AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Cricket 2020 | ಬಾಕ್ಸಿಂಗ್​ ಡೇ ಟೆಸ್ಟ್​; ಭಾರತದ ಮಾರಕ ದಾಳಿಗೆ ಪೆವಿಲಿಯನ್​ ಪರೇಡ್​ ನಡೆಸುತ್ತಿರುವ ಆಸಿಸ್​ ದಾಂಡಿಗರು

70 ಓವರ್​ಗಳನ್ನ ಎಸೆದಿರುವ ಭಾರತೀಯ ಬೌಲರ್​ಗಳು, ಆಸ್ಟ್ರೇಲಿಯಾದ ಪ್ರಮುಖ 8 ವಿಕೆಟ್​ಗಳನ್ನ ತಮ್ಮ ಜೇಬಿಗೆ ಇಳಿಸಿಕೊಂಡಿದ್ದಾರೆ. ಅದರಲ್ಲಿ ಯಾರ್ಕರ್​ ಕಿಂಗ್​ ಬುಮ್ರಾ ಹಾಗೂ ಕೆರಮ್​ ಸ್ಪಿನ್ನರ್​ ಅಶ್ವಿನ್​ ತಲಾ 3 ವಿಕೆಟ್​ ಪಡೆದು ಮೈದಾನದಲ್ಲಿ ಮಿಂಚು ಹರಿಸಿದ್ದಾರೆ.

India vs Australia Test Cricket 2020 | ಬಾಕ್ಸಿಂಗ್​ ಡೇ ಟೆಸ್ಟ್​; ಭಾರತದ ಮಾರಕ ದಾಳಿಗೆ ಪೆವಿಲಿಯನ್​ ಪರೇಡ್​ ನಡೆಸುತ್ತಿರುವ ಆಸಿಸ್​ ದಾಂಡಿಗರು
ವಿಕೆಟ್​ ಪಡೆದ ಸಂಭ್ರಮದಲ್ಲಿ ಟೀಂ ಇಂಡಿಯಾ ಆಟಗಾರರು
ಪೃಥ್ವಿಶಂಕರ
|

Updated on:Dec 26, 2020 | 11:37 AM

Share

ಮೆಲ್ಬೋರ್ನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2ನೇ ಟೆಸ್ಟ್​ ಪಂದ್ಯ ಮೆಲ್ಬೋರ್ನ್‌ ಅಂಗಳದಲ್ಲಿ ನಡೆಯುತ್ತಿದ್ದು, ಇತ್ತೀಚಿನ ವರದಿಯ ಪ್ರಕಾರ ಆಸ್ಟ್ರೇಲಿಯಾ ತಂಡ ಭಾರತದ ಮಾರಕ ದಾಳಿಯಿಂದಾಗಿ ಕೇವಲ 177 ರನ್​ಗಳಿಗೆ ಪ್ರಮುಖ 8 ವಿಕೆಟ್​ಗಳನ್ನ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

ಕಳೆದ ಪಂದ್ಯದಲ್ಲಿನ ಸೋಲನ್ನ ಬದಿಗೊತ್ತಿ ತನ್ನ ಆರ್ಭಟ ಮುಂದುವರೆಸಿರುವ ಟೀಂ ಇಂಡಿಯಾ ಆಸ್ಟ್ರೇಲಿಯಾದೆದುರು ತಮ್ಮ ಚಾಂಪಿಯನ್ ಆಟವನ್ನ ಪ್ರದರ್ಶಿಸುತ್ತಿದೆ. ಭಾರತೀಯ ವೇಗಿಗಳ ದಾಳಿಗೆ ಸಿಲುಕಿರುವ ಆಸಿಸ್​ ದಾಂಡಿಗರು ತರಗೆಲೆಗಳಂತೆ ತಮ್ಮ ವಿಕೆಟ್​ ಒಪ್ಪಿಸಿ ಪೆವಿಲಿಯನ್​ ಪರೆಡ್​ ನಡೆಸುತ್ತಿದ್ದಾರೆ. ಭಾರತೀಯ ಬೌಲರ್​ಗಳ ಮಾರಕ ದಾಳಿಗೆ ಬೆದರಿದ ಆಸಿಸ್​ ಬ್ಯಾಟ್ಸ್​ಮನ್​ಗಳು ಯಾವುದೇ ರೀತಿಯ ಪ್ರತಿರೋಧ ತೋರಲು ಸಾಧ್ಯವಾಗುತ್ತಿಲ್ಲ.

ಈಗಿನ ಮಾಹಿತಿಯ ಪ್ರಕಾರ 70 ಓವರ್​ಗಳನ್ನ ಎಸೆದಿರುವ ಭಾರತೀಯ ಬೌಲರ್​ಗಳು, ಆಸ್ಟ್ರೇಲಿಯಾದ ಪ್ರಮುಖ 8 ವಿಕೆಟ್​ಗಳನ್ನ ತಮ್ಮ ಜೇಬಿಗೆ ಇಳಿಸಿಕೊಂಡಿದ್ದಾರೆ. ಅದರಲ್ಲಿ ಯಾರ್ಕರ್​ ಕಿಂಗ್​ ಬುಮ್ರಾ ಹಾಗೂ ಕೆರಮ್​ ಸ್ಪಿನ್ನರ್​ ಅಶ್ವಿನ್​ ತಲಾ 3 ವಿಕೆಟ್​ ಪಡೆದು ಮೈದಾನದಲ್ಲಿ ಮಿಂಚು ಹರಿಸಿದ್ದಾರೆ. ಇನ್ನ ಪಾದಾರ್ಪಣೆಯ ಪಂದ್ಯದಲ್ಲಿಯೇ ಭರವಸೆ ಮೂಡಿಸಿರುವ ವೇಗಿ ಸಿರಾಜ್​ 2 ವಿಕೆಟ್​ ತೆಗೆಯುವುದರ ಮೂಲಕ ತಂಡಕ್ಕೆ ನೆರವಾಗಿದ್ದಾರೆ.

Published On - 11:35 am, Sat, 26 December 20

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್