AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾಗೆ ಶಾಪವಾದ ಗಾಯಾಳು ಸಮಸ್ಯೆ; ಮೊದಲ ಟೆಸ್ಟ್​ಗೆ ಐವರು ಪ್ರಮುಖ ಆಟಗಾರರು ಅಲಭ್ಯ

ಆಸ್ಟ್ರೇಲಿಯಾದ ಐವರು ಆಟಗಾರರಿಗೆ ಗಾಯದ ಸಮಸ್ಯೆ ಕಾಡಿದೆ. ಹೀಗಾಗಿ, ಟೆಸ್ಟ್​ ಪಂದ್ಯ ಆಸ್ಟ್ರೇಲಿಯಾ ಪಾಲಿಗೆ ಕಷ್ಟವಾಗಬಹುದು. ಹಾಗಾದರೆ ಗಾಯಗೊಂಡ ಆಟಗಾರರು ಯಾರು? ಅವರು ಚೇತರಿಸಿಕೊಳ್ಳೋದು ಯಾವಾಗ ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

ಆಸ್ಟ್ರೇಲಿಯಾಗೆ ಶಾಪವಾದ ಗಾಯಾಳು ಸಮಸ್ಯೆ; ಮೊದಲ ಟೆಸ್ಟ್​ಗೆ ಐವರು ಪ್ರಮುಖ ಆಟಗಾರರು ಅಲಭ್ಯ
ವಾರ್ನರ್​-ಫಿಂಚ್
ರಾಜೇಶ್ ದುಗ್ಗುಮನೆ
| Edited By: |

Updated on: Dec 13, 2020 | 7:30 PM

Share

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್​ ಪಂದ್ಯ ಡಿ.17ರಿಂದ ಆರಂಭಗೊಳ್ಳಲಿದೆ. ಈಗಾಗಲೇ ಟಿ20 ಸರಣಿ ಗೆಲ್ಲುವ ಮೂಲಕ ಟೀಂ ಇಂಡಿಯಾ ವಿಶ್ವಾಸ ಹೆಚ್ಚಿಸಿಕೊಂಡಿದೆ. ಈ ಮಧ್ಯೆ ಆಸ್ಟ್ರೇಲಿಯಾಗೆ ಗಾಯದ ಸಮಸ್ಯೆ ದುಃಸ್ವಪ್ನವಾಗಿ ಕಾಡುತ್ತಿದ್ದು, ಐವರು ಪ್ರಮುಖ ಆಟಗಾರರು ಟೆಸ್ಟ್​​ಗೆ ಅಲಭ್ಯರಾಗುವ ಸಾಧ್ಯತೆ ಇದೆಯಂತೆ.

ಹೌದು, ಆಸ್ಟ್ರೇಲಿಯಾದ ಐವರು ಆಟಗಾರರಿಗೆ ಗಾಯದ ಸಮಸ್ಯೆ ಕಾಡಿದೆ. ಹೀಗಾಗಿ, ಟೆಸ್ಟ್​ ಪಂದ್ಯ ಆಸ್ಟ್ರೇಲಿಯಾ ಪಾಲಿಗೆ ಕಷ್ಟವಾಗಬಹುದು. ಹಾಗಾದರೆ ಗಾಯಗೊಂಡ ಆಟಗಾರರು ಯಾರು? ಅವರು ಚೇತರಿಸಿಕೊಳ್ಳೋದು ಯಾವಾಗ ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

ಡೇವಿಡ್​ ವಾರ್ನರ್ ​ ಭಾರತದ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಡೇವಿಡ್​ ವಾರ್ನರ್ ಗಾಯಗೊಂಡಿದ್ದರು. ಹೀಗಾಗಿ, ಆಸ್ಟ್ರೇಲಿಯಾದ ಅಡಿಲೇಡ್​ನಲ್ಲಿ ನಡೆಯುವ ಮೊದಲ ಟೆಸ್ಟ್​ಗೆ ವಾರ್ನರ್​ ಅಲಭ್ಯರಾಗಲಿದ್ದಾರೆ. ನಾನು ಚೇತರಿಕೆ ಕಾಣುತ್ತಿದ್ದೇನೆ. ಶೀಘ್ರವೇ ಗುಣಮುಖನಾಗುವ ವಿಶ್ವಾಸವಿದೆ ಎಂದಿದ್ದಾರೆ ವಾರ್ನರ್​. ಅವರು ಬಾಕ್ಸಿಂಗ್​ ಡೇ ಟೆಸ್ಟ್​​ಗೆ ಮರಳೋ ಸಾಧ್ಯತೆ ಇದೆ.

ವಿಲ್ ಪುಕೊವಿಸ್ಕಿ ವಿಲ್​ ಪುಕೊವಿಸ್ಕಿ ಅಡಿಲೇಡ್​ ಟೆಸ್ಟ್​​ ಮೂಲಕ ಪಾದಾರ್ಪಣೆ ಮಾಡುವವರಿದ್ದರು. ಆದರೆ, ಭಾರತದ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ವಿಲ್ ಗಾಯಗೊಂಡಿದ್ದಾರೆ. ಹೀಗಾಗಿ, ಅವರು ಮ್ಯಾಚ್​ಗೆ ಅಲಭ್ಯರಾಗಿದ್ದಾರೆ.

ಕ್ಯಾಮರೂನ್ ಗ್ರೀನ್ ಅಭ್ಯಾಸ ಪಂದ್ಯದಲ್ಲಿ ಜಸ್​​ಪ್ರೀತ್​ ಬೂಮ್ರಾ​ ಬ್ಯಾಂಟಿಂಗ್​ ಮಾಡುವಾಗ ಹೊಡೆದ ಬಾಲ್​ ಕ್ಯಾಮರೂನ್​ ಗ್ರೀನ್ ಮುಖಕ್ಕೆ ತಾಗಿತ್ತು. ಈ ವೇಳೆ ಅವರು ಗಾಯಗೊಂಡಿದ್ದರು. ಕ್ಯಾಮರೂನ್​ ಗ್ರೀನ್ ಆಸ್ಟ್ರೇಲಿಯಾ ಪರ ಆಲ್​ರೌಂಡರ್​ ಆಗಿ ಕಣಕ್ಕೆ ಇಳಿಯುವವರಿದ್ದರು. ಸದ್ಯ, ವೈದ್ಯಕೀಯ ಸಿಬ್ಬಂದಿ ಇವರನ್ನು ಪರೀಕ್ಷೆ ಮಾಡುತ್ತಿದ್ದಾರೆ. ಇವರು ಕೂಡ ಮೊದಲ ಟೆಸ್ಟ್​​ಗೆ ಲಭ್ಯರಾಗುವುದು ಅನುಮಾನವಿದೆ.

ಸೀನ್ ಅಬಾಟ್ ಭಾರತದ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಸೀನ್​ ಅಬಾಟ್​ ಗಾಯಗೊಂಡಿದ್ದಾರೆ. ಹೀಗಾಗಿ, ಇವರು ಮೊದಲ ಟೆಸ್ಟ್​​ಗೆ ಲಭ್ಯರಿದ್ದಾರೋ ಅಥವಾ ಇಲ್ಲವೋ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಒಂದೊಮ್ಮೆ ಇವರ ಅಲಭ್ಯತೆ ಕಾಡಿದರೆ ಆಸ್ಟ್ರೇಲಿಯಾಗೆ ಕೊಂಚ ನಷ್ಟ ಉಂಟಾಗಲಿದೆ.

ಹ್ಯಾರಿ ಕಾನ್ವೇ ಆಸ್ಟ್ರೇಲಿಯಾದ ಫಾಸ್ಟ್​ ಬೌಲರ್ ಹ್ಯಾರಿ ಕಾನ್ವೇ ಭಾರತದ ವಿರುದ್ಧ ಅಭ್ಯಾಸ ಪಂದ್ಯದಲ್ಲಿ ಗಾಯಗೊಂಡಿದ್ದಾರೆ. ಮೊಹಮದ್ ಸಿರಾಜ್​ ಎಸೆದ ಬಾಲ್​ ಹೆಲ್ಮೆಟ್​ಗೆ ತಾಗಿ ಅವರು ಗಾಯಗೊಂಡಿದ್ದರು.

ಫಿಟ್​​ ಆದರೂ ಫೈನಲ್​ ಆಗಿಲ್ಲ ರೋಹಿತ್​ ಎಂಟ್ರಿ: ಮತ್ತೊಮ್ಮೆ ಪರೀಕ್ಷೆಗೆ ಒಳಗಾಗಲಿದ್ದಾರೆ ಹಿಟ್​ ಮ್ಯಾನ್

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ