AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ಅವರ ತಂದೆ ಆಟೋ ಡ್ರೈವರ್​ ನಿಧನ

ಹೈದ್ರಾಬಾದ್​: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ತಂಡದ ವೇಗಿ ಮೊಹಮ್ಮದ್ ಸಿರಾಜ್ ಅವರ ತಂದೆ ಮೊಹಮ್ಮದ್ ಗೌಸ್ (53) ಅವರು ಶ್ವಾಸಕೋಶದ ಕಾಯಿಲೆಯಿಂದಾಗಿ ಶುಕ್ರವಾರ ತಮ್ಮ ಹೈದರಾಬಾದ್‌ ನಿವಾಸದಲ್ಲಿ ನಿಧನರಾಗಿದ್ದಾರೆ. ಈ ನೋವಿನ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೊಹಮ್ಮದ್ ಸಿರಾಜ್, ಆರಂಭಿಕ ದಿನಗಳಲ್ಲಿ ಆಟೋ ರಿಕ್ಷಾ ಚಾಲನೆ ಮಾಡುವಾಗ ನನ್ನ ತಂದೆ ಯಾವ ರೀತಿಯ ಕಷ್ಟಗಳನ್ನು ಎದುರಿಸಿದ್ದಾರೆಂದು ನನಗೆ ತಿಳಿದಿದೆ ಎಂದು ಸಿರಾಜ್ ತಮ್ಮ ತಂದೆಯೊಂದಿಗಿನ ಬಾಲ್ಯದ ದಿನಗಳನ್ನು ನೆನೆದಿದ್ದಾರೆ. ಜೊತೆಗೆ ನನ್ನ ದೇಶ ಹೆಮ್ಮೆ ಪಡುವಂತ […]

ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ಅವರ ತಂದೆ ಆಟೋ ಡ್ರೈವರ್​ ನಿಧನ
ಪೃಥ್ವಿಶಂಕರ
|

Updated on:Nov 21, 2020 | 10:15 AM

Share

ಹೈದ್ರಾಬಾದ್​: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ತಂಡದ ವೇಗಿ ಮೊಹಮ್ಮದ್ ಸಿರಾಜ್ ಅವರ ತಂದೆ ಮೊಹಮ್ಮದ್ ಗೌಸ್ (53) ಅವರು ಶ್ವಾಸಕೋಶದ ಕಾಯಿಲೆಯಿಂದಾಗಿ ಶುಕ್ರವಾರ ತಮ್ಮ ಹೈದರಾಬಾದ್‌ ನಿವಾಸದಲ್ಲಿ ನಿಧನರಾಗಿದ್ದಾರೆ.

ಈ ನೋವಿನ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೊಹಮ್ಮದ್ ಸಿರಾಜ್, ಆರಂಭಿಕ ದಿನಗಳಲ್ಲಿ ಆಟೋ ರಿಕ್ಷಾ ಚಾಲನೆ ಮಾಡುವಾಗ ನನ್ನ ತಂದೆ ಯಾವ ರೀತಿಯ ಕಷ್ಟಗಳನ್ನು ಎದುರಿಸಿದ್ದಾರೆಂದು ನನಗೆ ತಿಳಿದಿದೆ ಎಂದು ಸಿರಾಜ್ ತಮ್ಮ ತಂದೆಯೊಂದಿಗಿನ ಬಾಲ್ಯದ ದಿನಗಳನ್ನು ನೆನೆದಿದ್ದಾರೆ. ಜೊತೆಗೆ ನನ್ನ ದೇಶ ಹೆಮ್ಮೆ ಪಡುವಂತ ಕೆಲಸವನ್ನು ನಾನು ಮಾಡಬೇಕು ಎಂಬುದು ನನ್ನ ತಂದೆಯ ಆಸೆಯಾಗಿತ್ತು ಎಂದಿರುವ ಸಿರಾಜ್​ ನಾನು ಅದನ್ನು ಖಚಿತವಾಗಿ ಮಾಡುತ್ತೇನೆ ಎಂದಿದ್ದಾರೆ.

2016-2017 ರಣಜಿ ಟ್ರೋಪಿಯಲ್ಲಿ 41 ವಿಕೆಟ್‌ ಪಡೆದಿದ್ದ ಸಿರಾಜ್ ಸನ್‌ರೈಸರ್ಸ್ ಹೈದರಾಬಾದ್ ಪರ ಐಪಿಎಲ್ ಕ್ಯಾಪ್ ಧರಿಸಿದರು. ಪ್ರಸ್ತುತ ಆರ್​ಸಿಬಿ ಪರ ಪ್ರಮುಖ ಬೌಲರ್​ ಆಗಿ ಗುರುತಿಸಿಕೊಂಡಿರುವ ಮೊಹಮ್ಮದ್ ಸಿರಾಜ್ ಸದ್ಯ ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದಾರೆ.

ಈ ಆಘಾತ ಸುದ್ದಿ ತಿಳಿದ ಕೂಡಲೇ ದುಃಖ ಹೊರಹಾಕಿರುವ ಸಿರಾಜ್​, ಇದು ಆಘಾತಕಾರಿ. ನನ್ನ ಜೀವನದ ದೊಡ್ಡ ಬೆಂಬಲವನ್ನು ನಾನು ಕಳೆದುಕೊಂಡೆ. ನಾನು ದೇಶಕ್ಕಾಗಿ ಆಡುವುದನ್ನು ನೋಡುವುದು ಅವರ ಕನಸಾಗಿತ್ತು. ಹೀಗಾಗಿ ಅದನ್ನು ಅರಿತುಕೊಂಡ ನಾನು ನನ್ನ ಈ ಸಾಧನೆಯ ಮೂಲಕ ಅವರಿಗೆ ಸಂತೋಷವನ್ನು ತಂದುಕೊಟ್ಟಿದ್ದು ನನಗೆ ತೃಪ್ತಿ ತಂದಿದೆ ಎಂದು ವಿಚಲಿತರಾದ ಸಿರಾಜ್ ಮಾಹಿತಿ ನೀಡಿದ್ದಾರೆ.

ಕೋಚ್ ಶಾಸ್ತ್ರಿ ಸರ್ ಮತ್ತು ನಾಯಕ ವಿರಾಟ್ ಕೊಹ್ಲಿ ಅವರು ನನಗೆ ಧೈರ್ಯವಾಗಿರಲು ಹೇಳಿದರು ಮತ್ತು ಎಲ್ಲಾ ಬೆಂಬಲವನ್ನು ನೀಡುತ್ತಿದ್ದಾರೆ ಎಂದು ಸಿರಾಜ್ ಹೇಳಿದ್ದಾರೆ. ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಸಿರಾಜ್​ ಕ್ವಾರಂಟೈನ್​ ನಿಯಮಗಳನ್ನು ಪಾಲಿಸಲೇಬೇಕಾಗಿರುವುದರಿಂದ ಅವರು ತಮ್ಮ ತಂದೆಯ ಅಂತಿಮ ವಿಧಿ ವಿಧಾನಗಳಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುವುದಿಲ್ಲ.

Published On - 9:15 am, Sat, 21 November 20

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!