AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Cricket 2020 | ಬಾಕ್ಸಿಂಗ್​ ಡೇ ಟೆಸ್ಟ್​; ಭಾರತದ ಮಾರಕ ದಾಳಿಗೆ ಪೆವಿಲಿಯನ್​ ಪರೇಡ್​ ನಡೆಸುತ್ತಿರುವ ಆಸಿಸ್​ ದಾಂಡಿಗರು

70 ಓವರ್​ಗಳನ್ನ ಎಸೆದಿರುವ ಭಾರತೀಯ ಬೌಲರ್​ಗಳು, ಆಸ್ಟ್ರೇಲಿಯಾದ ಪ್ರಮುಖ 8 ವಿಕೆಟ್​ಗಳನ್ನ ತಮ್ಮ ಜೇಬಿಗೆ ಇಳಿಸಿಕೊಂಡಿದ್ದಾರೆ. ಅದರಲ್ಲಿ ಯಾರ್ಕರ್​ ಕಿಂಗ್​ ಬುಮ್ರಾ ಹಾಗೂ ಕೆರಮ್​ ಸ್ಪಿನ್ನರ್​ ಅಶ್ವಿನ್​ ತಲಾ 3 ವಿಕೆಟ್​ ಪಡೆದು ಮೈದಾನದಲ್ಲಿ ಮಿಂಚು ಹರಿಸಿದ್ದಾರೆ.

India vs Australia Test Cricket 2020 | ಬಾಕ್ಸಿಂಗ್​ ಡೇ ಟೆಸ್ಟ್​; ಭಾರತದ ಮಾರಕ ದಾಳಿಗೆ ಪೆವಿಲಿಯನ್​ ಪರೇಡ್​ ನಡೆಸುತ್ತಿರುವ ಆಸಿಸ್​ ದಾಂಡಿಗರು
ವಿಕೆಟ್​ ಪಡೆದ ಸಂಭ್ರಮದಲ್ಲಿ ಟೀಂ ಇಂಡಿಯಾ ಆಟಗಾರರು
ಪೃಥ್ವಿಶಂಕರ
|

Updated on:Dec 26, 2020 | 11:37 AM

Share

ಮೆಲ್ಬೋರ್ನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2ನೇ ಟೆಸ್ಟ್​ ಪಂದ್ಯ ಮೆಲ್ಬೋರ್ನ್‌ ಅಂಗಳದಲ್ಲಿ ನಡೆಯುತ್ತಿದ್ದು, ಇತ್ತೀಚಿನ ವರದಿಯ ಪ್ರಕಾರ ಆಸ್ಟ್ರೇಲಿಯಾ ತಂಡ ಭಾರತದ ಮಾರಕ ದಾಳಿಯಿಂದಾಗಿ ಕೇವಲ 177 ರನ್​ಗಳಿಗೆ ಪ್ರಮುಖ 8 ವಿಕೆಟ್​ಗಳನ್ನ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

ಕಳೆದ ಪಂದ್ಯದಲ್ಲಿನ ಸೋಲನ್ನ ಬದಿಗೊತ್ತಿ ತನ್ನ ಆರ್ಭಟ ಮುಂದುವರೆಸಿರುವ ಟೀಂ ಇಂಡಿಯಾ ಆಸ್ಟ್ರೇಲಿಯಾದೆದುರು ತಮ್ಮ ಚಾಂಪಿಯನ್ ಆಟವನ್ನ ಪ್ರದರ್ಶಿಸುತ್ತಿದೆ. ಭಾರತೀಯ ವೇಗಿಗಳ ದಾಳಿಗೆ ಸಿಲುಕಿರುವ ಆಸಿಸ್​ ದಾಂಡಿಗರು ತರಗೆಲೆಗಳಂತೆ ತಮ್ಮ ವಿಕೆಟ್​ ಒಪ್ಪಿಸಿ ಪೆವಿಲಿಯನ್​ ಪರೆಡ್​ ನಡೆಸುತ್ತಿದ್ದಾರೆ. ಭಾರತೀಯ ಬೌಲರ್​ಗಳ ಮಾರಕ ದಾಳಿಗೆ ಬೆದರಿದ ಆಸಿಸ್​ ಬ್ಯಾಟ್ಸ್​ಮನ್​ಗಳು ಯಾವುದೇ ರೀತಿಯ ಪ್ರತಿರೋಧ ತೋರಲು ಸಾಧ್ಯವಾಗುತ್ತಿಲ್ಲ.

ಈಗಿನ ಮಾಹಿತಿಯ ಪ್ರಕಾರ 70 ಓವರ್​ಗಳನ್ನ ಎಸೆದಿರುವ ಭಾರತೀಯ ಬೌಲರ್​ಗಳು, ಆಸ್ಟ್ರೇಲಿಯಾದ ಪ್ರಮುಖ 8 ವಿಕೆಟ್​ಗಳನ್ನ ತಮ್ಮ ಜೇಬಿಗೆ ಇಳಿಸಿಕೊಂಡಿದ್ದಾರೆ. ಅದರಲ್ಲಿ ಯಾರ್ಕರ್​ ಕಿಂಗ್​ ಬುಮ್ರಾ ಹಾಗೂ ಕೆರಮ್​ ಸ್ಪಿನ್ನರ್​ ಅಶ್ವಿನ್​ ತಲಾ 3 ವಿಕೆಟ್​ ಪಡೆದು ಮೈದಾನದಲ್ಲಿ ಮಿಂಚು ಹರಿಸಿದ್ದಾರೆ. ಇನ್ನ ಪಾದಾರ್ಪಣೆಯ ಪಂದ್ಯದಲ್ಲಿಯೇ ಭರವಸೆ ಮೂಡಿಸಿರುವ ವೇಗಿ ಸಿರಾಜ್​ 2 ವಿಕೆಟ್​ ತೆಗೆಯುವುದರ ಮೂಲಕ ತಂಡಕ್ಕೆ ನೆರವಾಗಿದ್ದಾರೆ.

Published On - 11:35 am, Sat, 26 December 20

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ