AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia 2nd Test ಭರ್ಜರಿ ಗೆಲುವಿನೊಂದಿಗೆ 2020ಕ್ಕೆ ವಿದಾಯ ಹೇಳಿದ ಭಾರತ, ಕುತೂಹಲಕಾರಿ ಘಟ್ಟದತ್ತ ಟೆಸ್ಟ್​ ಸರಣಿ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ರೆಡನೇ ಟೆಸ್ಟ್ ಸರಣಿಯ ನಾಲ್ಕನೇ ದಿನದ ಪಂದ್ಯ ಇತಿಹಾಸ ಪ್ರಸಿದ್ಧ ಮೆಲ್ಬೋರ್ನ್‌ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆಯುತ್ತಿದ್ದು 8 ವಿಕೆಟ್‌ಗಳಿಂದ ಭಾರತ ಜಯ ಸಾಧಿಸಿದೆ.

India vs Australia 2nd Test ಭರ್ಜರಿ ಗೆಲುವಿನೊಂದಿಗೆ 2020ಕ್ಕೆ ವಿದಾಯ ಹೇಳಿದ ಭಾರತ, ಕುತೂಹಲಕಾರಿ ಘಟ್ಟದತ್ತ ಟೆಸ್ಟ್​ ಸರಣಿ
ಎರಡನೇ ಟೆಸ್ಟ್ ಪಂದ್ಯವನ್ನು 8 ವಿಕೆಟ್‌ಗಳಿಂದ ಜಯಿಸಿದ ಭಾರತ ನಾಲ್ಕು ಪಂದ್ಯಗಳ ಸರಣಿಯನ್ನು 1-1ರಿಂದ ಸಮಗೊಳಿಸಿದೆ.
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Dec 29, 2020 | 10:22 AM

Share

ಮೆಲ್ಬೋರ್ನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲಿ ಇತಿಹಾಸ ಪ್ರಸಿದ್ಧ ಮೆಲ್ಬೋರ್ನ್‌ ಕ್ರಿಕೆಟ್ ಗ್ರೌಂಡ್​ನಲ್ಲಿ ಭಾರತ 8 ವಿಕೆಟ್‌ಗಳಿಂದ ಜಯ ಸಾಧಿಸಿದೆ. 4 ನೇ ದಿನದ ಬಾಕ್ಸಿಂಗ್ ದಿನದ ಟೆಸ್ಟ್ ಪಂದ್ಯವನ್ನು ಗೆಲ್ಲಲು ಭಾರತ 70 ರನ್ ಮೊತ್ತವನ್ನು ಬೆನ್ನಟ್ಟಿದ ಕಾರಣ ಪೂಜಾರಾ ಮತ್ತು ಅಗರ್ವಾಲ್ ವಿಕೆಟ್ ಕಳೆದುಕೊಂಡ ನಂತರ ಗಿಲ್ ಮತ್ತು ರಹಾನೆ ತಮ್ಮ ಹಿಡಿತವನ್ನು ಉಳಿಸಿಕೊಂಡರು.

ಆರು ವಿಕೆಟ್ ಕಳೆದುಕೊಂಡು 133ರನ್​ಗಳಿಂದ ದ್ವಿತೀಯ ಇನ್ನಿಂಗ್ಸ್ ಮುಂದುವರೆಸಿದ ಆಸ್ಟ್ರೇಲಿಯಾ, 103.1 ಓವರ್​ಗಳಿಗೆ 200 ರನ್​ಗಳಿಗೆ ಆಲೌಟ್ ಆಯಿತು. ಟೆಸ್ಟ್ ಗೆಲ್ಲಲು ಮತ್ತು ಸರಣಿಯನ್ನು ನೆಲಸಮ ಮಾಡಲು ಭಾರತಕ್ಕೆ 70 ರನ್​ಗಳ ಅಗತ್ಯವಿತ್ತು.

ತಮ್ಮ ಅಮೋಘ ಶತಕ ಹಾಗೂ ಅಗ್ರೆಸೀವ್ ಆಟದಿಂದಾಗಿ ಮ್ಯಾನ್​ ಆಫ್​ ದಿ ಮ್ಯಾಚ್​ ಪುರಸ್ಕೃತರಾದಅಜಿಂಕ್ಯ ರಹಾನೆ

ಕುತೂಹಲಕಾರಿ ಘಟ್ಟದತ್ತ ಟೆಸ್ಟ್​ ಸರಣಿ: ಅಡಿಲೇಡ್​ನಲ್ಲಿ ನಡೆದ ಮೊದಲ ಟೆಸ್ಟ್​ನಲ್ಲಿ ಕ್ಯಾಪ್ಟನ್​ ವಿರಾಟ್​ ಕೊಹ್ಲಿ ನೇತೃತ್ವದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿತ್ತು. ಆದ್ರೆ ಈಗ ಅಜಿಂಕ್ಯ ರಹಾನೆ ಅವರ ಅಗ್ರೆಸೀವ್ ಆಟ, ಹಾಗೂ ಅಮೋಘ ಶತಕದ ಕ್ಯಾಪ್ಟನ್ಸ್​​ ನಾಕ್​ನಿಂದಾಗಿ ತಂಡಕ್ಕೆ ಸುಲಭದ ಗೆಲುವು ದಕ್ಕಿಸಿಕೊಳ್ಳುವಲ್ಲಿ ಯಶ ಸಾಧಿಸಿದ್ದಾರೆ. ತನ್ಮೂಲಕ 4 ಟೆಸ್ಟ್​ ಪಂದ್ಯಗಳ ಸರಣಿಯನ್ನು ಜೀವಂತವಾಗಿರಿಸಿದ್ದಾರೆ. ಇದೀಗ ಸಿಡ್ನಿಯಲ್ಲಿ ಮುಂದಿನ ವರ್ಷ ನಡೆಯುವ ಮೂರನೆಯ ಪಂದ್ಯದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. Over to SCG Jan 7th …

Published On - 9:31 am, Tue, 29 December 20

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ