AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡಿಲೇಡ್​ನಲ್ಲಿ ಹೀನಾಯ ಸೋಲು ಕಂಡ ಭಾರತ; ಒಂದಂಕಿ ದಾಟದ ಟೀಂ ಇಂಡಿಯಾ ಬ್ಯಾಟ್ಸ್​​ಮನ್​ಗಳು

ಅಂತಿಮವಾಗಿ ಭಾರತ ನೀಡಿದ 90 ರನ್​ಗಳ ಗುರಿ ಬೆನ್ನು ಹತ್ತಿದ ಆಸ್ಟ್ರೇಲಿಯಾ ಎರಡು ವಿಕೆಟ್ ಕಳೆದುಕೊಂಡು ಗೆದ್ದು ಬೀಗಿದೆ. ಈ ಮೂಲಕ ಎಂಟು ವಿಕೆಟ್​ಗಳ ಜಯ ಕಂಡಿತು.

ಅಡಿಲೇಡ್​ನಲ್ಲಿ ಹೀನಾಯ ಸೋಲು ಕಂಡ ಭಾರತ; ಒಂದಂಕಿ ದಾಟದ ಟೀಂ ಇಂಡಿಯಾ ಬ್ಯಾಟ್ಸ್​​ಮನ್​ಗಳು
ಆಸ್ಟ್ರೇಲಿಯಾ ತಂಡ
ರಾಜೇಶ್ ದುಗ್ಗುಮನೆ
|

Updated on:Dec 19, 2020 | 2:15 PM

Share

ಪಿಂಕ್​ಬಾಲ್​ ಮೊದಲ ಟೆಸ್ಟ್​ನಲ್ಲಿ ಭಾರತದ ಕಳಪೆ ಬ್ಯಾಟಿಂಗ್​ ಪ್ರದರ್ಶನದಿಂದಾಗಿ ಆಸ್ಟ್ರೇಲಿಯಾ ಸುಲಭ ಗೆಲುವು ದಾಖಲಿಸಿತು. ಈ ಮೂಲಕ ನಾಲ್ಕು ಟೆಸ್ಟ್​​ ಸರಣಿಯಲ್ಲಿ ಮೊದಲನೇ ಟೆಸ್ಟ್​​ ಆಸ್ಟ್ರೇಲಿಯಾ ಬಾಚಿಕೊಂಡಿತು.

ಮೊದಲನೇ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್​ನಲ್ಲಿ ಸಾಧಾರಣ ಹಾಗೂ ಬೌಲಿಂಗ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾ ಎರಡನೇ ಇನ್ನಿಂಗ್ಸ್​ನಲ್ಲಿ ಕಳಪೆಯಲ್ಲೇ ಕಳಪೆ ಪ್ರದರ್ಶನ ನೀಡಿತು. ಎರಡನೇ ಇನ್ನಿಂಗ್ಸ್​ನಲ್ಲಿ ಕೇವಲ 36 ರನ್​ ಗಳಿಕೆ ಮಾಡಿತು. ಎಲ್ಲ ಬ್ಯಾಟ್ಸ್​ಮನ್​ಗಳು ಪೆವಿಲಿಯನ್​ ಪರೇಡ್​ ನಡೆಸಿದರು. ವಿಚಿತ್ರ ಎಂದರೆ ಯಾವೊಬ್ಬ ಬ್ಯಾಟ್ಸ್​​ಮನ್​ ಕೂಡ ಒಂದಕಿ ದಾಟಿಲ್ಲ! ಎರಡನೇ ಇನ್ನಿಂಗ್ಸ್​ನಲ್ಲಿ ಅತಿ ಹೆಚ್ಚು ರನ್​ ಗಳಿಕೆ ಮಾಡಿದ್ದು ಮಯಾಂಕ್​ ಅಗರ್​ವಾಲ್​. ಅವರು ಬಾರಿಸಿದ್ದು 9 ರನ್​ ಮಾತ್ರ!

ಮೊದಲ ಇನ್ನಿಂಗ್ಸ್​ನಲ್ಲಿ 244 ರನ್​ ಬಾರಿಸಿದ್ದ ಭಾರತ, ಆಸ್ಟ್ರೇಲಿಯಾವನ್ನು ಕೇವಲ 191ರನ್​ಗಳಿಗೆ ಕಟ್ಟಿ ಹಾಕಿತ್ತು. ಈ ಮೂಲಕ 53 ರನ್​ಗಳ ಲೀಡ್​ ಕಾಯ್ದುಕೊಂಡಿತ್ತು. ಎರಡನೇ ಇನ್ನಿಂಗ್ಸ್​ನಲ್ಲಿ ಓಪನರ್​ಗಳಾಗಿ ಇಳಿದ ಪೃಥ್ವಿ ಶಾ ಹಾಗೂ ಮಯಾಂಕ್​ ಅನುಕ್ರಮವಾಗಿ ನಾಲ್ಕು ಹಾಗೂ ಒಂಭತ್ತು ರನ್​ ಗಳಿಸಿದರು.

ಶಾ ಔಟ್​ ಆದ ನಂತರ ಬಂದ ಬೂಮ್ರಾ ಎರಡು ರನ್​ಗಳಿಗೆ ವಿಕೆಟ್​ ಒಪ್ಪಿಸಿದರು. ಕಳೆದ ಪಂದ್ಯದಲ್ಲಿ ಉತ್ತಮವಾಗಿ ಆಡಿದ್ದ ಪೂಜಾರ ಡಕ್​ಔಟ್​ ಆದರೆ, ನಾಯಕ ಕೊಹ್ಲಿ ನಾಲ್ಕು ರನ್​ ಬಾರಿಸಿ ಪೆವಿಲಿಯನ್​ ಸೇರಿದರು. ಉಪನಾಯಕ ರಹಾನೆ ಶೂನ್ಯ ಸುತ್ತಿದರೆ, ಹನುಮ ವಿಹಾರಿ 8 ರನ್​ ಗಳಿಸಲು ಪರದಾಡಿದರು. ಅಶ್ವಿನ್​ ಸೊನ್ನೆ ಸುತ್ತಿದರು. ಕೊನೆಯ ವಿಕೆಟ್​ನಲ್ಲಿ ಆಡುತ್ತಿದ್ದ ಉಮೇಶ್​ ನಾಲ್ಕು ರನ್​ ಗಳಿಸಿದರು. 1 ರನ್​ ಬಾರಿಸಿದ್ದ ಶಮಿ ಗಾಯಗೊಂಡು ಪೆವಿಲಿಯನ್​ ಸೇರಿದರು. ಕೊನೆಗೆ ಭಾರತ 36 ರನ್​ ಗಳಿಸಲಷ್ಟೇ ಶಕ್ತವಾಯಿತು.

ಎರಡನೇ  ಇನ್ನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ಬೌಲರ್​ಗಳು ಭಾರತದ ವಿರುದ್ಧ ಮಿಂಚಿದ್ದಾರೆ. ಅದರಲ್ಲೂ ಜೋಷ್ ಹ್ಯಾಜ್ಲೆವುಡ್​ 8 ರನ್​ಗಳನ್ನು ನೀಡಿ ಐದು ವಿಕೆಟ್​ ಪಡೆದರು. ಇನ್ನು ಪ್ಯಾಟ್ ಕಮ್ಮಿನ್ಸ್​ ಕೂಡ ಮಿಂಚಿದ್ದು ನಾಲ್ಕು ವಿಕೆಟ್​ ಗಳಿಸಿದರು.

ಅಂತಿಮವಾಗಿ ಭಾರತ ನೀಡಿದ 90 ರನ್​ಗಳ ಗುರಿ ಬೆನ್ನು ಹತ್ತಿದ ಆಸ್ಟ್ರೇಲಿಯಾ ಎರಡು ವಿಕೆಟ್ ಕಳೆದುಕೊಂಡು ಗೆದ್ದು ಬೀಗಿತು. ಈ ಮೂಲಕ ಎಂಟು ವಿಕೆಟ್​ಗಳ ಜಯ ಕಂಡಿತು.

ಮೂರೇ ದಿನಕ್ಕೆ ಮುಗಿದು ಹೋಯ್ತು ಟೆಸ್ಟ್​

ಐದು ದಿನಗಳ ಹೊನಲು ಬೆಳಕಿನ ಟೆಸ್ಟ್​ ಕೇವಲ ಮೂರೇ ದಿನಕ್ಕೆ ಪೂರ್ಣಗೊಂಡಿದೆ. ಮೊದಲ ಇನ್ನಿಂಗ್ಸ್​ ಎರಡು ದಿನಕ್ಕೆ ಪೂರ್ಣಗೊಂಡರೆ ಎರಡನೇ ಇನ್ನಿಂಗ್ಸ್​ ಕೇವಲ ಅರ್ಧ ದಿನಕ್ಕೆ ಅಂತ್ಯವಾಗಿದೆ.

ಕೊಹ್ಲಿಗೆ ಅರ್ಜೆಂಟ್​ ಇದೆ ಎಂದ್ರು ನೆಟ್ಟಿಗರು

ಕೊಹ್ಲಿ ಈ ಟೆಸ್ಟ್​ ಪೂರ್ಣಗೊಳಿಸಿ ಪಿತೃತ್ವ ರಜೆ ಪಡೆದು ಭಾರತಕ್ಕೆ ಮರಳುತ್ತಿದ್ದಾರೆ. ಟೀಂ ಇಂಡಿಯಾ ಕಳಪೆ ಪ್ರದರ್ಶನದ  ಬಗ್ಗೆ ಕುಹಕ ಆಡಿರುವ ನೆಟ್ಟಿಗರು, ವಿರಾಟ್​ ಕೊಹ್ಲಿಗೆ ಮನೆಗೆ ತೆರಳೋಕೆ ತಡವಾದಂತಿದೆ. ಹೀಗಾಗಿ, ಬೇಗ ಔಟ್​ ಆಗಿದ್ದಾರೆ ಎಂದು ಟೀಕಿಸಿದ್ದಾರೆ.

India Vs Australia Test Series 2020 | ಭಾರತದ ಫೀಲ್ಡರ್​ಗಳು ಕ್ರಿಸ್​ಮಸ್ ಮೂಡ್​ನಲ್ಲಿದ್ದಾರೆ: ಗಾವಸ್ಕರ್ ಟೀಕೆ

Published On - 1:34 pm, Sat, 19 December 20

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ