AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs 2nd Test 3ನೇ ದಿನ: 131 ರನ್​ ಮುನ್ನಡೆ ಸಾಧಿಸಿದ ಭಾರತ, ಆಸಿಸ್​ಗೆ ಆರಂಭಿಕ ಆಘಾತ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2ನೇ ಟೆಸ್ಟ್​ ಪಂದ್ಯದ 3ನೇ ದಿನದಾಟದಲ್ಲಿ ಟೀಂ ಇಂಡಿಯಾ ತನ್ನೆಲ್ಲ ವಿಕೆಟ್​ ಕಳೆದುಕೊಂಡು ಮೊದಲ ಇನ್ನಿಂಗ್ಸ್‌ನಲ್ಲಿ 326 ರನ್ ಗಳಿಸಿದೆ. ಈ ಮೂಲಕ ಟೀಂ ಇಂಡಿಯಾ 131 ರನ್‌ಗಳ ಮುನ್ನಡೆ ಸಾಧಿಸಿದೆ.

India vs 2nd Test 3ನೇ ದಿನ: 131 ರನ್​ ಮುನ್ನಡೆ ಸಾಧಿಸಿದ ಭಾರತ, ಆಸಿಸ್​ಗೆ ಆರಂಭಿಕ ಆಘಾತ
ವಿಕೆಟ್​ ಪಡೆದ ಸಂಭ್ರಮದಲ್ಲಿ ಟೀಂ ಇಂಡಿಯಾ
ಪೃಥ್ವಿಶಂಕರ
|

Updated on:Dec 28, 2020 | 12:36 PM

Share

ಮೆಲ್ಬೋರ್ನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2ನೇ ಟೆಸ್ಟ್​ ಪಂದ್ಯದ 3ನೇ ದಿನದಾಟದಲ್ಲಿ ಟೀಂ ಇಂಡಿಯಾ ತನ್ನೆಲ್ಲಾ ವಿಕೆಟ್​ ಕಳೆದುಕೊಂಡು ಮೊದಲ ಇನ್ನಿಂಗ್ಸ್‌ನಲ್ಲಿ 326 ರನ್ ಗಳಿಸಿದೆ. ಈ ಮೂಲಕ ಟೀಂ ಇಂಡಿಯಾ 131 ರನ್‌ಗಳ ಮುನ್ನಡೆ ಸಾಧಿಸಿದೆ.

2ನೇ ದಿನಾದಟದಲ್ಲಿ 5 ವಿಕೆಟ್‌ಗಳನ್ನ ಕಳೆದುಕೊಂಡು ಭಾರತ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 277 ರನ್‌ ಗಳಿಸಿತ್ತು. ನಾಯಕ ಅಜಿಂಕ್ಯ ರಹಾನೆ ಹಾಗೂ ರವೀಂದ್ರ ಜಡೇಜಾ ಅಜೇಯರಾಗಿ ಉಳಿದಿದ್ದರು. ಉತ್ತಮ ಸ್ಥಿತಿಯಲ್ಲಿ 3ನೇ ದಿನದಾಟವನ್ನ ಪ್ರಾರಂಭಿಸಿದ ಭಾರತ ಆರಂಭದಿಂದಲೂ ವಿಕೆಟ್​ ಕಳೆದುಕೊಳ್ಳಲು ಪ್ರಾರಂಭಿಸಿತು. 2ನೇ ದಿನದಾಟದಲ್ಲಿ 104 ರನ್​ ಗಳಿಸಿದ್ದ ರಹಾನೆ, 3ನೇ ದಿನದಾಟದಲ್ಲಿ 112 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಕೊನೆಗೊಳಿಸಿದರು.

ಜಡೇಜಾ ಅಮೋಘ ಅರ್ಧ ಶತಕ ನಾಯಕ ರಹಾನೆಗೆ ಉತ್ತಮ ಸಾಥ್​ ನೀಡಿದ ಜಡೇಜಾ ಅಮೋಘ ಅರ್ಧ ಶತಕ ಗಳಿಸಿ ವಿಕೆಟ್​ ಒಪ್ಪಿಸಿದರು. ಈ ಎರಡು ವಿಕೆಟ್‌ಗಳ ನಂತರ ಬಂದ ಕೆಳ ಕ್ರಮಾಂಕದ ಯಾವೊಬ್ಬ ಆಟಗಾರನು ಹೆಚ್ಚು ಹೊತ್ತು ಮೈದಾನದಲ್ಲಿ ನಿಲ್ಲಲಿಲ್ಲ. ಪರಿಣಾಮವಾಗಿ ಭಾರತ 326 ರನ್​ ಗಳಿಸಿ ಆಲ್​ ಔಟ್​ ಆಯಿತು. ಈ ಮೂಲಕ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್​ನಲ್ಲಿ 131 ರನ್​ಗಳ ಮುನ್ನಡೆ ಸಾಧಿಸಿತು.

ತನ್ನ ಎರಡನೇ ಇನ್ನಿಂಗ್ಸ್‌ ಆರಂಭಿಸಿರುವ ಆಸ್ಟ್ರೇಲಿಯಾಕ್ಕೆ ಆರಂಭಿಕ ಆಘಾತ ಎದುರಾಗಿದ್ದು, 4 ರನ್ ಗಳಿಸಿದ್ದ ಆಸಿಸ್​ ಆರಂಭಿಕ ಆಟಗಾರ ಜೋ ಬರ್ನ್ಸ್​ಗೆ ಉಮೇಶ್​ ಯಾದವ್​ ಪೆವಿಲಿಯನ್​ ದಾರಿ ತೋರಿಸಿದರು.

ಹಾಗೂ 28 ರನ್​ ಗಳಿಸಿದ್ದ ಮಾರ್ನಸ್ ಲ್ಯಾಬುಸ್ಚೆನ್‌ರ ವಿಕೆಟ್‌ ಪಡೆಯುವುದರ ಮೂಲಕ ರವಿಚಂದ್ರನ್​ ಅಶ್ವಿನ್​ ಟೀಂ ಇಂಡಿಯಾಗೆ 2ನೇ ಯಶಸ್ಸು ತಂದುಕೊಟ್ಟರು. ತಾಜಾ ವರದಿ ಪ್ರಕಾರ 2 ವಿಕೆಟ್​ ಕಳೆದುಕೊಂಡಿರುವ ಆಸಿಸ್​ ಪಡೆ 65 ರನ್​ ಗಳಿಸಿದೆ.

ICC ದಶಕದ ತಂಡ ಪ್ರಕಟ; ಕ್ರಿಕೆಟ್​ನ 3 ಆವೃತ್ತಿಯಲ್ಲೂ ಸ್ಥಾನ ಪಡೆದ ಕಿಂಗ್ ಕೊಹ್ಲಿ, ಭಾರತೀಯರದ್ದೇ ಸಿಂಹ ಪಾಲು..

Published On - 9:50 am, Mon, 28 December 20

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್