AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ.. ತಂಡದಲ್ಲಿ ಸ್ಥಾನ ಪಡೆದ ಕನ್ನಡಿಗ ಪ್ರಸಿದ್ಧ್ ಕೃಷ್ಣ!

India ODI Squad: ತಂಡದಲ್ಲಿ ಪ್ರಸಿದ್ಧ್​ ಕೃಷ್ಣರ ಆಯ್ಕೆಯ ಬಗ್ಗೆ ಯಾರಿಗೂ ಸುಳಿವು ಇರಲಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಅವರ ಆಯ್ಕೆ ಆಶ್ಚರ್ಯಕಾರಿಯಾಗಿದೆ. ಕೊಹ್ಲಿ ತಂಡದ ನಾಯಕತ್ವವನ್ನು ನಿರ್ವಹಿಸಲಿದ್ದಾರೆ.

India vs England: ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ.. ತಂಡದಲ್ಲಿ ಸ್ಥಾನ ಪಡೆದ ಕನ್ನಡಿಗ ಪ್ರಸಿದ್ಧ್ ಕೃಷ್ಣ!
ಪ್ರಸಿದ್ಧ್ ಕೃಷ್ಣ
ಪೃಥ್ವಿಶಂಕರ
| Edited By: |

Updated on:Mar 19, 2021 | 1:30 PM

Share

ಇಂಗ್ಲೆಂಡ್ ವಿರುದ್ಧದ 3 ಏಕದಿನ ಸರಣಿಗೆ ಬಿಸಿಸಿಐ, ಟೀಮ್ ಇಂಡಿಯಾವನ್ನು ಘೋಷಿಸಿದೆ. ಕ್ರುನಾಲ್ ಪಾಂಡ್ಯ ಏಕದಿನ ತಂಡಕ್ಕೆ ಮರಳಿದ್ದಾರೆ. ಅದೇ ಸಮಯದಲ್ಲಿ ಪ್ರಸಿದ್ಧ ಕೃಷ್ಣ ಅವರಿಗೆ ಬೌಲಿಂಗ್ ವಿಭಾಗದಲ್ಲಿ ಅವಕಾಶ ಸಿಕ್ಕಿದೆ. ತಂಡದಲ್ಲಿ ಪ್ರಸಿದ್ಧ್​ ಕೃಷ್ಣರ ಆಯ್ಕೆಯ ಬಗ್ಗೆ ಯಾರಿಗೂ ಸುಳಿವು ಇರಲಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಅವರ ಆಯ್ಕೆ ಆಶ್ಚರ್ಯಕಾರಿಯಾಗಿದೆ. ಕೊಹ್ಲಿ ತಂಡದ ನಾಯಕತ್ವವನ್ನು ನಿರ್ವಹಿಸಲಿದ್ದಾರೆ. ಏಕದಿನ ಸರಣಿಗೆ ತಂಡವನ್ನು ಆಯ್ಕೆ ಮಾಡುವ ಮೊದಲು ರೋಹಿತ್ ಶರ್ಮಾ ಅವರಂತಹ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡುತ್ತಾರೆ ಎಂಬ ವರದಿಗಳೂ ಬಂದವು. ಆದರೆ, ಉಪನಾಯಕನಾಗಿ ಹಿಟ್ಮ್ಯಾನ್ ಏಕದಿನ ತಂಡದ ಭಾಗವಾಗಿದ್ದಾರೆ.

ಏಕದಿನ ಸರಣಿಯ ಎಲ್ಲಾ ಪಂದ್ಯಗಳು ಪುಣೆಯಲ್ಲಿ ನಡೆಯಲಿದೆ. ಮೊದಲ ಪಂದ್ಯ ಮಾರ್ಚ್ 23 ರಂದು ನಡೆಯಲಿದ್ದು, ಎರಡನೇ ಪಂದ್ಯ 26 ರಂದು ಮತ್ತು ಮೂರನೇ ಏಕದಿನ ಪಂದ್ಯ ಮಾರ್ಚ್ 28 ರಂದು ನಡೆಯಲಿದೆ. ಇದಕ್ಕೂ ಮುನ್ನ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ತಂಡವನ್ನು 3-1ರಿಂದ ಸೋಲಿಸಿತು. ಮೊದಲ ಎರಡು ಟೆಸ್ಟ್ ಪಂದ್ಯಗಳನ್ನು ಚೆನ್ನೈನಲ್ಲಿ ಆಡಲಾಯಿತು. ಇದರಲ್ಲಿ ಮೊದಲ ಪಂದ್ಯವನ್ನು ಇಂಗ್ಲೆಂಡ್ ಮತ್ತು ಎರಡನೇ ಪಂದ್ಯವನ್ನು ಟೀಂ ಇಂಡಿಯಾ ಗೆದ್ದು ಬೀಗಿತು. ಇದರ ನಂತರ, ಅಹಮದಾಬಾದ್‌ನಲ್ಲಿ ನಡೆದ ಎರಡೂ ಟೆಸ್ಟ್​ಗಳಲ್ಲಿ ಟೀಮ್ ಇಂಡಿಯಾ ಜಯ ಗಳಿಸಿತು. ಪ್ರಸ್ತುತ, ಉಭಯ ತಂಡಗಳ ನಡುವಿನ ಟಿ 20 ಸರಣಿಯು ಅಂತಿಮ ಹಂತದಲ್ಲಿದೆ.

ಟಿ 20 ನಂತರ ಏಕದಿನ ತಂಡದಲ್ಲಿ ಮಿಂಚಲಿದ್ದಾರೆ ಸೂರ್ಯಕುಮಾರ್ ಟಿ 20 ಯಲ್ಲಿ ಉತ್ತಮ ಪ್ರದರ್ಶನ ನೀಡಿದಕ್ಕಾಗಿ ಸೂರ್ಯಕುಮಾರ್ ಯಾದವ್ ಬಹುಮಾನ ಪಡೆದಿದ್ದಾರೆ. ಟಿ 20 ನಂತರ ಏಕದಿನ ತಂಡಕ್ಕೆ ಸೂರ್ಯಕುಮಾರ್ ಯಾದವ್ ಟಿಕೆಟ್​ ಪಡೆದುಕೊಂಡಿದ್ದಾರೆ. ಇದಲ್ಲದೆ, ಬೌಲಿಂಗ್ ವಿಭಾಗದಲ್ಲಿ ಮೊದಲ ಬಾರಿಗೆ ತಂಡದಲ್ಲಿ ಸ್ಥಾನ ಪಡೆದ ಪ್ರಸಿದ್ಧ ಕೃಷ್ಣ, ದೇಶೀಯ ಕ್ರಿಕೆಟ್‌ನಲ್ಲಿ ಅವರ ಕಠಿಣ ಪರಿಶ್ರಮದ ಫಲವನ್ನು ಪಡೆದಿದ್ದಾರೆ. ಜಸ್ಪ್ರೀತ್ ಬುಮ್ರಾ ಬದಲಿಗೆ ಅವರನ್ನು ತಂಡಕ್ಕೆ ಸೇರಿಸಲಾಗಿದೆ. ಬುಮ್ರಾ ಪ್ರಸ್ತುತ ವೈಯಕ್ತಿಕ ಕಾರಣಗಳಿಗಾಗಿ ರಜೆಯಲ್ಲಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಬೌಲಿಂಗ್ ವಿಭಾಗದಲ್ಲಿ ಕೆಲವು ಪ್ರಮುಖ ಬದಲಾವಣೆಗಳು ಕಂಡುಬಂದಿವೆ. ವೇಗದ ಬೌಲರ್ ನವದೀಪ್ ಸೈನಿ ಅವರನ್ನು ಕೈಬಿಡಲಾಗಿದೆ. ಅದೇ ಸಮಯದಲ್ಲಿ ಫಿಟ್‌ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಟೀಂ ಇಂಡಿಯಾದ ಕ್ಯಾಂಪ್‌ಗೆ ಸೇರಿದ ಟಿ.ನಟರಾಜನ್ ಅವರಿಗೆ ಏಕದಿನ ತಂಡದಲ್ಲಿ ಸ್ಥಾನ ಸಿಕ್ಕಿದೆ. ನವದೀಪ್ ಸೈನಿ ಬದಲಿಗೆ ಕ್ರುನಾಲ್ ಪಾಂಡ್ಯ ಅವರನ್ನು ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ. ಇದಲ್ಲದೆ ಗಾಯದಿಂದ ಮರಳಿದ ಭುವನೇಶ್ವರ್ ಟಿ 20 ನಂತರ ಏಕದಿನ ತಂಡದಲ್ಲಿ ಸ್ಥಾನ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಮ್ ಇಂಡಿಯಾ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, ಕೆ.ಎಲ್. ರಾಹುಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಕ್ರುನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಪ್ರಸಿದ್ಧ್ ಕೃಷ್ಣ, ಮತ್ತು ಶಾರ್ದುಲ್ ಠಾಕೂರ್

Published On - 12:05 pm, Fri, 19 March 21

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ