AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ಅವರ ತಂದೆ ಆಟೋ ಡ್ರೈವರ್​ ನಿಧನ

ಹೈದ್ರಾಬಾದ್​: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ತಂಡದ ವೇಗಿ ಮೊಹಮ್ಮದ್ ಸಿರಾಜ್ ಅವರ ತಂದೆ ಮೊಹಮ್ಮದ್ ಗೌಸ್ (53) ಅವರು ಶ್ವಾಸಕೋಶದ ಕಾಯಿಲೆಯಿಂದಾಗಿ ಶುಕ್ರವಾರ ತಮ್ಮ ಹೈದರಾಬಾದ್‌ ನಿವಾಸದಲ್ಲಿ ನಿಧನರಾಗಿದ್ದಾರೆ. ಈ ನೋವಿನ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೊಹಮ್ಮದ್ ಸಿರಾಜ್, ಆರಂಭಿಕ ದಿನಗಳಲ್ಲಿ ಆಟೋ ರಿಕ್ಷಾ ಚಾಲನೆ ಮಾಡುವಾಗ ನನ್ನ ತಂದೆ ಯಾವ ರೀತಿಯ ಕಷ್ಟಗಳನ್ನು ಎದುರಿಸಿದ್ದಾರೆಂದು ನನಗೆ ತಿಳಿದಿದೆ ಎಂದು ಸಿರಾಜ್ ತಮ್ಮ ತಂದೆಯೊಂದಿಗಿನ ಬಾಲ್ಯದ ದಿನಗಳನ್ನು ನೆನೆದಿದ್ದಾರೆ. ಜೊತೆಗೆ ನನ್ನ ದೇಶ ಹೆಮ್ಮೆ ಪಡುವಂತ […]

ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ಅವರ ತಂದೆ ಆಟೋ ಡ್ರೈವರ್​ ನಿಧನ
ಪೃಥ್ವಿಶಂಕರ
|

Updated on:Nov 21, 2020 | 10:15 AM

Share

ಹೈದ್ರಾಬಾದ್​: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ತಂಡದ ವೇಗಿ ಮೊಹಮ್ಮದ್ ಸಿರಾಜ್ ಅವರ ತಂದೆ ಮೊಹಮ್ಮದ್ ಗೌಸ್ (53) ಅವರು ಶ್ವಾಸಕೋಶದ ಕಾಯಿಲೆಯಿಂದಾಗಿ ಶುಕ್ರವಾರ ತಮ್ಮ ಹೈದರಾಬಾದ್‌ ನಿವಾಸದಲ್ಲಿ ನಿಧನರಾಗಿದ್ದಾರೆ.

ಈ ನೋವಿನ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೊಹಮ್ಮದ್ ಸಿರಾಜ್, ಆರಂಭಿಕ ದಿನಗಳಲ್ಲಿ ಆಟೋ ರಿಕ್ಷಾ ಚಾಲನೆ ಮಾಡುವಾಗ ನನ್ನ ತಂದೆ ಯಾವ ರೀತಿಯ ಕಷ್ಟಗಳನ್ನು ಎದುರಿಸಿದ್ದಾರೆಂದು ನನಗೆ ತಿಳಿದಿದೆ ಎಂದು ಸಿರಾಜ್ ತಮ್ಮ ತಂದೆಯೊಂದಿಗಿನ ಬಾಲ್ಯದ ದಿನಗಳನ್ನು ನೆನೆದಿದ್ದಾರೆ. ಜೊತೆಗೆ ನನ್ನ ದೇಶ ಹೆಮ್ಮೆ ಪಡುವಂತ ಕೆಲಸವನ್ನು ನಾನು ಮಾಡಬೇಕು ಎಂಬುದು ನನ್ನ ತಂದೆಯ ಆಸೆಯಾಗಿತ್ತು ಎಂದಿರುವ ಸಿರಾಜ್​ ನಾನು ಅದನ್ನು ಖಚಿತವಾಗಿ ಮಾಡುತ್ತೇನೆ ಎಂದಿದ್ದಾರೆ.

2016-2017 ರಣಜಿ ಟ್ರೋಪಿಯಲ್ಲಿ 41 ವಿಕೆಟ್‌ ಪಡೆದಿದ್ದ ಸಿರಾಜ್ ಸನ್‌ರೈಸರ್ಸ್ ಹೈದರಾಬಾದ್ ಪರ ಐಪಿಎಲ್ ಕ್ಯಾಪ್ ಧರಿಸಿದರು. ಪ್ರಸ್ತುತ ಆರ್​ಸಿಬಿ ಪರ ಪ್ರಮುಖ ಬೌಲರ್​ ಆಗಿ ಗುರುತಿಸಿಕೊಂಡಿರುವ ಮೊಹಮ್ಮದ್ ಸಿರಾಜ್ ಸದ್ಯ ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದಾರೆ.

ಈ ಆಘಾತ ಸುದ್ದಿ ತಿಳಿದ ಕೂಡಲೇ ದುಃಖ ಹೊರಹಾಕಿರುವ ಸಿರಾಜ್​, ಇದು ಆಘಾತಕಾರಿ. ನನ್ನ ಜೀವನದ ದೊಡ್ಡ ಬೆಂಬಲವನ್ನು ನಾನು ಕಳೆದುಕೊಂಡೆ. ನಾನು ದೇಶಕ್ಕಾಗಿ ಆಡುವುದನ್ನು ನೋಡುವುದು ಅವರ ಕನಸಾಗಿತ್ತು. ಹೀಗಾಗಿ ಅದನ್ನು ಅರಿತುಕೊಂಡ ನಾನು ನನ್ನ ಈ ಸಾಧನೆಯ ಮೂಲಕ ಅವರಿಗೆ ಸಂತೋಷವನ್ನು ತಂದುಕೊಟ್ಟಿದ್ದು ನನಗೆ ತೃಪ್ತಿ ತಂದಿದೆ ಎಂದು ವಿಚಲಿತರಾದ ಸಿರಾಜ್ ಮಾಹಿತಿ ನೀಡಿದ್ದಾರೆ.

ಕೋಚ್ ಶಾಸ್ತ್ರಿ ಸರ್ ಮತ್ತು ನಾಯಕ ವಿರಾಟ್ ಕೊಹ್ಲಿ ಅವರು ನನಗೆ ಧೈರ್ಯವಾಗಿರಲು ಹೇಳಿದರು ಮತ್ತು ಎಲ್ಲಾ ಬೆಂಬಲವನ್ನು ನೀಡುತ್ತಿದ್ದಾರೆ ಎಂದು ಸಿರಾಜ್ ಹೇಳಿದ್ದಾರೆ. ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಸಿರಾಜ್​ ಕ್ವಾರಂಟೈನ್​ ನಿಯಮಗಳನ್ನು ಪಾಲಿಸಲೇಬೇಕಾಗಿರುವುದರಿಂದ ಅವರು ತಮ್ಮ ತಂದೆಯ ಅಂತಿಮ ವಿಧಿ ವಿಧಾನಗಳಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುವುದಿಲ್ಲ.

Published On - 9:15 am, Sat, 21 November 20

ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ