AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೂಪಾಂತರ ಕೊರೊನಾದ ಕರಾಳಛಾಯೆ; ಇಂಡೋ-ಆಸಿಸ್​ 2ನೇ ಟೆಸ್ಟ್​​ನಿಂದ ವಾರ್ನರ್​, ಅಬಾಟ್ ಔಟ್

ಸಿಡ್ನಿಯಲ್ಲಿ ಈಗಾಗಲೇ ಹೊಸ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾದ ಬಳಿಕ ಭೀತಿ ಉಂಟಾಗಿದೆ. ಈ ಕಾರಣದಿಂದಾಗಿ ಡೇವಿಡ್ ವಾರ್ನರ್ ಮತ್ತು ವೇಗದ ಬೌಲರ್ ಸೀನ್ ಅಬಾಟ್ ಎರಡನೇ ಟೆಸ್ಟ್‌ನಿಂದ ಹೊರಗುಳಿದಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಸಮರ್ಥನೆ ನೀಡಿದೆ.

ರೂಪಾಂತರ ಕೊರೊನಾದ ಕರಾಳಛಾಯೆ; ಇಂಡೋ-ಆಸಿಸ್​ 2ನೇ ಟೆಸ್ಟ್​​ನಿಂದ ವಾರ್ನರ್​, ಅಬಾಟ್ ಔಟ್
ವೇಗದ ಬೌಲರ್ ಸೀನ್ ಅಬಾಟ್ ಮತ್ತು ಡೇವಿಡ್ ವಾರ್ನರ್
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on: Dec 23, 2020 | 1:36 PM

Share

ಮೆಲ್ಬೋರ್ನ್: ಭಾರತ (ಆಸ್ಟ್ರೇಲಿಯಾ) ವಿರುದ್ಧದ ಮೆಲ್ಬೋರ್ನ್ ಟೆಸ್ಟ್ ಪಂದ್ಯಕ್ಕೂ ಮೊದಲು ಆಸ್ಟ್ರೇಲಿಯಾ ತಂಡ ದೊಡ್ಡ ಹಿನ್ನಡೆ ಅನುಭವಿಸಿದ್ದು, ತಂಡದ ಅನುಭವಿ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಮತ್ತು ವೇಗದ ಬೌಲರ್ ಸೀನ್ ಅಬಾಟ್ ಎರಡನೇ ಟೆಸ್ಟ್‌ನಿಂದ ಹೊರಗುಳಿದಿದ್ದಾರೆ.

ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಗಾಯದಿಂದಾಗಿ ಇಬ್ಬರೂ ಆಟಗಾರರು ಪಂದ್ಯದಿಂದ ಹೊರಗುಳಿದಿದ್ದರು. ಚಿಕಿತ್ಸೆಯ ನಂತರ ಗುಣಮುಖರಾಗಿದ್ದ ಇಬ್ಬರು ಆಟಗಾರರು ಎರಡನೇ ಟೆಸ್ಟ್‌ ಪಂದ್ಯದಲ್ಲಿ ಕಣಕ್ಕಿಳಿಯುವ ಭರವಸೆ ಮೂಡಿಸಿದ್ದರು. ಆದರೆ ಕ್ರಿಕೆಟ್ ಆಸ್ಟ್ರೇಲಿಯಾ ಡಿಸೆಂಬರ್ 23 ಬುಧವಾರದಂದು ಈ ಎರಡೂ ಆಟಗಾರರು ಮೆಲ್ಬೋರ್ನ್ ಟೆಸ್ಟ್ನಿಂದ ಹೊರಗುಳಿದಿದ್ದಾರೆ ಎಂದು ಮಾಹಿತಿ ನೀಡಿದೆ.

ಕ್ರಿಕೆಟ್ ಆಸ್ಟ್ರೇಲಿಯಾದ ಈ ನಿಲುವಿಗೆ ಪ್ರಮುಖ ಕಾರಣವೆಂದರೆ ಈ ಇಬ್ಬರೂ ಆಟಗಾರರು ಕೆಲವು ದಿನಗಳ ಹಿಂದೆ ಸಿಡ್ನಿಯಲ್ಲಿದ್ದರು. ಹಾಗಾಗಿ ಸಿಡ್ನಿಯಲ್ಲಿ ಈಗಾಗಲೇ ಹೊಸ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾದ ಬಳಿಕ ಭೀತಿ ಉಂಟಾಗಿದೆ. ಈ ಕಾರಣದಿಂದಾಗಿ ಡೇವಿಡ್ ವಾರ್ನರ್ ಮತ್ತು ವೇಗದ ಬೌಲರ್ ಸೀನ್ ಅಬಾಟ್ ಎರಡನೇ ಟೆಸ್ಟ್‌ನಿಂದ ಹೊರಗುಳಿದಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಸಮರ್ಥನೆ ನೀಡಿದೆ.

ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಡೇವಿಡ್ ವಾರ್ನರ್ ಸ್ನಾಯು ಸೆಳೆತದಿಂದ ಬಳಲುತ್ತಿದ್ದರು. ಇದರಿಂದಾಗಿ ಅವರು ಕೊನೆಯ ಏಕದಿನ ಪಂದ್ಯ ಹಾಗೂ ಟಿ 20 ಸರಣಿ ಮತ್ತು ಮೊದಲ ಟೆಸ್ಟ್ ಪಂದ್ಯಗಳಲ್ಲಿ ಆಡಲು ಸಾಧ್ಯವಾಗಲಿಲ್ಲ. ಅದೇ ಸಮಯದಲ್ಲಿ ಭಾರತ ವಿರುದ್ಧದ ಅಭ್ಯಾಸ ಪಂದ್ಯದ ವೇಳೆ ವೇಗದ ಬೌಲರ್ ಶಾನ್ ಅಬಾಟ್ ಗಾಯಗೊಂಡಿದ್ದರು.

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!