AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕ್ಸಿಂಗ್​ ಡೇ ಟೆಸ್ಟ್​; 2ನೇ ದಿನದಾಟದಲ್ಲಿ ಪ್ರಮುಖ 5 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ಭಾರತಕ್ಕೆ ಆಸರೆಯಾದ ನಾಯಕ ರಹಾನೆ

ನಾಯಕನ ಆಟವಾಡುತ್ತಿರುವ ರಹಾನೆ ತಂಡಕ್ಕೆ ಅಗತ್ಯವಾದ 50 ರನ್ ಗಳಿಸಿ ಇನ್ನೂ ಕ್ರಿಸ್​ನಲ್ಲಿದ್ದಾರೆ. ಕೊಹ್ಲಿಯ ಸ್ಥಾನಕ್ಕೆ ಆಯ್ಕೆಯಾಗಿರುವ ಜಡೇಜಾ ನಾಯಕ ರಹಾನೆಗೆ ಉತ್ತಮ ಸಾಥ್​ ನೀಡಿದರೆ ಆಸಿಸ್​ಗೆ ತಕ್ಕ ಎದುರೇಟು ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.

ಬಾಕ್ಸಿಂಗ್​ ಡೇ ಟೆಸ್ಟ್​; 2ನೇ ದಿನದಾಟದಲ್ಲಿ ಪ್ರಮುಖ 5 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ಭಾರತಕ್ಕೆ ಆಸರೆಯಾದ ನಾಯಕ ರಹಾನೆ
ಪೃಥ್ವಿಶಂಕರ
|

Updated on: Dec 27, 2020 | 9:38 AM

Share

ಮೆಲ್ಬೋರ್ನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಟೆಸ್ಟ್ ಸರಣಿಯ ಎರಡನೇ ಪಂದ್ಯ ಮೆಲ್ಬೋರ್ನ್‌ನಲ್ಲಿ ನಡೆಯುತ್ತಿದೆ. ಎರಡನೇ ದಿನ ಭಾರತ 173 ರನ್ ಗಳಿಸಿ, ಈ ತನಕ 5 ವಿಕೆಟ್ ಕಳೆದುಕೊಂಡಿದೆ.

ಮೊದಲ ದಿನದ ಅಂತ್ಯಕ್ಕೆ 1 ವಿಕೆಟ್​ ಕಳೆದುಕೊಂಡು 36 ರನ್​ ಗಳಿಸಿದ್ದ ಭಾರತ, ಎರಡನೇ ದಿನ ಪ್ರಮುಖ ಐದು ವಿಕೆಟ್​ ಕಳೆದುಕೊಂಡು ಸದ್ಯಕ್ಕೆ 173 ರನ್​ ಗಳಿಸಿದೆ. ಮೊದಲ ಅಂತರರಾಷ್ಟ್ರೀಯ ಪಂದ್ಯವನ್ನಾಡಿದ ಯುವ ಆಟಗಾರ ಶುಬ್ಮನ್ ಗಿಲ್ 45 ರನ್‌ಗಳಿಸಿ ವಿಕೆಟ್ ಒಪ್ಪಿಸಿದರು. ಇದರ ನಂತರ ಚೇತೇಶ್ವರ ಪೂಜಾರ ಕೂಡ 17 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ಮೊದಲ ದಿನದಾಟದ ಮೊದಲ ಓವರ್‌ನಲ್ಲೇ ತಂಡ ಆರಂಭಿಕ ಮಾಯಾಂಕ್ ಅಗರ್‌ವಾಲ್ ಅವರ ವಿಕೆಟ್ ಕಳೆದುಕೊಂಡಿತ್ತು.

ಈ ಮೂರು ವಿಕೆಟ್​ಗಳ ನಂತರ ನಾಯಕ ರಹಾನೆ ಜೊತೆಗೂಡಿದ ಹನುಮ ವಿಹಾರಿ ಬ್ಯಾಟ್​ ಹೆಚ್ಚು ಸದ್ದು ಮಾಡಲಿಲ್ಲ. 21 ರನ್​ ಗಳಿಸಿ ಹನುಮ ವಿಹಾರಿ ತಮ್ಮ ವಿಕೆಟ್​ ಒಪ್ಪಿಸಿದರು. ನಂತರ ಬಂದ ಪಂತ್​ ಸಹ ಹೆಚ್ಚು ಹೊತ್ತು ಆಡಲಿಲ್ಲ 29 ರನ್​ ಗಳಿಸಿ ಪೆವಿಲಿಯನ್​ ಸೇರಿಕೊಂಡಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಉತ್ತಮವಾಗಿ ಆಡುತ್ತಿರುವ ನಾಯಕ ರಹಾನೆ ಜೊತೆ ಸೇರಿರುವ ಜಡೇಜಾ​ ಉತ್ತಮ ಜೊತೆಯಾಟ ಆಡಬೇಕಿದೆ. ಈ ಮೂಲಕ ಎದುರಾಳಿಗಳಿಗೆ ತಕ್ಕ ಪ್ರತ್ಯುತ್ತರ ನೀಡಬೇಕಿದೆ.

ನಾಯಕನ ಆಟವಾಡುತ್ತಿರುವ ರಹಾನೆ ತಂಡಕ್ಕೆ ಅಗತ್ಯವಾದ 50 ರನ್ ಗಳಿಸಿ ಇನ್ನೂ ಕ್ರಿಸ್​ನಲ್ಲಿದ್ದಾರೆ. ಕೊಹ್ಲಿಯ ಸ್ಥಾನಕ್ಕೆ ಆಯ್ಕೆಯಾಗಿರುವ ಜಡೇಜಾ ನಾಯಕ ರಹಾನೆಗೆ ಉತ್ತಮ ಸಾಥ್​ ನೀಡಿದರೆ ಆಸಿಸ್​ಗೆ ತಕ್ಕ ಎದುರೇಟು ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.

ಬಾಕ್ಸಿಂಗ್​ ಡೇ ಟೆಸ್ಟ್​; ಮೊದಲ ದಿನದ ಗೌರವಕ್ಕೆ ಪಾತ್ರರಾದ ಟೀಂ ಇಂಡಿಯಾ ವೇಗಿಗಳು.. ಇನ್ನಿಂಗ್ಸ್‌ ಆರಂಭಿಸಿದ ಭಾರತಕ್ಕೆ ಆರಂಭಿಕ ಆಘಾತ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ