AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೂಪಾಂತರ ಕೊರೊನಾದ ಕರಾಳಛಾಯೆ; ಇಂಡೋ-ಆಸಿಸ್​ 2ನೇ ಟೆಸ್ಟ್​​ನಿಂದ ವಾರ್ನರ್​, ಅಬಾಟ್ ಔಟ್

ಸಿಡ್ನಿಯಲ್ಲಿ ಈಗಾಗಲೇ ಹೊಸ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾದ ಬಳಿಕ ಭೀತಿ ಉಂಟಾಗಿದೆ. ಈ ಕಾರಣದಿಂದಾಗಿ ಡೇವಿಡ್ ವಾರ್ನರ್ ಮತ್ತು ವೇಗದ ಬೌಲರ್ ಸೀನ್ ಅಬಾಟ್ ಎರಡನೇ ಟೆಸ್ಟ್‌ನಿಂದ ಹೊರಗುಳಿದಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಸಮರ್ಥನೆ ನೀಡಿದೆ.

ರೂಪಾಂತರ ಕೊರೊನಾದ ಕರಾಳಛಾಯೆ; ಇಂಡೋ-ಆಸಿಸ್​ 2ನೇ ಟೆಸ್ಟ್​​ನಿಂದ ವಾರ್ನರ್​, ಅಬಾಟ್ ಔಟ್
ವೇಗದ ಬೌಲರ್ ಸೀನ್ ಅಬಾಟ್ ಮತ್ತು ಡೇವಿಡ್ ವಾರ್ನರ್
Follow us
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​

Updated on: Dec 23, 2020 | 1:36 PM

ಮೆಲ್ಬೋರ್ನ್: ಭಾರತ (ಆಸ್ಟ್ರೇಲಿಯಾ) ವಿರುದ್ಧದ ಮೆಲ್ಬೋರ್ನ್ ಟೆಸ್ಟ್ ಪಂದ್ಯಕ್ಕೂ ಮೊದಲು ಆಸ್ಟ್ರೇಲಿಯಾ ತಂಡ ದೊಡ್ಡ ಹಿನ್ನಡೆ ಅನುಭವಿಸಿದ್ದು, ತಂಡದ ಅನುಭವಿ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಮತ್ತು ವೇಗದ ಬೌಲರ್ ಸೀನ್ ಅಬಾಟ್ ಎರಡನೇ ಟೆಸ್ಟ್‌ನಿಂದ ಹೊರಗುಳಿದಿದ್ದಾರೆ.

ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಗಾಯದಿಂದಾಗಿ ಇಬ್ಬರೂ ಆಟಗಾರರು ಪಂದ್ಯದಿಂದ ಹೊರಗುಳಿದಿದ್ದರು. ಚಿಕಿತ್ಸೆಯ ನಂತರ ಗುಣಮುಖರಾಗಿದ್ದ ಇಬ್ಬರು ಆಟಗಾರರು ಎರಡನೇ ಟೆಸ್ಟ್‌ ಪಂದ್ಯದಲ್ಲಿ ಕಣಕ್ಕಿಳಿಯುವ ಭರವಸೆ ಮೂಡಿಸಿದ್ದರು. ಆದರೆ ಕ್ರಿಕೆಟ್ ಆಸ್ಟ್ರೇಲಿಯಾ ಡಿಸೆಂಬರ್ 23 ಬುಧವಾರದಂದು ಈ ಎರಡೂ ಆಟಗಾರರು ಮೆಲ್ಬೋರ್ನ್ ಟೆಸ್ಟ್ನಿಂದ ಹೊರಗುಳಿದಿದ್ದಾರೆ ಎಂದು ಮಾಹಿತಿ ನೀಡಿದೆ.

ಕ್ರಿಕೆಟ್ ಆಸ್ಟ್ರೇಲಿಯಾದ ಈ ನಿಲುವಿಗೆ ಪ್ರಮುಖ ಕಾರಣವೆಂದರೆ ಈ ಇಬ್ಬರೂ ಆಟಗಾರರು ಕೆಲವು ದಿನಗಳ ಹಿಂದೆ ಸಿಡ್ನಿಯಲ್ಲಿದ್ದರು. ಹಾಗಾಗಿ ಸಿಡ್ನಿಯಲ್ಲಿ ಈಗಾಗಲೇ ಹೊಸ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾದ ಬಳಿಕ ಭೀತಿ ಉಂಟಾಗಿದೆ. ಈ ಕಾರಣದಿಂದಾಗಿ ಡೇವಿಡ್ ವಾರ್ನರ್ ಮತ್ತು ವೇಗದ ಬೌಲರ್ ಸೀನ್ ಅಬಾಟ್ ಎರಡನೇ ಟೆಸ್ಟ್‌ನಿಂದ ಹೊರಗುಳಿದಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಸಮರ್ಥನೆ ನೀಡಿದೆ.

ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಡೇವಿಡ್ ವಾರ್ನರ್ ಸ್ನಾಯು ಸೆಳೆತದಿಂದ ಬಳಲುತ್ತಿದ್ದರು. ಇದರಿಂದಾಗಿ ಅವರು ಕೊನೆಯ ಏಕದಿನ ಪಂದ್ಯ ಹಾಗೂ ಟಿ 20 ಸರಣಿ ಮತ್ತು ಮೊದಲ ಟೆಸ್ಟ್ ಪಂದ್ಯಗಳಲ್ಲಿ ಆಡಲು ಸಾಧ್ಯವಾಗಲಿಲ್ಲ. ಅದೇ ಸಮಯದಲ್ಲಿ ಭಾರತ ವಿರುದ್ಧದ ಅಭ್ಯಾಸ ಪಂದ್ಯದ ವೇಳೆ ವೇಗದ ಬೌಲರ್ ಶಾನ್ ಅಬಾಟ್ ಗಾಯಗೊಂಡಿದ್ದರು.

ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಲರ್ಟ್​
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ
ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಹೇಗಿದೆ? ಪಾಕ್ ಪತ್ರಕರ್ತ ಹೇಳಿದ್ದೇನು?
ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಹೇಗಿದೆ? ಪಾಕ್ ಪತ್ರಕರ್ತ ಹೇಳಿದ್ದೇನು?
ಪಾಕಿಸ್ತಾನ್ ಪರ ಘೋಷಣೆ ಕೂಗಿದ ಆರೋಪ ಮತ್ತು ಕೊಲೆ, ಪೊಲೀಸರಿಂದ 15 ಜನರ ಬಂಧನ
ಪಾಕಿಸ್ತಾನ್ ಪರ ಘೋಷಣೆ ಕೂಗಿದ ಆರೋಪ ಮತ್ತು ಕೊಲೆ, ಪೊಲೀಸರಿಂದ 15 ಜನರ ಬಂಧನ
ಅದ್ದೂರಿಯಾಗಿ ರಿಸೆಪ್ಷನ್ ನಡೆದಾಗ ವರ ಖುಷಿಯಾಗಿದ್ದ! ನಂತರ ನಡೆದದ್ದೇ ಬೇರೆ
ಅದ್ದೂರಿಯಾಗಿ ರಿಸೆಪ್ಷನ್ ನಡೆದಾಗ ವರ ಖುಷಿಯಾಗಿದ್ದ! ನಂತರ ನಡೆದದ್ದೇ ಬೇರೆ
ತಮಿಳುನಾಡಿನ ಪೊಲೀಸ್​ ಠಾಣೆಯೊಳಗೆ ಬಂದು ಇಣುಕಿ ನೋಡಿದ ಚಿರತೆ
ತಮಿಳುನಾಡಿನ ಪೊಲೀಸ್​ ಠಾಣೆಯೊಳಗೆ ಬಂದು ಇಣುಕಿ ನೋಡಿದ ಚಿರತೆ
ಕಾಶಪ್ಪನವರ್​ ಮಹಾ ಭ್ರಷ್ಟ, ಪಂಚಮಸಾಲಿ ಸಮಾಜಕ್ಕೆ ಮೋಸ ಮಾಡಿದ್ದಾರೆ: ಯತ್ನಾಳ್
ಕಾಶಪ್ಪನವರ್​ ಮಹಾ ಭ್ರಷ್ಟ, ಪಂಚಮಸಾಲಿ ಸಮಾಜಕ್ಕೆ ಮೋಸ ಮಾಡಿದ್ದಾರೆ: ಯತ್ನಾಳ್
ಸುದೀಪಣ್ಣ, ಶಿವಣ್ಣ ನನಗೆ ಸಾಕಷ್ಟು ಪ್ರೀತಿ ಕೊಟ್ಟಿದ್ದಾರೆ ನಾನಿ ಮುಕ್ತ ಮಾತು
ಸುದೀಪಣ್ಣ, ಶಿವಣ್ಣ ನನಗೆ ಸಾಕಷ್ಟು ಪ್ರೀತಿ ಕೊಟ್ಟಿದ್ದಾರೆ ನಾನಿ ಮುಕ್ತ ಮಾತು
ಆಂಧ್ರಪ್ರದೇಶ, ದೇವಸ್ಥಾನದ ಗೋಡೆ ಕುಸಿದು 8 ಮಂದಿ ಸಾವು
ಆಂಧ್ರಪ್ರದೇಶ, ದೇವಸ್ಥಾನದ ಗೋಡೆ ಕುಸಿದು 8 ಮಂದಿ ಸಾವು