AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asian Games 2026: ಏಷ್ಯನ್ ಗೇಮ್ಸ್​ಗೆ ಹಾಲಿ ಚಾಂಪಿಯನ್ ಭಾರತ ಹಾಕಿ ತಂಡ ಪ್ರಕಟ

Asian Games Hockey India: ಹಾಕಿ ಇಂಡಿಯಾ 20ನೇ ಏಷ್ಯನ್ ಗೇಮ್ಸ್‌ಗಾಗಿ 20 ಸದಸ್ಯರ ಭಾರತೀಯ ಪುರುಷರ ಹಾಕಿ ತಂಡವನ್ನು ಪ್ರಕಟಿಸಿದೆ. ಹರ್ಮನ್‌ಪ್ರೀತ್ ಸಿಂಗ್ ನಾಯಕತ್ವದಲ್ಲಿ, ಹಾಲಿ ಚಾಂಪಿಯನ್ ಭಾರತ ತಂಡ ಐಚಿ-ನಗೋಯಾದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದು, 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ನೇರವಾಗಿ ಅರ್ಹತೆ ಪಡೆಯುವ ಗುರಿ ಹೊಂದಿದೆ. ಅನುಭವಿ ಮನ್‌ಪ್ರೀತ್ ಸಿಂಗ್ ಸಹ ತಂಡದಲ್ಲಿದ್ದು, ಸೆಪ್ಟೆಂಬರ್ 20 ರಂದು ಇಂಡೋನೇಷ್ಯಾ ವಿರುದ್ಧ ಭಾರತ ತನ್ನ ಅಭಿಯಾನ ಆರಂಭಿಸಲಿದೆ.

Asian Games 2026: ಏಷ್ಯನ್ ಗೇಮ್ಸ್​ಗೆ ಹಾಲಿ ಚಾಂಪಿಯನ್ ಭಾರತ ಹಾಕಿ ತಂಡ ಪ್ರಕಟ
Hockey India
ಪೃಥ್ವಿಶಂಕರ
|

Updated on: Jul 29, 2026 | 3:01 PM

Share

ಜಪಾನ್‌ನ ಐಚಿ-ನಗೋಯಾದಲ್ಲಿ ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 4 ರವರೆಗೆ ನಡೆಯಲಿರುವ 20 ನೇ ಏಷ್ಯನ್ ಕ್ರೀಡಾಕೂಟಕ್ಕೆ ( Asian Games) ಹಾಕಿ ಇಂಡಿಯಾ (Hockey India) 20 ಸದಸ್ಯರ ಭಾರತೀಯ ಪುರುಷರ ಹಾಕಿ ತಂಡವನ್ನು ಪ್ರಕಟಿಸಿದೆ. ಹಾಲಿ ಏಷ್ಯನ್ ಚಾಂಪಿಯನ್ ಆಗಿರುವ ಭಾರತ ತಂಡವನ್ನು ಹರ್ಮನ್‌ಪ್ರೀತ್ ಸಿಂಗ್ (Harmanpreet Singh) ಮುನ್ನಡೆಸಲಿದ್ದು, ತಂಡದ ಪರ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ಅನುಭವಿ ಆಟಗಾರ, ಮಿಡ್‌ಫೀಲ್ಡರ್ ಮನ್ಪ್ರೀತ್ ಸಿಂಗ್ ಕೂಡ ಈ ತಂಡದಲ್ಲಿದ್ದಾರೆ. ಈ ಕ್ರೀಡಾಕೂಟದಲ್ಲಿ ಭಾರತ ತಂಡ ತನ್ನ ಹಾಲಿ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳುವುದರ ಜೊತೆಗೆ 2028 ರಲ್ಲಿ ನಡೆಯಲಿರುವ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ನೇರವಾಗಿ ಅರ್ಹತೆ ಪಡೆಯುವ ಇರಾದೆಯೊಂದಿಗೆ ಕಣಕ್ಕಿಳಿಯಲಿದೆ.

12 ತಂಡಗಳು ಭಾಗಿ

ಈ ಕ್ರೀಡಾಕೂಟದಲ್ಲಿ 12 ದೇಶಗಳ ತಂಡಗಳು ಭಾಗವಹಿಸುತ್ತಿದ್ದು, ತಲಾ 6 ತಂಡಗಳ ಎರಡು ಗುಂಪುಗಳನ್ನಾಗಿ ವಿಂಗಡಿಸಲಾಗಿದೆ. ಅದರಲ್ಲಿ ಹಾಲಿ ಚಾಂಪಿಯನ್ ಭಾರತ ಆತಿಥೇಯ ಜಪಾನ್, ಕೊರಿಯಾ, ಬಾಂಗ್ಲಾದೇಶ, ಶ್ರೀಲಂಕಾ ಮತ್ತು ಇಂಡೋನೇಷ್ಯಾ ಜೊತೆಗೆ ಪೂಲ್ ಎ ನಲ್ಲಿ ಸ್ಥಾನ ಪಡೆದಿದೆ. ಹಾಗೆಯೇ ಚೀನಾ, ಚೈನೀಸ್ ತೈಪೆ, ಕಝಾಕಿಸ್ತಾನ್, ಮಲೇಷ್ಯಾ, ಓಮನ್, ಪಾಕಿಸ್ತಾನ ತಂಡಗಳು ಪೂಲ್ ಬಿ ನಲ್ಲಿ ಸ್ಥಾನ ಪಡೆದಿವೆ. ಎಲ್ಲಾ ಪಂದ್ಯಗಳು ಕಾಕಮಿಗಹರಾದ ಗಿಫು ಪ್ರಿಫೆಕ್ಚರಲ್ ಗ್ರೀನ್ ಕ್ರೀಡಾಂಗಣದಲ್ಲಿ ನಡೆಯಲಿವೆ.

ಭಾರತ ಹಾಕಿ ತಂಡ ಸೆಪ್ಟೆಂಬರ್ 20 ರಂದು ಇಂಡೋನೇಷ್ಯಾ ವಿರುದ್ಧ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಇದರ ನಂತರ ಸೆಪ್ಟೆಂಬರ್ 22 ರಂದು ಶ್ರೀಲಂಕಾ, ಸೆಪ್ಟೆಂಬರ್ 24 ರಂದು ದಕ್ಷಿಣ ಕೊರಿಯಾ, ಸೆಪ್ಟೆಂಬರ್ 26 ರಂದು ಜಪಾನ್ ಮತ್ತು ಸೆಪ್ಟೆಂಬರ್ 28 ರಂದು ಬಾಂಗ್ಲಾದೇಶ ವಿರುದ್ಧ ಪಂದ್ಯಗಳನ್ನು ಆಡಲಿದೆ.

ಸಂಪೂರ್ಣ ನಂಬಿಕೆ ನನಗಿದೆ

ತಂಡದ ಪ್ರದರ್ಶನದ ಬಗ್ಗೆ ಮಾತನಾಡಿದ ನಾಯಕ ಹರ್ಮನ್‌ಪ್ರೀತ್ ಸಿಂಗ್, ‘ಯುವಕರಾಗಲಿ ಅಥವಾ ಹಿರಿಯರಾಗಲಿ, ಎಲ್ಲರೂ ತಮ್ಮ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುತ್ತಾರೆ ಎಂಬ ಸಂಪೂರ್ಣ ನಂಬಿಕೆ ನನಗಿದೆ. ಯಾವುದೇ ಒತ್ತಡವಿಲ್ಲದೆ ಆಟವನ್ನು ಆನಂದಿಸುವುದು ಮತ್ತು ನಮ್ಮ ಜವಾಬ್ದಾರಿಗಳನ್ನು ಅರ್ಥಮಾಡಿಕೊಳ್ಳುವುದು ನಮ್ಮ ಮುಖ್ಯ ಗುರಿಯಾಗಿದೆ’ ಎಂದಿದ್ದಾರೆ.

ಏಷ್ಯನ್ ಗೇಮ್ಸ್‌ ಕ್ರಿಕೆಟ್ ವೇಳಾಪಟ್ಟಿ ಪ್ರಕಟ; ಹೀಗಾದ್ರೆ ಮಾತ್ರ ಭಾರತ- ಪಾಕ್ ಮುಖಾಮುಖಿ

ಭಾರತ ಹಾಕಿ ತಂಡ

ಗೋಲ್‌ಕೀಪರ್‌ಗಳು: ಮೋಹಿತ್ ಎಚ್‌ಎಸ್, ಸೂರಜ್ ಕರ್ಕೇರಾ.

ಡಿಫೆಂಡರ್ಸ್: ಜರ್ಮನ್‌ಪ್ರೀತ್ ಸಿಂಗ್, ಹರ್ಮನ್‌ಪ್ರೀತ್ ಸಿಂಗ್ (ನಾಯಕ), ಅಮಿತ್ ರೋಹಿದಾಸ್, ಜುಗ್ರಾಜ್ ಸಿಂಗ್, ಸಂಜಯ್, ಸುಮಿತ್, ಯಶ್‌ದೀಪ್ ಸಿವಾಚ್.

ಮಿಡ್‌ಫೀಲ್ಡರ್‌ಗಳು: ರಾಜಿಂದರ್ ಸಿಂಗ್, ರಾಜ್ ಕುಮಾರ್ ಪಾಲ್, ಹಾರ್ದಿಕ್ ಸಿಂಗ್, ಮನ್‌ಪ್ರೀತ್ ಸಿಂಗ್, ನೀಲಕಂಠ ಶರ್ಮಾ, ವಿವೇಕ್ ಸಾಗರ್ ಪ್ರಸಾದ್.

ಫಾರ್ವರ್ಡ್‌ಗಳು: ದಿಲ್‌ಪ್ರೀತ್ ಸಿಂಗ್, ಶಿಲಾನಂದ್ ಲಾಕ್ರಾ, ಸುಖಜೀತ್ ಸಿಂಗ್, ಮನ್‌ದೀಪ್ ಸಿಂಗ್, ಅಭಿಷೇಕ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ