AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾ ಆಟಗಾರ ಪಿಯೂಷ್ ಚಾವ್ಲಾಗೆ ಪಿತೃ ವಿಯೋಗ; ಕೊರೊನಾ ಸೋಂಕಿಗೆ ಬಲಿ

ನನ್ನ ತಂದೆ ಪ್ರಮೋದ್ ಚಾವ್ಲಾ ಸೋಮವಾರ ಬೆಳಿಗ್ಗೆ ನಿಧನರಾದರು ಎಂದು ನಾವು ಬಹಳ ದುಃಖದಿಂದ ತಿಳಿಸಬೇಕಾಗಿದೆ. ಅವರು ಕೋವಿಡ್ ಪಾಸಿಟಿವ್ ಆಗಿದ್ದರು

ಟೀಂ ಇಂಡಿಯಾ ಆಟಗಾರ ಪಿಯೂಷ್ ಚಾವ್ಲಾಗೆ ಪಿತೃ ವಿಯೋಗ; ಕೊರೊನಾ ಸೋಂಕಿಗೆ ಬಲಿ
ಇನ್ನು ಪ್ರಸ್ತುತ ಆಡುತ್ತಿರುವ ಬೌಲರುಗಳಲ್ಲಿ ಅಮಿತ್ ಮಿಶ್ರಾ ನಂತರದ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್ ಲೆಗ್ ಸ್ಪಿನ್ನರ್ ಪಿಯೂಷ್ ಚಾವ್ಲಾ ಇದ್ದಾರೆ. ಚಾವ್ಲಾ ಇದುವರೆಗೆ 156 ವಿಕೆಟ್ ಪಡೆದಿದ್ದಾರೆ. ಮುಂದಿನ 7 ಪಂದ್ಯಗಳಲ್ಲಿ ಅವಕಾಶ ಲಭಿಸಿದರೆ ದಾಖಲೆ ಬರೆಯುವ ಚಾನ್ಸ್​ ಕೂಡ ಚಾವ್ಲಾ ಮುಂದಿದೆ.
ಪೃಥ್ವಿಶಂಕರ
|

Updated on:May 10, 2021 | 3:36 PM

Share

ಕೊರೊನಾ ವೈರಸ್ ಸಾಂಕ್ರಾಮಿಕ ರೋಗವು ಇದುವರೆಗೂ ಅನೇಕ ಜನರನ್ನು ಬಲಿ ತೆಗೆದುಕೊಂಡಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ನೋವನ್ನು ಹೇಳ ತೀರದಾಗಿದೆ. ಅನೇಕ ಕ್ರಿಕೆಟಿಗರು ಸಹ ಇದಕ್ಕೆ ಬಲಿಯಾಗಿದ್ದರೆ, ಅವರಲ್ಲಿ ಅನೇಕರು ತಮ್ಮ ಕುಟುಂಬವನ್ನೂ ಕಳೆದುಕೊಂಡಿದ್ದಾರೆ. ಅದರಲ್ಲಿ ಟೀಂ ಇಂಡಿಯಾ ಆಟಗಾರ ಪಿಯೂಷ್ ಚಾವ್ಲಾ ಕೂಡ ಒಬ್ಬರಾಗಿದ್ದಾರೆ. ಅವರ ತಂದೆ ಪ್ರಮೋದ್ ಕುಮಾರ್ ಚಾವ್ಲಾ ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದ ಅವರನ್ನು ದೆಹಲಿಯ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪಿಯೂಷ್ ಚಾವ್ಲಾ ಅವರೇ ತಮ್ಮ ತಂದೆಯ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವ ಮೂಲಕ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಇದಕ್ಕೂ ಮೊದಲು ರಾಜಸ್ಥಾನ್ ರಾಯಲ್ಸ್ ಪರ ಆಡಿದ ವೇಗದ ಬೌಲರ್ ಚೇತನ್ ಸಕಾರಿಯಾ ಅವರ ತಂದೆ ಕೋವಿಡ್ -19ನಿಂದಾಗಿ ಭಾನುವಾರ ನಿಧನರಾದರು. ಅವರ ತಂದೆ ಇತ್ತೀಚೆಗೆ ಕೊರೊನಾ ಪಾಸಿಟಿವ್ ಆಗಿದ್ದರು, ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದರು.

ಪಿಯೂಷ್ ಚಾವ್ಲಾ ಮಾಹಿತಿ ನೀಡಿದರು ಪಿಯುಷ್ ಚಾವ್ಲಾ ಅವರು ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ತಂದೆಯ ಚಿತ್ರವನ್ನು ಪೋಸ್ಟ್ ಮಾಡಿ, ಇಂದು ಅವರು ಇಲ್ಲದೆ ಜೀವನ ಒಂದೇ ಆಗಿಲ್ಲ, ಇಂದು ನನ್ನ ಶಕ್ತಿಯ ಸ್ತಂಭ ಕಳಚಿ ಹೋಯಿತು ಎಂದು ಬರೆದುಕೊಂಡಿದ್ದಾರೆ. ಅವರು ಹಂಚಿಕೊಂಡ ಚಿತ್ರದಲ್ಲಿ, ನನ್ನ ತಂದೆ ಪ್ರಮೋದ್ ಚಾವ್ಲಾ ಸೋಮವಾರ ಬೆಳಿಗ್ಗೆ ನಿಧನರಾದರು ಎಂದು ನಾವು ಬಹಳ ದುಃಖದಿಂದ ತಿಳಿಸಬೇಕಾಗಿದೆ. ಅವರು ಕೋವಿಡ್ ಪಾಸಿಟಿವ್ ಆಗಿದ್ದರು ಮತ್ತು ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಬರೆದುಕೊಂಡಿದ್ದಾರೆ.

ಮುಂಬೈ ಇಂಡಿಯನ್ಸ್ ದುಃಖ ವ್ಯಕ್ತಪಡಿಸಿದೆ ಪಿಯೂಷ್ ಚಾವ್ಲಾ ಅವರು ಮುಂಬೈ ಇಂಡಿಯನ್ಸ್ ಜೊತೆ ಕೋಚಿಂಗ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾರೆ. ಮುಂಬೈ ಟ್ವೀಟ್ ಮಾಡಿ, ಪಿಯೂಷ್ ಚಾವ್ಲಾ ತನ್ನ ತಂದೆಯನ್ನು ಕಳೆದುಕೊಂಡಿದ್ದಾರೆ ಈ ನೋವಿನ ಸಮಯದಲ್ಲಿ ನಾವು ಪಿಯೂಷ್ ಮತ್ತು ಅವರ ಕುಟುಂಬದೊಂದಿಗೆ ಇದ್ದೇವೆ ಎಂದು ಬರೆದುಕೊಂಡಿದೆ.

Published On - 3:35 pm, Mon, 10 May 21

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!