AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ಅವರ ತಂದೆ ಆಟೋ ಡ್ರೈವರ್​ ನಿಧನ

ಹೈದ್ರಾಬಾದ್​: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ತಂಡದ ವೇಗಿ ಮೊಹಮ್ಮದ್ ಸಿರಾಜ್ ಅವರ ತಂದೆ ಮೊಹಮ್ಮದ್ ಗೌಸ್ (53) ಅವರು ಶ್ವಾಸಕೋಶದ ಕಾಯಿಲೆಯಿಂದಾಗಿ ಶುಕ್ರವಾರ ತಮ್ಮ ಹೈದರಾಬಾದ್‌ ನಿವಾಸದಲ್ಲಿ ನಿಧನರಾಗಿದ್ದಾರೆ. ಈ ನೋವಿನ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೊಹಮ್ಮದ್ ಸಿರಾಜ್, ಆರಂಭಿಕ ದಿನಗಳಲ್ಲಿ ಆಟೋ ರಿಕ್ಷಾ ಚಾಲನೆ ಮಾಡುವಾಗ ನನ್ನ ತಂದೆ ಯಾವ ರೀತಿಯ ಕಷ್ಟಗಳನ್ನು ಎದುರಿಸಿದ್ದಾರೆಂದು ನನಗೆ ತಿಳಿದಿದೆ ಎಂದು ಸಿರಾಜ್ ತಮ್ಮ ತಂದೆಯೊಂದಿಗಿನ ಬಾಲ್ಯದ ದಿನಗಳನ್ನು ನೆನೆದಿದ್ದಾರೆ. ಜೊತೆಗೆ ನನ್ನ ದೇಶ ಹೆಮ್ಮೆ ಪಡುವಂತ […]

ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ಅವರ ತಂದೆ ಆಟೋ ಡ್ರೈವರ್​ ನಿಧನ
ಪೃಥ್ವಿಶಂಕರ
|

Updated on:Nov 21, 2020 | 10:15 AM

Share

ಹೈದ್ರಾಬಾದ್​: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ತಂಡದ ವೇಗಿ ಮೊಹಮ್ಮದ್ ಸಿರಾಜ್ ಅವರ ತಂದೆ ಮೊಹಮ್ಮದ್ ಗೌಸ್ (53) ಅವರು ಶ್ವಾಸಕೋಶದ ಕಾಯಿಲೆಯಿಂದಾಗಿ ಶುಕ್ರವಾರ ತಮ್ಮ ಹೈದರಾಬಾದ್‌ ನಿವಾಸದಲ್ಲಿ ನಿಧನರಾಗಿದ್ದಾರೆ.

ಈ ನೋವಿನ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೊಹಮ್ಮದ್ ಸಿರಾಜ್, ಆರಂಭಿಕ ದಿನಗಳಲ್ಲಿ ಆಟೋ ರಿಕ್ಷಾ ಚಾಲನೆ ಮಾಡುವಾಗ ನನ್ನ ತಂದೆ ಯಾವ ರೀತಿಯ ಕಷ್ಟಗಳನ್ನು ಎದುರಿಸಿದ್ದಾರೆಂದು ನನಗೆ ತಿಳಿದಿದೆ ಎಂದು ಸಿರಾಜ್ ತಮ್ಮ ತಂದೆಯೊಂದಿಗಿನ ಬಾಲ್ಯದ ದಿನಗಳನ್ನು ನೆನೆದಿದ್ದಾರೆ. ಜೊತೆಗೆ ನನ್ನ ದೇಶ ಹೆಮ್ಮೆ ಪಡುವಂತ ಕೆಲಸವನ್ನು ನಾನು ಮಾಡಬೇಕು ಎಂಬುದು ನನ್ನ ತಂದೆಯ ಆಸೆಯಾಗಿತ್ತು ಎಂದಿರುವ ಸಿರಾಜ್​ ನಾನು ಅದನ್ನು ಖಚಿತವಾಗಿ ಮಾಡುತ್ತೇನೆ ಎಂದಿದ್ದಾರೆ.

2016-2017 ರಣಜಿ ಟ್ರೋಪಿಯಲ್ಲಿ 41 ವಿಕೆಟ್‌ ಪಡೆದಿದ್ದ ಸಿರಾಜ್ ಸನ್‌ರೈಸರ್ಸ್ ಹೈದರಾಬಾದ್ ಪರ ಐಪಿಎಲ್ ಕ್ಯಾಪ್ ಧರಿಸಿದರು. ಪ್ರಸ್ತುತ ಆರ್​ಸಿಬಿ ಪರ ಪ್ರಮುಖ ಬೌಲರ್​ ಆಗಿ ಗುರುತಿಸಿಕೊಂಡಿರುವ ಮೊಹಮ್ಮದ್ ಸಿರಾಜ್ ಸದ್ಯ ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದಾರೆ.

ಈ ಆಘಾತ ಸುದ್ದಿ ತಿಳಿದ ಕೂಡಲೇ ದುಃಖ ಹೊರಹಾಕಿರುವ ಸಿರಾಜ್​, ಇದು ಆಘಾತಕಾರಿ. ನನ್ನ ಜೀವನದ ದೊಡ್ಡ ಬೆಂಬಲವನ್ನು ನಾನು ಕಳೆದುಕೊಂಡೆ. ನಾನು ದೇಶಕ್ಕಾಗಿ ಆಡುವುದನ್ನು ನೋಡುವುದು ಅವರ ಕನಸಾಗಿತ್ತು. ಹೀಗಾಗಿ ಅದನ್ನು ಅರಿತುಕೊಂಡ ನಾನು ನನ್ನ ಈ ಸಾಧನೆಯ ಮೂಲಕ ಅವರಿಗೆ ಸಂತೋಷವನ್ನು ತಂದುಕೊಟ್ಟಿದ್ದು ನನಗೆ ತೃಪ್ತಿ ತಂದಿದೆ ಎಂದು ವಿಚಲಿತರಾದ ಸಿರಾಜ್ ಮಾಹಿತಿ ನೀಡಿದ್ದಾರೆ.

ಕೋಚ್ ಶಾಸ್ತ್ರಿ ಸರ್ ಮತ್ತು ನಾಯಕ ವಿರಾಟ್ ಕೊಹ್ಲಿ ಅವರು ನನಗೆ ಧೈರ್ಯವಾಗಿರಲು ಹೇಳಿದರು ಮತ್ತು ಎಲ್ಲಾ ಬೆಂಬಲವನ್ನು ನೀಡುತ್ತಿದ್ದಾರೆ ಎಂದು ಸಿರಾಜ್ ಹೇಳಿದ್ದಾರೆ. ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಸಿರಾಜ್​ ಕ್ವಾರಂಟೈನ್​ ನಿಯಮಗಳನ್ನು ಪಾಲಿಸಲೇಬೇಕಾಗಿರುವುದರಿಂದ ಅವರು ತಮ್ಮ ತಂದೆಯ ಅಂತಿಮ ವಿಧಿ ವಿಧಾನಗಳಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುವುದಿಲ್ಲ.

Published On - 9:15 am, Sat, 21 November 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ