AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Series | 3ನೇ ಟೆ​ಸ್ಟ್​ಗೆ ಭಾರತ ತಂಡ ಪ್ರಕಟ; ಟೆಸ್ಟ್ ಕ್ರಿಕೆಟ್​ಗೆ ಸೈನಿ​ ಪಾದಾರ್ಪಣೆ

ಅಜಿಂಕ್ಯಾ ರಹಾನೆ 3ನೇ ಟೆಸ್ಟ್​ ಪಂದ್ಯದಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಗಾಯದಿಂದಾಗಿ 2 ಟೆಸ್ಟ್​ ಪಂದ್ಯಗಳಿಗೆ ಅಲಭ್ಯರಾಗಿದ್ದ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಕಣಕ್ಕಿಳಿಯಲ್ಲಿದ್ದಾರೆ. ವೇಗಿ ನವದೀಪ್ ಸೈನಿ ಪಾದಾರ್ಪಣೆ ಮಾಡಲಿದ್ದಾರೆ.

India vs Australia Test Series | 3ನೇ ಟೆ​ಸ್ಟ್​ಗೆ ಭಾರತ ತಂಡ ಪ್ರಕಟ; ಟೆಸ್ಟ್ ಕ್ರಿಕೆಟ್​ಗೆ ಸೈನಿ​ ಪಾದಾರ್ಪಣೆ
ಅಭ್ಯಾಸದಲ್ಲಿ ನಿರತರಾಗಿರುವ ಟೀಂ ಇಂಡಿಯಾ ಆಟಗಾರರು
ಪೃಥ್ವಿಶಂಕರ
|

Updated on:Jan 06, 2021 | 2:13 PM

Share

ಸಿಡ್ನಿ: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಈಗಾಗಲೇ ನಡೆದಿರುವ 2 ಟೆಸ್ಟ್​ ಪಂದ್ಯಗಳಲ್ಲಿ ಒಂದರಲ್ಲಿ ಹೀನಾಯವಾಗಿ ಸೋತು, ಮತ್ತೊಂದರಲ್ಲಿ ಭರ್ಜರಿ ಜಯ ಸಾಧಿಸಿದೆ. ಹೀಗಾಗಿ ಎಲ್ಲರ ಕಣ್ಣು ಮೂರನೇ ಟೆಸ್ಟ್​ ಮೇಲೆ ಬಿದ್ದಿದೆ.

ಮೂರನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ, ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದೆ. 3ನೇ ಟೆಸ್ಟ್ ಪಂದ್ಯವನ್ನು ಅಜಿಂಕ್ಯಾ ರಹಾನೆ ನಾಯಕನಾಗಿ ಮುನ್ನಡೆಸಲಿದ್ದಾರೆ. ಗಾಯದಿಂದಾಗಿ 2 ಟೆಸ್ಟ್​ ಪಂದ್ಯಗಳಿಗೆ ಅಲಭ್ಯರಾಗಿದ್ದ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಕಣಕ್ಕಿಳಿಯಲ್ಲಿದ್ದಾರೆ. ಜೊತೆಗೆ ಮೊದಲ ಬಾರಿಗೆ ಟೆಸ್ಟ್​ ಕ್ರಿಕೆಟ್​ಗೆ ವೇಗಿ ನವದೀಪ್ ಸೈನಿ ಪಾದಾರ್ಪಣೆ ಮಾಡಲಿದ್ದಾರೆ.

ರೋಹಿತ್​ ಶರ್ಮ ತಂಡಕ್ಕೆ ಮರಳಿರುವುದರಿಂದ ಕಳಪೆ ಫಾರ್ಮ್​ನಲ್ಲಿದ್ದ ಮಾಯಾಂಕ್​ ಅಗರವಾಲ್​ಗೆ ತಂಡದಿಂದ ಕೋಕ್​ ನೀಡಲಾಗಿದೆ. ಇನ್ನೂ ಕಳೆದ ಪಂದ್ಯದಲ್ಲಿ ಗಾಯದ ಸಮಸ್ಯೆಯಿಂದಾಗಿ ಪಂದ್ಯದಿಂದ ಹೊರ ನಡೆದಿದ್ದ ವೇಗಿ ಉಮೇಶ್​ ಯಾದವ್​ ಸ್ಥಾನಕ್ಕೆ ನವದೀಪ್ ಸೈನಿ ಆಯ್ಕೆಯಾಗಿದ್ದಾರೆ. ಜನವರಿ 7ರಿಂದ ಭಾರತೀಯ ಕಾಲಮಾನ ಮುಂಜಾನೆ 5 ಗಂಟೆಗೆ 3ನೇ ಟೆಸ್ಟ್​ ಪಂದ್ಯ ಪ್ರಾರಂಭವಾಗಲಿದೆ.

ಆಟಗಾರರ ಪಟ್ಟಿ: ಅಜಿಂಕ್ಯಾ ರಹಾನೆ (ಕ್ಯಾಪ್ಟನ್), ರೋಹಿತ್ ಶರ್ಮಾ, ಶುಭಮನ್ ಗಿಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ರಿಷಭ್ ಪಂತ್, ರವೀಂದ್ರ ಜಡೇಜಾ, ಆರ್.ಅಶ್ವಿನ್, ಜಸ್​ಪ್ರೀತ್​ ಬುಮ್ರಾ, ಮೊಹಮದ್ ಸಿರಾಜ್, ನವದೀಪ್ ಸೈನಿ

ಟೀಂ ಇಂಡಿಯಾ ಫ್ಯಾನ್ಸ್​ಗೆ ಸಿಹಿ ಸುದ್ದಿ: ಐಸೋಲೇಷನ್​ನಲ್ಲಿದ್ದ ಆಟಗಾರರ ಬಗ್ಗೆ ಮಹತ್ತರ ಮಾಹಿತಿ ನೀಡಿದ BCCI

Published On - 2:07 pm, Wed, 6 January 21

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!