AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England 5th T20I live Score: ಸುಲಭ ಜಯದೊಂದಿಗೆ ಸರಣಿ ಮೇಲೆ ಒಡೆತನ ಸಾಧಿಸಿದ ಟೀಮ್ ಇಂಡಿಯಾ

ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದು ಭುವನೇಶ್ವರ್ ಕಮಾರ್. ತಮ್ಮ ಕೋಟಾದ 4 ಓವರ್​ಗಳಲ್ಲಿ ಕೇವಲ 15 ರನ್​ ನೀಡಿದ  ಭುವಿ  2 ವಿಕೆಟ್​ ಪಡೆದರು

India vs England 5th T20I live Score: ಸುಲಭ ಜಯದೊಂದಿಗೆ ಸರಣಿ ಮೇಲೆ ಒಡೆತನ ಸಾಧಿಸಿದ ಟೀಮ್ ಇಂಡಿಯಾ
ಪಂದ್ಯದ ವ್ಯಕ್ತಿ ಭುವನೇಶ್ವರ್ ಕುಮಾರ್
ಅರುಣ್​ ಕುಮಾರ್​ ಬೆಳ್ಳಿ
|

Updated on:Mar 20, 2021 | 11:25 PM

Share

ಅಹಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಟಿ20 ಸರಣಿಯ 5ನೇ ಮತ್ತು ಕೊನೆಯ ಪಂದ್ಯದಲ್ಲಿ ಪ್ರವಾಸಿ ತಂಡವನ್ನು ಸುಲಭವಾಗಿ 36 ರನ್​ಗಳಿಂದ ಸೋಲಿಸಿದ ಭಾರತ ಸರಣಿಯನ್ನು 3-2 ಅಂತರದಿಂದ ತನ್ನದಾಗಿಸಿಕೊಂಡಿದೆ. ಗೆಲ್ಲಲು 225ರನ್ ಗಳಿಸಬೇಕಿದ್ದ ಆಂಗ್ಲರಿಗೆ ನಿಗದಿತ 20 ಓವರ್​ಗಳಲ್ಲಿ 188/8 ಗಳಿಸಲು ಮಾತ್ರ ಸಾಧ್ಯವಾಯಿತು.  ಇಂಗ್ಲೆಂಡ್ ಪರ ಕೇವಲ ದಾವಿದ್ ಮಲಾನ್ (68, 46 ಎಸೆತ 9 ಬೌಂಡರಿ 2 ಸಿಕ್ಸ್) ಮತ್ತು ಜೋಸ್ ಬಟ್ಲರ್ 52 ( 34 ಎಸೆತ 2 ಬೌಂಡರಿ 4 ಸಿಕ್ಸ್) ಮಾತ್ರ ಹೋರಾಟ ಪ್ರದರ್ಶಿಸಿದರು. 45 ರನ್​ಗ​ಳಿಗೆ 3 ವಿಕೆಟ್​   ಶಾರ್ದುಲ್ ಠಾಕೂರ್ ಭಾರತದ ಯಶಸ್ವೀ ಬೌಲರ್ ಎನಿಸಿದರು.

ಆದರೆ, ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದು ಭುವನೇಶ್ವರ್ ಕಮಾರ್. ತಮ್ಮ ಕೋಟಾದ 4 ಓವರ್​ಗಳಲ್ಲಿ ಕೇವಲ 15 ರನ್​ ನೀಡಿದ  ಭುವಿ  2 ವಿಕೆಟ್​ ಪಡೆದರು.

ಟಿ20 ಕ್ರಿಕೆಟ್​ನಲ್ಲಿ ಇಂಗ್ಲೆಂಡ್ ವಿಶ್ದ ನಂಬರ್ ವನ್ ತಂಡ ಎನಿಸಿದೆ. ಮೂರನೇ ಌಂಕಿನ ಭಾರತ ಅದನ್ನು ಸೋಲಿಸಿ ಅಕ್ಟೋಬರ್-ನವೆಂಬರ್​ ನಡೆಯುವ ಟಿ20 ವಿಶ್ವಕಪ್​ಗೆ ಮುಂಚೆ ತನ್ನ ಆತ್ಮವಿಶ್ವಾಸವನ್ನು ಮುಗಿಲೆತ್ತರಕ್ಕೆ ಏರಿಸಿಕೊಂಡಿದೆ.

ಟಾಸ್ ಸೋತು ಮೊದಲು ಬ್ಯಾಟ್​ ಮಾಡಿದ ಭಾರತ 224/2 ಮೊತ್ತ ಗಳಿಸಿತು. ನಾಯಕ ವಿರಾಟ್ ಕೊಹ್ಲಿ 52 ಎಸೆತಗಳಲ್ಲಿ ಅಜೇಯ 80 ರನ್ (7 ಬೌಂಡರಿ 2 ಸಿಕ್ಸರ್) ಬಾರಿಸಿದರು. ಅವರೊಂದಿಗೆ ಇನ್ನಿಂಗ್ಸ್ ಆರಂಭಿಸಿದ ರೋಹಿತ್ ಶರ್ಮ ಕೇವಲ 34 ಎಸೆತಗಳಲ್ಲಿ 64 ರನ್ (4 ಬೌಂಡರಿ 5 ಸಿಕ್ಸ್ ) ಬಾರಿಸಿದರು, ನಾಯಕ ಮತ್ತು ಉಪನಾಯಕ ಮೊದಲ ವಿಕೆಟ್​ಗೆ 9 ಓವರ್​ಗಳಲ್ಲಿ 94 ರನ್ ಸೇರಿಸಿದರು .

ಮೂರನೇ ಕ್ರಮಾಂಕದಲ್ಲಿ ಆಡಲು ಬಂದ  ಸೂರ್ಯಕುಮಾರ್ ಯಾದವ್ 17 ಎಸೆತಗಳಲ್ಲಿ 32 ರನ್ ಗಳಿಸಿದರು, ಅವರ ಸ್ಕೋರಿನಲ್ಲಿ 3 ಬೌಂಡರಿ 2 ಸಿಕ್ಸ್ ಇದ್ದವು.

ಈ ಪಂದ್ಯಕ್ಕೆ ರಾಹುಲ್ ಅವರನ್ನು ಕೈಬಿಟ್ಟು ಅವರ ಸ್ಥಾನದಲ್ಲಿ ವೇಗದ ಬೌಲರ್ ಟಿ ನಟರಾಜನ್ ಅವರನ್ನು ಆಡಿಸಲಾಯಿತು.

ಅಂತಿಮ ಸ್ಕೋರ್:

ಭಾರತ: 224/2 (20 ಓವರ್​ಗಳಲ್ಲಿ)

ಇಂಗ್ಲೆಂಡ್: 188/8 (20 ಓವರ್​ಗಳಲ್ಲಿ)

Published On - 10:55 pm, Sat, 20 March 21

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್