ (ಡಬ್ಲ್ಯುಟಿಸಿ) ಪೈನಲ್​ಗೆ ಅರ್ಹತೆ ಗಿಟ್ಟಿಸುವ ಸಾಧ್ಯತೆ ಮತ್ತೊಮ್ಮೆ ಹೆಚ್ಚಾಗಿದೆ. ಕ್ರಿಕೆಟ್ ಪ್ರೇಮಿಗಳಿಗೆ ನೆನಪಿರಬಹುದು. ಇಂಗ್ಲೆಂಡ್ ವಿರುದ್ಧ ಇದೇ ಮೈದಾನದಲ್ಲಿ ಆಡಿದ ಮೊದಲ ಟೆಸ್ಟ್​ ಪಂದ್ಯವನ್ನು ಅವಮಾನಕರ ರೀತಿಯಲ್ಲಿ ಸೋತಿದ್ದ ಭಾರತ ಡಬ್ಲ್ಯುಟಿಸಿ ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಜಾರಿತ್ತು. ಆದರೆ ಈ ಗೆಲುವಿನ ನಂತರ ಭಾರತ ಎರಡನೇ ಸ್ಥಾನಕ್ಕೆ ಜಿಗಿದಿದೆ.

ಈಗಾಗಲೇ ಫೈನಲ್ ಅಡುವ ಅರ್ಹತೆ ಗಿಟ್ಟಿಸಿರುವ ನ್ಯೂಜಿಲೆಂಡ್ ಮೊದಲ ಸ್ಥಾನದಲ್ಲಿದೆ. ಇಂಗ್ಲೆಂಡ್ 4ನೇ ಸ್ಥಾನಕ್ಕೆ ಕುಸಿದಿದೆ ಮತ್ತು ಆಸ್ಟ್ರೇಲಿಯಾ 3ನೇ ಸ್ಥಾನದಲ್ಲಿದೆ.

ಭಾರತ ಫೈನಲ್ ಅಡುವುದು ಇನ್ನೂ ನಿಶ್ಚಿತವಲ್ಲ. ಪಾಯಿಂಟ್ಸ್ ಟೇಬಲ್​ನಲ್ಲಿ ಮೂರನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾ ಕೂಡ ಅರ್ಹತೆ ಗಿಟ್ಟಿಸುವ ಸಾಧ್ಯತೆಯಿದೆ.

ಭಾರತ ಮತ್ತು ಇಂಗ್ಲೆಂಡ್​ ಮಧ್ಯೆ ನಡೆಯುತ್ತಿರುವ ಸರಣಿಯಲ್ಲಿ ಇನ್ನೂ ಎರಡು ಟೆಸ್ಟ್​ ಆಡುವುದು ಬಾಕಿಯಿವೆ. ಭಾರತ 2-1 ಇಲ್ಲವೇ 3-1 ಅಂತರದಿಂದ ಸರಣಿ ಗೆದ್ದರೆ ಭಾರತ ಅರ್ಹತೆ ಪಡೆದುಕೊಂಡುಬಿಡುತ್ತದೆ. ಇಂಗ್ಲೆಂಡ್ ಸರಣಿಯನ್ನು 3-1 ಅಂತರದಿಂದ ತನ್ನದಾಗಿಸಿಕೊಂಡರೆ ಅದು ನ್ಯೂಜಿಲೆಂಡ್ ಜೊತೆ ಲಾರ್ಡ್ಸ್​ನಲ್ಲಿ ಚಾಂಪಿಯನ್​ಶಿಪ್​ಗಾಗಿ ಸೆಣಸುತ್ತದೆ. ಹಾಗೆಯೇ ಒಂದು ಪಕ್ಷ ಸದರಿ ಸರಣಿಯು 1-1 ಇಲ್ಲವೇ 2-2 ರಿಂದ ಸಮವಾದರೆ ಆಸ್ಟ್ರೇಲಿಯಾ ಕ್ವಾಲಿಫೈ ಆಗಲಿದೆ.

Published On - 4:47 pm, Tue, 16 February 21

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ