AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Open: ಇಂಡಿಯಾ ಓಪನ್​ನಲ್ಲಿ ಸುಲಭ ಗೆಲುವಿನೊಂದಿಗೆ ಸೆಮಿಫೈನಲ್ ತಲುಪಿದ ಪಿವಿ ಸಿಂಧು..!

PV Sindhu: ಬಿಡಬ್ಲ್ಯುಎಫ್ ಸೀಸನ್‌ನ ಮೊದಲ ಟೂರ್ನಿಯಾದ ಇಂಡಿಯಾ ಓಪನ್‌ನಲ್ಲಿ ಪಿವಿ ಸಿಂಧು ಅವರ ಅಮೋಘ ಪ್ರದರ್ಶನ ಮುಂದುವರಿದಿದೆ. ಶುಕ್ರವಾರ ನಡೆದ ಕ್ವಾರ್ಟರ್‌ಫೈನಲ್‌ನಲ್ಲಿ ಅಸ್ಮಿತಾ ಚಲಿಹಾ ಅವರನ್ನು 21-7, 21-18 ಸೆಟ್‌ಗಳಿಂದ ಸೋಲಿಸಿ ಸೆಮಿಫೈನಲ್ ತಲುಪಿದ್ದರು.

India Open: ಇಂಡಿಯಾ ಓಪನ್​ನಲ್ಲಿ ಸುಲಭ ಗೆಲುವಿನೊಂದಿಗೆ ಸೆಮಿಫೈನಲ್ ತಲುಪಿದ ಪಿವಿ ಸಿಂಧು..!
ಪಿವಿ ಸಿಂಧು
TV9 Web
| Edited By: |

Updated on:Jan 14, 2022 | 4:36 PM

Share

ಬಿಡಬ್ಲ್ಯುಎಫ್ ಋತುವಿನ ಮೊದಲ ಟೂರ್ನಿಯಾದ ಇಂಡಿಯಾ ಓಪನ್‌ನಲ್ಲಿ ಪಿವಿ ಸಿಂಧು ಅವರ ಆಕರ್ಷಕ ಪ್ರದರ್ಶನ ಮುಂದುವರಿದಿದೆ. ಶುಕ್ರವಾರ ನಡೆದ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಅಸ್ಮಿತಾ ಚಲಿಹಾ ಅವರನ್ನು ಸೋಲಿಸಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟರು. ಇವರಲ್ಲದೆ ಯುವ ತಾರೆ ಲಕ್ಷ್ಯ ಸೇನ್ ಕೂಡ ಸ್ಟಾರ್ ಆಟಗಾರ ಎಚ್.ಎಸ್.ಪ್ರಣೋಯ್ ಅವರನ್ನು ಸೋಲಿಸುವ ಮೂಲಕ ಮುಂದಿನ ಸುತ್ತಿಗೆ ತಲುಪುವಲ್ಲಿ ಯಶಸ್ವಿಯಾದರು. ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಬಿಡಬ್ಲ್ಯೂಎಫ್ ಸೂಪರ್ 500 ಪಂದ್ಯಾವಳಿಯನ್ನು ಪ್ರೇಕ್ಷಕರಿಲ್ಲದೆ ನಡೆಸಲಾಗುತ್ತಿದೆ.

ಪಿವಿ ಸಿಂಧು 21-7, 21-18 ನೇರ ಸೆಟ್‌ಗಳಿಂದ ಸೋಲಿಸಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದ್ದರು. ಪ್ರೀ ಕ್ವಾರ್ಟರ್‌ಫೈಲ್ ಪಂದ್ಯದಲ್ಲಿ ಪಿವಿ ಸಿಂಧು 21-10, 21-10ರಲ್ಲಿ ದೇಶದವರೇ ಆದ ಇರಾ ಶರ್ಮಾ ಅವರನ್ನು ಸೋಲಿಸಿದರು. ಮತ್ತೊಂದೆಡೆ, ಅಶ್ಮಿತಾ ಚಲಿಹಾ 21-17, 21-14 ರಿಂದ ಯಾಲೆ ಹೊಯೌ ಅವರನ್ನು ಸೋಲಿಸಿದರು.

ಸಮೀರ್ ವರ್ಮಾ ಈಗಾಗಲೇ ಔಟ್ ಕೆನಡಾದ ಬ್ರೆನ್ ಯಾಂಗ್ ವಿರುದ್ಧದ ಪಂದ್ಯವನ್ನು ಮಂಡಿರಜ್ಜು ಸೆಳೆತದಿಂದಾಗಿ ಮಧ್ಯದಲ್ಲಿಯೇ ತೊರೆದ ಸಮೀರ್ ವರ್ಮಾ ಅವರ ಅಭಿಯಾನವು ಎರಡನೇ ಸುತ್ತಿನಲ್ಲಿ ಕೊನೆಗೊಂಡಿತು. ಪುರುಷರ ಡಬಲ್ಸ್‌ನಲ್ಲಿ 2ನೇ ಶ್ರೇಯಾಂಕದ ಸಾತ್ವಿಕ್‌ಸಾಯಿರಾಜ್‌ ರಾಂಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ಜೋಡಿ 21-9, 21-18ರಲ್ಲಿ 32 ನಿಮಿಷಗಳಲ್ಲಿ ದೇಶದವರೇ ಆದ ಶ್ಯಾಮ್‌ ಪ್ರಸಾದ್‌ ಮತ್ತು ಎಸ್‌. ಸುಂಜಿತ್‌ ಅವರನ್ನು ಮಣಿಸಿದರು.

Published On - 4:26 pm, Fri, 14 January 22

Follow Us
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ