AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Series | 3ನೇ ಟೆ​ಸ್ಟ್​ಗೆ ಭಾರತ ತಂಡ ಪ್ರಕಟ; ಟೆಸ್ಟ್ ಕ್ರಿಕೆಟ್​ಗೆ ಸೈನಿ​ ಪಾದಾರ್ಪಣೆ

ಅಜಿಂಕ್ಯಾ ರಹಾನೆ 3ನೇ ಟೆಸ್ಟ್​ ಪಂದ್ಯದಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಗಾಯದಿಂದಾಗಿ 2 ಟೆಸ್ಟ್​ ಪಂದ್ಯಗಳಿಗೆ ಅಲಭ್ಯರಾಗಿದ್ದ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಕಣಕ್ಕಿಳಿಯಲ್ಲಿದ್ದಾರೆ. ವೇಗಿ ನವದೀಪ್ ಸೈನಿ ಪಾದಾರ್ಪಣೆ ಮಾಡಲಿದ್ದಾರೆ.

India vs Australia Test Series | 3ನೇ ಟೆ​ಸ್ಟ್​ಗೆ ಭಾರತ ತಂಡ ಪ್ರಕಟ; ಟೆಸ್ಟ್ ಕ್ರಿಕೆಟ್​ಗೆ ಸೈನಿ​ ಪಾದಾರ್ಪಣೆ
ಅಭ್ಯಾಸದಲ್ಲಿ ನಿರತರಾಗಿರುವ ಟೀಂ ಇಂಡಿಯಾ ಆಟಗಾರರು
ಪೃಥ್ವಿಶಂಕರ
|

Updated on:Jan 06, 2021 | 2:13 PM

Share

ಸಿಡ್ನಿ: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಈಗಾಗಲೇ ನಡೆದಿರುವ 2 ಟೆಸ್ಟ್​ ಪಂದ್ಯಗಳಲ್ಲಿ ಒಂದರಲ್ಲಿ ಹೀನಾಯವಾಗಿ ಸೋತು, ಮತ್ತೊಂದರಲ್ಲಿ ಭರ್ಜರಿ ಜಯ ಸಾಧಿಸಿದೆ. ಹೀಗಾಗಿ ಎಲ್ಲರ ಕಣ್ಣು ಮೂರನೇ ಟೆಸ್ಟ್​ ಮೇಲೆ ಬಿದ್ದಿದೆ.

ಮೂರನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ, ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದೆ. 3ನೇ ಟೆಸ್ಟ್ ಪಂದ್ಯವನ್ನು ಅಜಿಂಕ್ಯಾ ರಹಾನೆ ನಾಯಕನಾಗಿ ಮುನ್ನಡೆಸಲಿದ್ದಾರೆ. ಗಾಯದಿಂದಾಗಿ 2 ಟೆಸ್ಟ್​ ಪಂದ್ಯಗಳಿಗೆ ಅಲಭ್ಯರಾಗಿದ್ದ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಕಣಕ್ಕಿಳಿಯಲ್ಲಿದ್ದಾರೆ. ಜೊತೆಗೆ ಮೊದಲ ಬಾರಿಗೆ ಟೆಸ್ಟ್​ ಕ್ರಿಕೆಟ್​ಗೆ ವೇಗಿ ನವದೀಪ್ ಸೈನಿ ಪಾದಾರ್ಪಣೆ ಮಾಡಲಿದ್ದಾರೆ.

ರೋಹಿತ್​ ಶರ್ಮ ತಂಡಕ್ಕೆ ಮರಳಿರುವುದರಿಂದ ಕಳಪೆ ಫಾರ್ಮ್​ನಲ್ಲಿದ್ದ ಮಾಯಾಂಕ್​ ಅಗರವಾಲ್​ಗೆ ತಂಡದಿಂದ ಕೋಕ್​ ನೀಡಲಾಗಿದೆ. ಇನ್ನೂ ಕಳೆದ ಪಂದ್ಯದಲ್ಲಿ ಗಾಯದ ಸಮಸ್ಯೆಯಿಂದಾಗಿ ಪಂದ್ಯದಿಂದ ಹೊರ ನಡೆದಿದ್ದ ವೇಗಿ ಉಮೇಶ್​ ಯಾದವ್​ ಸ್ಥಾನಕ್ಕೆ ನವದೀಪ್ ಸೈನಿ ಆಯ್ಕೆಯಾಗಿದ್ದಾರೆ. ಜನವರಿ 7ರಿಂದ ಭಾರತೀಯ ಕಾಲಮಾನ ಮುಂಜಾನೆ 5 ಗಂಟೆಗೆ 3ನೇ ಟೆಸ್ಟ್​ ಪಂದ್ಯ ಪ್ರಾರಂಭವಾಗಲಿದೆ.

ಆಟಗಾರರ ಪಟ್ಟಿ: ಅಜಿಂಕ್ಯಾ ರಹಾನೆ (ಕ್ಯಾಪ್ಟನ್), ರೋಹಿತ್ ಶರ್ಮಾ, ಶುಭಮನ್ ಗಿಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ರಿಷಭ್ ಪಂತ್, ರವೀಂದ್ರ ಜಡೇಜಾ, ಆರ್.ಅಶ್ವಿನ್, ಜಸ್​ಪ್ರೀತ್​ ಬುಮ್ರಾ, ಮೊಹಮದ್ ಸಿರಾಜ್, ನವದೀಪ್ ಸೈನಿ

ಟೀಂ ಇಂಡಿಯಾ ಫ್ಯಾನ್ಸ್​ಗೆ ಸಿಹಿ ಸುದ್ದಿ: ಐಸೋಲೇಷನ್​ನಲ್ಲಿದ್ದ ಆಟಗಾರರ ಬಗ್ಗೆ ಮಹತ್ತರ ಮಾಹಿತಿ ನೀಡಿದ BCCI

Published On - 2:07 pm, Wed, 6 January 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ