AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾ ಆಟಗಾರ ಪಿಯೂಷ್ ಚಾವ್ಲಾಗೆ ಪಿತೃ ವಿಯೋಗ; ಕೊರೊನಾ ಸೋಂಕಿಗೆ ಬಲಿ

ನನ್ನ ತಂದೆ ಪ್ರಮೋದ್ ಚಾವ್ಲಾ ಸೋಮವಾರ ಬೆಳಿಗ್ಗೆ ನಿಧನರಾದರು ಎಂದು ನಾವು ಬಹಳ ದುಃಖದಿಂದ ತಿಳಿಸಬೇಕಾಗಿದೆ. ಅವರು ಕೋವಿಡ್ ಪಾಸಿಟಿವ್ ಆಗಿದ್ದರು

ಟೀಂ ಇಂಡಿಯಾ ಆಟಗಾರ ಪಿಯೂಷ್ ಚಾವ್ಲಾಗೆ ಪಿತೃ ವಿಯೋಗ; ಕೊರೊನಾ ಸೋಂಕಿಗೆ ಬಲಿ
ಇನ್ನು ಪ್ರಸ್ತುತ ಆಡುತ್ತಿರುವ ಬೌಲರುಗಳಲ್ಲಿ ಅಮಿತ್ ಮಿಶ್ರಾ ನಂತರದ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್ ಲೆಗ್ ಸ್ಪಿನ್ನರ್ ಪಿಯೂಷ್ ಚಾವ್ಲಾ ಇದ್ದಾರೆ. ಚಾವ್ಲಾ ಇದುವರೆಗೆ 156 ವಿಕೆಟ್ ಪಡೆದಿದ್ದಾರೆ. ಮುಂದಿನ 7 ಪಂದ್ಯಗಳಲ್ಲಿ ಅವಕಾಶ ಲಭಿಸಿದರೆ ದಾಖಲೆ ಬರೆಯುವ ಚಾನ್ಸ್​ ಕೂಡ ಚಾವ್ಲಾ ಮುಂದಿದೆ.
ಪೃಥ್ವಿಶಂಕರ
|

Updated on:May 10, 2021 | 3:36 PM

Share

ಕೊರೊನಾ ವೈರಸ್ ಸಾಂಕ್ರಾಮಿಕ ರೋಗವು ಇದುವರೆಗೂ ಅನೇಕ ಜನರನ್ನು ಬಲಿ ತೆಗೆದುಕೊಂಡಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ನೋವನ್ನು ಹೇಳ ತೀರದಾಗಿದೆ. ಅನೇಕ ಕ್ರಿಕೆಟಿಗರು ಸಹ ಇದಕ್ಕೆ ಬಲಿಯಾಗಿದ್ದರೆ, ಅವರಲ್ಲಿ ಅನೇಕರು ತಮ್ಮ ಕುಟುಂಬವನ್ನೂ ಕಳೆದುಕೊಂಡಿದ್ದಾರೆ. ಅದರಲ್ಲಿ ಟೀಂ ಇಂಡಿಯಾ ಆಟಗಾರ ಪಿಯೂಷ್ ಚಾವ್ಲಾ ಕೂಡ ಒಬ್ಬರಾಗಿದ್ದಾರೆ. ಅವರ ತಂದೆ ಪ್ರಮೋದ್ ಕುಮಾರ್ ಚಾವ್ಲಾ ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದ ಅವರನ್ನು ದೆಹಲಿಯ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪಿಯೂಷ್ ಚಾವ್ಲಾ ಅವರೇ ತಮ್ಮ ತಂದೆಯ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವ ಮೂಲಕ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಇದಕ್ಕೂ ಮೊದಲು ರಾಜಸ್ಥಾನ್ ರಾಯಲ್ಸ್ ಪರ ಆಡಿದ ವೇಗದ ಬೌಲರ್ ಚೇತನ್ ಸಕಾರಿಯಾ ಅವರ ತಂದೆ ಕೋವಿಡ್ -19ನಿಂದಾಗಿ ಭಾನುವಾರ ನಿಧನರಾದರು. ಅವರ ತಂದೆ ಇತ್ತೀಚೆಗೆ ಕೊರೊನಾ ಪಾಸಿಟಿವ್ ಆಗಿದ್ದರು, ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದರು.

ಪಿಯೂಷ್ ಚಾವ್ಲಾ ಮಾಹಿತಿ ನೀಡಿದರು ಪಿಯುಷ್ ಚಾವ್ಲಾ ಅವರು ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ತಂದೆಯ ಚಿತ್ರವನ್ನು ಪೋಸ್ಟ್ ಮಾಡಿ, ಇಂದು ಅವರು ಇಲ್ಲದೆ ಜೀವನ ಒಂದೇ ಆಗಿಲ್ಲ, ಇಂದು ನನ್ನ ಶಕ್ತಿಯ ಸ್ತಂಭ ಕಳಚಿ ಹೋಯಿತು ಎಂದು ಬರೆದುಕೊಂಡಿದ್ದಾರೆ. ಅವರು ಹಂಚಿಕೊಂಡ ಚಿತ್ರದಲ್ಲಿ, ನನ್ನ ತಂದೆ ಪ್ರಮೋದ್ ಚಾವ್ಲಾ ಸೋಮವಾರ ಬೆಳಿಗ್ಗೆ ನಿಧನರಾದರು ಎಂದು ನಾವು ಬಹಳ ದುಃಖದಿಂದ ತಿಳಿಸಬೇಕಾಗಿದೆ. ಅವರು ಕೋವಿಡ್ ಪಾಸಿಟಿವ್ ಆಗಿದ್ದರು ಮತ್ತು ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಬರೆದುಕೊಂಡಿದ್ದಾರೆ.

ಮುಂಬೈ ಇಂಡಿಯನ್ಸ್ ದುಃಖ ವ್ಯಕ್ತಪಡಿಸಿದೆ ಪಿಯೂಷ್ ಚಾವ್ಲಾ ಅವರು ಮುಂಬೈ ಇಂಡಿಯನ್ಸ್ ಜೊತೆ ಕೋಚಿಂಗ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾರೆ. ಮುಂಬೈ ಟ್ವೀಟ್ ಮಾಡಿ, ಪಿಯೂಷ್ ಚಾವ್ಲಾ ತನ್ನ ತಂದೆಯನ್ನು ಕಳೆದುಕೊಂಡಿದ್ದಾರೆ ಈ ನೋವಿನ ಸಮಯದಲ್ಲಿ ನಾವು ಪಿಯೂಷ್ ಮತ್ತು ಅವರ ಕುಟುಂಬದೊಂದಿಗೆ ಇದ್ದೇವೆ ಎಂದು ಬರೆದುಕೊಂಡಿದೆ.

Published On - 3:35 pm, Mon, 10 May 21

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ