AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ.. ತಂಡದಲ್ಲಿ ಸ್ಥಾನ ಪಡೆದ ಕನ್ನಡಿಗ ಪ್ರಸಿದ್ಧ್ ಕೃಷ್ಣ!

India ODI Squad: ತಂಡದಲ್ಲಿ ಪ್ರಸಿದ್ಧ್​ ಕೃಷ್ಣರ ಆಯ್ಕೆಯ ಬಗ್ಗೆ ಯಾರಿಗೂ ಸುಳಿವು ಇರಲಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಅವರ ಆಯ್ಕೆ ಆಶ್ಚರ್ಯಕಾರಿಯಾಗಿದೆ. ಕೊಹ್ಲಿ ತಂಡದ ನಾಯಕತ್ವವನ್ನು ನಿರ್ವಹಿಸಲಿದ್ದಾರೆ.

India vs England: ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ.. ತಂಡದಲ್ಲಿ ಸ್ಥಾನ ಪಡೆದ ಕನ್ನಡಿಗ ಪ್ರಸಿದ್ಧ್ ಕೃಷ್ಣ!
ಪ್ರಸಿದ್ಧ್ ಕೃಷ್ಣ
ಪೃಥ್ವಿಶಂಕರ
| Updated By: Digi Tech Desk|

Updated on:Mar 19, 2021 | 1:30 PM

Share

ಇಂಗ್ಲೆಂಡ್ ವಿರುದ್ಧದ 3 ಏಕದಿನ ಸರಣಿಗೆ ಬಿಸಿಸಿಐ, ಟೀಮ್ ಇಂಡಿಯಾವನ್ನು ಘೋಷಿಸಿದೆ. ಕ್ರುನಾಲ್ ಪಾಂಡ್ಯ ಏಕದಿನ ತಂಡಕ್ಕೆ ಮರಳಿದ್ದಾರೆ. ಅದೇ ಸಮಯದಲ್ಲಿ ಪ್ರಸಿದ್ಧ ಕೃಷ್ಣ ಅವರಿಗೆ ಬೌಲಿಂಗ್ ವಿಭಾಗದಲ್ಲಿ ಅವಕಾಶ ಸಿಕ್ಕಿದೆ. ತಂಡದಲ್ಲಿ ಪ್ರಸಿದ್ಧ್​ ಕೃಷ್ಣರ ಆಯ್ಕೆಯ ಬಗ್ಗೆ ಯಾರಿಗೂ ಸುಳಿವು ಇರಲಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಅವರ ಆಯ್ಕೆ ಆಶ್ಚರ್ಯಕಾರಿಯಾಗಿದೆ. ಕೊಹ್ಲಿ ತಂಡದ ನಾಯಕತ್ವವನ್ನು ನಿರ್ವಹಿಸಲಿದ್ದಾರೆ. ಏಕದಿನ ಸರಣಿಗೆ ತಂಡವನ್ನು ಆಯ್ಕೆ ಮಾಡುವ ಮೊದಲು ರೋಹಿತ್ ಶರ್ಮಾ ಅವರಂತಹ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡುತ್ತಾರೆ ಎಂಬ ವರದಿಗಳೂ ಬಂದವು. ಆದರೆ, ಉಪನಾಯಕನಾಗಿ ಹಿಟ್ಮ್ಯಾನ್ ಏಕದಿನ ತಂಡದ ಭಾಗವಾಗಿದ್ದಾರೆ.

ಏಕದಿನ ಸರಣಿಯ ಎಲ್ಲಾ ಪಂದ್ಯಗಳು ಪುಣೆಯಲ್ಲಿ ನಡೆಯಲಿದೆ. ಮೊದಲ ಪಂದ್ಯ ಮಾರ್ಚ್ 23 ರಂದು ನಡೆಯಲಿದ್ದು, ಎರಡನೇ ಪಂದ್ಯ 26 ರಂದು ಮತ್ತು ಮೂರನೇ ಏಕದಿನ ಪಂದ್ಯ ಮಾರ್ಚ್ 28 ರಂದು ನಡೆಯಲಿದೆ. ಇದಕ್ಕೂ ಮುನ್ನ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ತಂಡವನ್ನು 3-1ರಿಂದ ಸೋಲಿಸಿತು. ಮೊದಲ ಎರಡು ಟೆಸ್ಟ್ ಪಂದ್ಯಗಳನ್ನು ಚೆನ್ನೈನಲ್ಲಿ ಆಡಲಾಯಿತು. ಇದರಲ್ಲಿ ಮೊದಲ ಪಂದ್ಯವನ್ನು ಇಂಗ್ಲೆಂಡ್ ಮತ್ತು ಎರಡನೇ ಪಂದ್ಯವನ್ನು ಟೀಂ ಇಂಡಿಯಾ ಗೆದ್ದು ಬೀಗಿತು. ಇದರ ನಂತರ, ಅಹಮದಾಬಾದ್‌ನಲ್ಲಿ ನಡೆದ ಎರಡೂ ಟೆಸ್ಟ್​ಗಳಲ್ಲಿ ಟೀಮ್ ಇಂಡಿಯಾ ಜಯ ಗಳಿಸಿತು. ಪ್ರಸ್ತುತ, ಉಭಯ ತಂಡಗಳ ನಡುವಿನ ಟಿ 20 ಸರಣಿಯು ಅಂತಿಮ ಹಂತದಲ್ಲಿದೆ.

ಟಿ 20 ನಂತರ ಏಕದಿನ ತಂಡದಲ್ಲಿ ಮಿಂಚಲಿದ್ದಾರೆ ಸೂರ್ಯಕುಮಾರ್ ಟಿ 20 ಯಲ್ಲಿ ಉತ್ತಮ ಪ್ರದರ್ಶನ ನೀಡಿದಕ್ಕಾಗಿ ಸೂರ್ಯಕುಮಾರ್ ಯಾದವ್ ಬಹುಮಾನ ಪಡೆದಿದ್ದಾರೆ. ಟಿ 20 ನಂತರ ಏಕದಿನ ತಂಡಕ್ಕೆ ಸೂರ್ಯಕುಮಾರ್ ಯಾದವ್ ಟಿಕೆಟ್​ ಪಡೆದುಕೊಂಡಿದ್ದಾರೆ. ಇದಲ್ಲದೆ, ಬೌಲಿಂಗ್ ವಿಭಾಗದಲ್ಲಿ ಮೊದಲ ಬಾರಿಗೆ ತಂಡದಲ್ಲಿ ಸ್ಥಾನ ಪಡೆದ ಪ್ರಸಿದ್ಧ ಕೃಷ್ಣ, ದೇಶೀಯ ಕ್ರಿಕೆಟ್‌ನಲ್ಲಿ ಅವರ ಕಠಿಣ ಪರಿಶ್ರಮದ ಫಲವನ್ನು ಪಡೆದಿದ್ದಾರೆ. ಜಸ್ಪ್ರೀತ್ ಬುಮ್ರಾ ಬದಲಿಗೆ ಅವರನ್ನು ತಂಡಕ್ಕೆ ಸೇರಿಸಲಾಗಿದೆ. ಬುಮ್ರಾ ಪ್ರಸ್ತುತ ವೈಯಕ್ತಿಕ ಕಾರಣಗಳಿಗಾಗಿ ರಜೆಯಲ್ಲಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಬೌಲಿಂಗ್ ವಿಭಾಗದಲ್ಲಿ ಕೆಲವು ಪ್ರಮುಖ ಬದಲಾವಣೆಗಳು ಕಂಡುಬಂದಿವೆ. ವೇಗದ ಬೌಲರ್ ನವದೀಪ್ ಸೈನಿ ಅವರನ್ನು ಕೈಬಿಡಲಾಗಿದೆ. ಅದೇ ಸಮಯದಲ್ಲಿ ಫಿಟ್‌ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಟೀಂ ಇಂಡಿಯಾದ ಕ್ಯಾಂಪ್‌ಗೆ ಸೇರಿದ ಟಿ.ನಟರಾಜನ್ ಅವರಿಗೆ ಏಕದಿನ ತಂಡದಲ್ಲಿ ಸ್ಥಾನ ಸಿಕ್ಕಿದೆ. ನವದೀಪ್ ಸೈನಿ ಬದಲಿಗೆ ಕ್ರುನಾಲ್ ಪಾಂಡ್ಯ ಅವರನ್ನು ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ. ಇದಲ್ಲದೆ ಗಾಯದಿಂದ ಮರಳಿದ ಭುವನೇಶ್ವರ್ ಟಿ 20 ನಂತರ ಏಕದಿನ ತಂಡದಲ್ಲಿ ಸ್ಥಾನ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಮ್ ಇಂಡಿಯಾ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, ಕೆ.ಎಲ್. ರಾಹುಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಕ್ರುನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಪ್ರಸಿದ್ಧ್ ಕೃಷ್ಣ, ಮತ್ತು ಶಾರ್ದುಲ್ ಠಾಕೂರ್

Published On - 12:05 pm, Fri, 19 March 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ