AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕ್ಸಿಂಗ್​ ಡೇ ಟೆಸ್ಟ್​; 2ನೇ ದಿನದಾಟದಲ್ಲಿ ಪ್ರಮುಖ 5 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ಭಾರತಕ್ಕೆ ಆಸರೆಯಾದ ನಾಯಕ ರಹಾನೆ

ನಾಯಕನ ಆಟವಾಡುತ್ತಿರುವ ರಹಾನೆ ತಂಡಕ್ಕೆ ಅಗತ್ಯವಾದ 50 ರನ್ ಗಳಿಸಿ ಇನ್ನೂ ಕ್ರಿಸ್​ನಲ್ಲಿದ್ದಾರೆ. ಕೊಹ್ಲಿಯ ಸ್ಥಾನಕ್ಕೆ ಆಯ್ಕೆಯಾಗಿರುವ ಜಡೇಜಾ ನಾಯಕ ರಹಾನೆಗೆ ಉತ್ತಮ ಸಾಥ್​ ನೀಡಿದರೆ ಆಸಿಸ್​ಗೆ ತಕ್ಕ ಎದುರೇಟು ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.

ಬಾಕ್ಸಿಂಗ್​ ಡೇ ಟೆಸ್ಟ್​; 2ನೇ ದಿನದಾಟದಲ್ಲಿ ಪ್ರಮುಖ 5 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ಭಾರತಕ್ಕೆ ಆಸರೆಯಾದ ನಾಯಕ ರಹಾನೆ
ಪೃಥ್ವಿಶಂಕರ
|

Updated on: Dec 27, 2020 | 9:38 AM

Share

ಮೆಲ್ಬೋರ್ನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಟೆಸ್ಟ್ ಸರಣಿಯ ಎರಡನೇ ಪಂದ್ಯ ಮೆಲ್ಬೋರ್ನ್‌ನಲ್ಲಿ ನಡೆಯುತ್ತಿದೆ. ಎರಡನೇ ದಿನ ಭಾರತ 173 ರನ್ ಗಳಿಸಿ, ಈ ತನಕ 5 ವಿಕೆಟ್ ಕಳೆದುಕೊಂಡಿದೆ.

ಮೊದಲ ದಿನದ ಅಂತ್ಯಕ್ಕೆ 1 ವಿಕೆಟ್​ ಕಳೆದುಕೊಂಡು 36 ರನ್​ ಗಳಿಸಿದ್ದ ಭಾರತ, ಎರಡನೇ ದಿನ ಪ್ರಮುಖ ಐದು ವಿಕೆಟ್​ ಕಳೆದುಕೊಂಡು ಸದ್ಯಕ್ಕೆ 173 ರನ್​ ಗಳಿಸಿದೆ. ಮೊದಲ ಅಂತರರಾಷ್ಟ್ರೀಯ ಪಂದ್ಯವನ್ನಾಡಿದ ಯುವ ಆಟಗಾರ ಶುಬ್ಮನ್ ಗಿಲ್ 45 ರನ್‌ಗಳಿಸಿ ವಿಕೆಟ್ ಒಪ್ಪಿಸಿದರು. ಇದರ ನಂತರ ಚೇತೇಶ್ವರ ಪೂಜಾರ ಕೂಡ 17 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ಮೊದಲ ದಿನದಾಟದ ಮೊದಲ ಓವರ್‌ನಲ್ಲೇ ತಂಡ ಆರಂಭಿಕ ಮಾಯಾಂಕ್ ಅಗರ್‌ವಾಲ್ ಅವರ ವಿಕೆಟ್ ಕಳೆದುಕೊಂಡಿತ್ತು.

ಈ ಮೂರು ವಿಕೆಟ್​ಗಳ ನಂತರ ನಾಯಕ ರಹಾನೆ ಜೊತೆಗೂಡಿದ ಹನುಮ ವಿಹಾರಿ ಬ್ಯಾಟ್​ ಹೆಚ್ಚು ಸದ್ದು ಮಾಡಲಿಲ್ಲ. 21 ರನ್​ ಗಳಿಸಿ ಹನುಮ ವಿಹಾರಿ ತಮ್ಮ ವಿಕೆಟ್​ ಒಪ್ಪಿಸಿದರು. ನಂತರ ಬಂದ ಪಂತ್​ ಸಹ ಹೆಚ್ಚು ಹೊತ್ತು ಆಡಲಿಲ್ಲ 29 ರನ್​ ಗಳಿಸಿ ಪೆವಿಲಿಯನ್​ ಸೇರಿಕೊಂಡಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಉತ್ತಮವಾಗಿ ಆಡುತ್ತಿರುವ ನಾಯಕ ರಹಾನೆ ಜೊತೆ ಸೇರಿರುವ ಜಡೇಜಾ​ ಉತ್ತಮ ಜೊತೆಯಾಟ ಆಡಬೇಕಿದೆ. ಈ ಮೂಲಕ ಎದುರಾಳಿಗಳಿಗೆ ತಕ್ಕ ಪ್ರತ್ಯುತ್ತರ ನೀಡಬೇಕಿದೆ.

ನಾಯಕನ ಆಟವಾಡುತ್ತಿರುವ ರಹಾನೆ ತಂಡಕ್ಕೆ ಅಗತ್ಯವಾದ 50 ರನ್ ಗಳಿಸಿ ಇನ್ನೂ ಕ್ರಿಸ್​ನಲ್ಲಿದ್ದಾರೆ. ಕೊಹ್ಲಿಯ ಸ್ಥಾನಕ್ಕೆ ಆಯ್ಕೆಯಾಗಿರುವ ಜಡೇಜಾ ನಾಯಕ ರಹಾನೆಗೆ ಉತ್ತಮ ಸಾಥ್​ ನೀಡಿದರೆ ಆಸಿಸ್​ಗೆ ತಕ್ಕ ಎದುರೇಟು ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.

ಬಾಕ್ಸಿಂಗ್​ ಡೇ ಟೆಸ್ಟ್​; ಮೊದಲ ದಿನದ ಗೌರವಕ್ಕೆ ಪಾತ್ರರಾದ ಟೀಂ ಇಂಡಿಯಾ ವೇಗಿಗಳು.. ಇನ್ನಿಂಗ್ಸ್‌ ಆರಂಭಿಸಿದ ಭಾರತಕ್ಕೆ ಆರಂಭಿಕ ಆಘಾತ

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!