AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾ ಆಟಗಾರ ಪಿಯೂಷ್ ಚಾವ್ಲಾಗೆ ಪಿತೃ ವಿಯೋಗ; ಕೊರೊನಾ ಸೋಂಕಿಗೆ ಬಲಿ

ನನ್ನ ತಂದೆ ಪ್ರಮೋದ್ ಚಾವ್ಲಾ ಸೋಮವಾರ ಬೆಳಿಗ್ಗೆ ನಿಧನರಾದರು ಎಂದು ನಾವು ಬಹಳ ದುಃಖದಿಂದ ತಿಳಿಸಬೇಕಾಗಿದೆ. ಅವರು ಕೋವಿಡ್ ಪಾಸಿಟಿವ್ ಆಗಿದ್ದರು

ಟೀಂ ಇಂಡಿಯಾ ಆಟಗಾರ ಪಿಯೂಷ್ ಚಾವ್ಲಾಗೆ ಪಿತೃ ವಿಯೋಗ; ಕೊರೊನಾ ಸೋಂಕಿಗೆ ಬಲಿ
ಇನ್ನು ಪ್ರಸ್ತುತ ಆಡುತ್ತಿರುವ ಬೌಲರುಗಳಲ್ಲಿ ಅಮಿತ್ ಮಿಶ್ರಾ ನಂತರದ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್ ಲೆಗ್ ಸ್ಪಿನ್ನರ್ ಪಿಯೂಷ್ ಚಾವ್ಲಾ ಇದ್ದಾರೆ. ಚಾವ್ಲಾ ಇದುವರೆಗೆ 156 ವಿಕೆಟ್ ಪಡೆದಿದ್ದಾರೆ. ಮುಂದಿನ 7 ಪಂದ್ಯಗಳಲ್ಲಿ ಅವಕಾಶ ಲಭಿಸಿದರೆ ದಾಖಲೆ ಬರೆಯುವ ಚಾನ್ಸ್​ ಕೂಡ ಚಾವ್ಲಾ ಮುಂದಿದೆ.
ಪೃಥ್ವಿಶಂಕರ
|

Updated on:May 10, 2021 | 3:36 PM

Share

ಕೊರೊನಾ ವೈರಸ್ ಸಾಂಕ್ರಾಮಿಕ ರೋಗವು ಇದುವರೆಗೂ ಅನೇಕ ಜನರನ್ನು ಬಲಿ ತೆಗೆದುಕೊಂಡಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ನೋವನ್ನು ಹೇಳ ತೀರದಾಗಿದೆ. ಅನೇಕ ಕ್ರಿಕೆಟಿಗರು ಸಹ ಇದಕ್ಕೆ ಬಲಿಯಾಗಿದ್ದರೆ, ಅವರಲ್ಲಿ ಅನೇಕರು ತಮ್ಮ ಕುಟುಂಬವನ್ನೂ ಕಳೆದುಕೊಂಡಿದ್ದಾರೆ. ಅದರಲ್ಲಿ ಟೀಂ ಇಂಡಿಯಾ ಆಟಗಾರ ಪಿಯೂಷ್ ಚಾವ್ಲಾ ಕೂಡ ಒಬ್ಬರಾಗಿದ್ದಾರೆ. ಅವರ ತಂದೆ ಪ್ರಮೋದ್ ಕುಮಾರ್ ಚಾವ್ಲಾ ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದ ಅವರನ್ನು ದೆಹಲಿಯ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪಿಯೂಷ್ ಚಾವ್ಲಾ ಅವರೇ ತಮ್ಮ ತಂದೆಯ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವ ಮೂಲಕ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಇದಕ್ಕೂ ಮೊದಲು ರಾಜಸ್ಥಾನ್ ರಾಯಲ್ಸ್ ಪರ ಆಡಿದ ವೇಗದ ಬೌಲರ್ ಚೇತನ್ ಸಕಾರಿಯಾ ಅವರ ತಂದೆ ಕೋವಿಡ್ -19ನಿಂದಾಗಿ ಭಾನುವಾರ ನಿಧನರಾದರು. ಅವರ ತಂದೆ ಇತ್ತೀಚೆಗೆ ಕೊರೊನಾ ಪಾಸಿಟಿವ್ ಆಗಿದ್ದರು, ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದರು.

ಪಿಯೂಷ್ ಚಾವ್ಲಾ ಮಾಹಿತಿ ನೀಡಿದರು ಪಿಯುಷ್ ಚಾವ್ಲಾ ಅವರು ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ತಂದೆಯ ಚಿತ್ರವನ್ನು ಪೋಸ್ಟ್ ಮಾಡಿ, ಇಂದು ಅವರು ಇಲ್ಲದೆ ಜೀವನ ಒಂದೇ ಆಗಿಲ್ಲ, ಇಂದು ನನ್ನ ಶಕ್ತಿಯ ಸ್ತಂಭ ಕಳಚಿ ಹೋಯಿತು ಎಂದು ಬರೆದುಕೊಂಡಿದ್ದಾರೆ. ಅವರು ಹಂಚಿಕೊಂಡ ಚಿತ್ರದಲ್ಲಿ, ನನ್ನ ತಂದೆ ಪ್ರಮೋದ್ ಚಾವ್ಲಾ ಸೋಮವಾರ ಬೆಳಿಗ್ಗೆ ನಿಧನರಾದರು ಎಂದು ನಾವು ಬಹಳ ದುಃಖದಿಂದ ತಿಳಿಸಬೇಕಾಗಿದೆ. ಅವರು ಕೋವಿಡ್ ಪಾಸಿಟಿವ್ ಆಗಿದ್ದರು ಮತ್ತು ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಬರೆದುಕೊಂಡಿದ್ದಾರೆ.

ಮುಂಬೈ ಇಂಡಿಯನ್ಸ್ ದುಃಖ ವ್ಯಕ್ತಪಡಿಸಿದೆ ಪಿಯೂಷ್ ಚಾವ್ಲಾ ಅವರು ಮುಂಬೈ ಇಂಡಿಯನ್ಸ್ ಜೊತೆ ಕೋಚಿಂಗ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾರೆ. ಮುಂಬೈ ಟ್ವೀಟ್ ಮಾಡಿ, ಪಿಯೂಷ್ ಚಾವ್ಲಾ ತನ್ನ ತಂದೆಯನ್ನು ಕಳೆದುಕೊಂಡಿದ್ದಾರೆ ಈ ನೋವಿನ ಸಮಯದಲ್ಲಿ ನಾವು ಪಿಯೂಷ್ ಮತ್ತು ಅವರ ಕುಟುಂಬದೊಂದಿಗೆ ಇದ್ದೇವೆ ಎಂದು ಬರೆದುಕೊಂಡಿದೆ.

Published On - 3:35 pm, Mon, 10 May 21

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ