AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Test Championship: 2ನೇ ಟೆಸ್ಟ್ ಗೆಲುವಿನೊಂದಿಗೆ ಡಬ್ಲ್ಯುಟಿಸಿ ಪಾಯಿಂಟ್ಸ್ ಟೇಬಲ್​ನಲ್ಲಿ 2ನೇ ಸ್ಥಾನಕ್ಕೆ ಜಿಗಿದ ಭಾರತ

ಮೊದಲ ಟೆಸ್ಟ್​ ಪಂದ್ಯವನ್ನುಅವಮಾನಕರ ರೀತಿಯಲ್ಲಿ ಸೋತಿದ್ದ ಭಾರತ ಡಬ್ಲ್ಯುಟಿಸಿ ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಜಾರಿತ್ತು. ಆದರೆ ಈ ಗೆಲುವಿನ ನಂತರ ಭಾರತ ಎರಡನೇ ಸ್ಥಾನಕ್ಕೆ ಜಿಗಿದಿದೆ.

World Test Championship: 2ನೇ ಟೆಸ್ಟ್ ಗೆಲುವಿನೊಂದಿಗೆ ಡಬ್ಲ್ಯುಟಿಸಿ ಪಾಯಿಂಟ್ಸ್ ಟೇಬಲ್​ನಲ್ಲಿ 2ನೇ ಸ್ಥಾನಕ್ಕೆ ಜಿಗಿದ ಭಾರತ
ಎರಡನೇ ಟೆಸ್ಟ್​ ಸುಲಭವಾಗಿ ಗೆದ್ದ ಟೀಮ್ ಇಂಡಿಯಾ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Feb 16, 2021 | 4:48 PM

Share

ಇಂಗ್ಲೆಂಡ್ ವಿರುದ್ಧ ಚೆನೈನಲ್ಲಿ ಇಂದು (ಫೆ.16) 317 ರನ್​ಗಳ ಬೃಹತ್ ಅಂತರದ ಗೆಲುವು ಸಾಧಿಸಿದ ನಂತರ ಭಾರತಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ (ಡಬ್ಲ್ಯುಟಿಸಿ) ಪೈನಲ್​ಗೆ ಅರ್ಹತೆ ಗಿಟ್ಟಿಸುವ ಸಾಧ್ಯತೆ ಮತ್ತೊಮ್ಮೆ ಹೆಚ್ಚಾಗಿದೆ. ಕ್ರಿಕೆಟ್ ಪ್ರೇಮಿಗಳಿಗೆ ನೆನಪಿರಬಹುದು. ಇಂಗ್ಲೆಂಡ್ ವಿರುದ್ಧ ಇದೇ ಮೈದಾನದಲ್ಲಿ ಆಡಿದ ಮೊದಲ ಟೆಸ್ಟ್​ ಪಂದ್ಯವನ್ನು ಅವಮಾನಕರ ರೀತಿಯಲ್ಲಿ ಸೋತಿದ್ದ ಭಾರತ ಡಬ್ಲ್ಯುಟಿಸಿ ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಜಾರಿತ್ತು. ಆದರೆ ಈ ಗೆಲುವಿನ ನಂತರ ಭಾರತ ಎರಡನೇ ಸ್ಥಾನಕ್ಕೆ ಜಿಗಿದಿದೆ.

ಈಗಾಗಲೇ ಫೈನಲ್ ಅಡುವ ಅರ್ಹತೆ ಗಿಟ್ಟಿಸಿರುವ ನ್ಯೂಜಿಲೆಂಡ್ ಮೊದಲ ಸ್ಥಾನದಲ್ಲಿದೆ. ಇಂಗ್ಲೆಂಡ್ 4ನೇ ಸ್ಥಾನಕ್ಕೆ ಕುಸಿದಿದೆ ಮತ್ತು ಆಸ್ಟ್ರೇಲಿಯಾ 3ನೇ ಸ್ಥಾನದಲ್ಲಿದೆ.

ಭಾರತ ಫೈನಲ್ ಅಡುವುದು ಇನ್ನೂ ನಿಶ್ಚಿತವಲ್ಲ. ಪಾಯಿಂಟ್ಸ್ ಟೇಬಲ್​ನಲ್ಲಿ ಮೂರನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾ ಕೂಡ ಅರ್ಹತೆ ಗಿಟ್ಟಿಸುವ ಸಾಧ್ಯತೆಯಿದೆ.

ಭಾರತ ಮತ್ತು ಇಂಗ್ಲೆಂಡ್​ ಮಧ್ಯೆ ನಡೆಯುತ್ತಿರುವ ಸರಣಿಯಲ್ಲಿ ಇನ್ನೂ ಎರಡು ಟೆಸ್ಟ್​ ಆಡುವುದು ಬಾಕಿಯಿವೆ. ಭಾರತ 2-1 ಇಲ್ಲವೇ 3-1 ಅಂತರದಿಂದ ಸರಣಿ ಗೆದ್ದರೆ ಭಾರತ ಅರ್ಹತೆ ಪಡೆದುಕೊಂಡುಬಿಡುತ್ತದೆ. ಇಂಗ್ಲೆಂಡ್ ಸರಣಿಯನ್ನು 3-1 ಅಂತರದಿಂದ ತನ್ನದಾಗಿಸಿಕೊಂಡರೆ ಅದು ನ್ಯೂಜಿಲೆಂಡ್ ಜೊತೆ ಲಾರ್ಡ್ಸ್​ನಲ್ಲಿ ಚಾಂಪಿಯನ್​ಶಿಪ್​ಗಾಗಿ ಸೆಣಸುತ್ತದೆ. ಹಾಗೆಯೇ ಒಂದು ಪಕ್ಷ ಸದರಿ ಸರಣಿಯು 1-1 ಇಲ್ಲವೇ 2-2 ರಿಂದ ಸಮವಾದರೆ ಆಸ್ಟ್ರೇಲಿಯಾ ಕ್ವಾಲಿಫೈ ಆಗಲಿದೆ.

Published On - 4:47 pm, Tue, 16 February 21

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ