AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Cricket 2020 | ಬಾಕ್ಸಿಂಗ್ ಡೇ ಟೆಸ್ಟ್‌; ನಾಲ್ಕು ಬದಲಾವಣೆಗಳೊಂದಿಗೆ ಕಣಕ್ಕಿಳಿಯಲ್ಲಿದೆ ಭಾರತ

ನಾಯಕ ವಿರಾಟ್ ಕೊಹ್ಲಿ ಮತ್ತು ವೇಗಿ ಮೊಹಮ್ಮದ್ ಶಮಿ ಸರಣಿಯಿಂದ ಹೊರಗುಳಿದಿದ್ದು, ತಂಡವನ್ನು ಗೆಲುವಿನ ಟ್ರ್ಯಾಕ್​ಗೆ ಮರಳಿಸಲು ಟೀಂ ಇಂಡಿಯಾ ಪ್ರಮುಖ ನಾಲ್ಕು ಬದಲಾವಣೆಗಳೊಂದಿಗೆ ಕಣಕ್ಕಿಳಿಯುತ್ತಿದೆ.

India vs Australia Test Cricket 2020 | ಬಾಕ್ಸಿಂಗ್ ಡೇ ಟೆಸ್ಟ್‌; ನಾಲ್ಕು ಬದಲಾವಣೆಗಳೊಂದಿಗೆ ಕಣಕ್ಕಿಳಿಯಲ್ಲಿದೆ ಭಾರತ
ಕೋಚ್​ ರವಿಶಾಸ್ತ್ರಿಯೊಂದಿಗೆ ನಾಯಕ ಅಜಿಂಕ್ಯಾ ರಹಾನೆ
ಪೃಥ್ವಿಶಂಕರ
|

Updated on:Dec 25, 2020 | 12:33 PM

Share

ಮೆಲ್ಬೋರ್ನ್‌: ಅಡಿಲೇಡ್‌ನ ಹೀನಾಯ ಸೋಲಿನ ನಂತರ ರಹಾನೆ ನೇತೃತ್ವದ ಭಾರತೀಯ ತಂಡ ಮೆಲ್ಬೋರ್ನ್‌ನಲ್ಲಿ ಡಿಸೆಂಬರ್ 26 ರಿಂದ ಪ್ರಾರಂಭವಾಗುವ ಬಾಕ್ಸಿಂಗ್ ಡೇ ಟೆಸ್ಟ್‌ನತ್ತ ಗಮನ ಹರಿಸುತ್ತಿದೆ. ನಾಯಕ ವಿರಾಟ್ ಕೊಹ್ಲಿ ಮತ್ತು ವೇಗಿ ಮೊಹಮ್ಮದ್ ಶಮಿ ಸರಣಿಯಿಂದ ಹೊರಗುಳಿದಿದ್ದು, ತಂಡವನ್ನು ಗೆಲುವಿನ ಟ್ರ್ಯಾಕ್​ಗೆ ಮರಳಿಸಲು ಟೀಂ ಇಂಡಿಯಾ ನಾಲ್ಕು ಪ್ರಮುಖ ಬದಲಾವಣೆಗಳನ್ನು ಮಾಡಿಕೊಂಡಿದೆ.

ಈಗಾಗಲೇ ಪಿತೃತ್ವದ ರಜೆ ತೆಗೆದುಕೊಂಡಿರುವ ನಾಯಕ ಕೊಹ್ಲಿ ಸರಣಿಯಿಂದ ಹೊರಗುಳಿದಿದ್ದು, ಕೊಹ್ಲಿ ಸ್ಥಾನಕ್ಕೆ ಆಲ್​ರೌಂಡರ್​ ಜಡೇಜಾ ಆಯ್ಕೆಯಾಗಿದ್ದಾರೆ. ಹಾಗೆಯೇ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ವೇಗದ ಬೌಲರ್​ ಶಮಿ ಸ್ಥಾನಕ್ಕೆ ಮಹಮದ್ ಸಿರಾಜ್​ ಆಯ್ಕೆಯಾಗಿದ್ದಾರೆ. ಇನ್ನೂ ಕಳಪೆ ಫಾರ್ಮ್​ನಲ್ಲಿರುವ ಓಪನರ್​ ಪೃಥ್ವಿ ಶಾ ಸ್ಥಾನದಲ್ಲಿ ಗಿಲ್​ ಕಾಣಿಸಿಕೊಳ್ಳಲಿದ್ದು, ಇದು ಗಿಲ್ ಅವರ ಮೊದಲ ಅಂತರರಾಷ್ಟೀಯ ಟೆಸ್ಟ್​ ಪಂದ್ಯವಾಗಿದೆ. ವಿಕೆಟ್​ ಕೀಪರ್ ವೃದ್ಧಿಮಾನ್​ ಸಹಾ ಬದಲಿಗೆ ರಿಶಭ್​ ಪಂತ್​ ಮೈದಾನಕ್ಕಿಳಿಯಲ್ಲಿದ್ದಾರೆ.

ಈ ಕಾರಣದಿಂದಾಗಿ ರಾಹುಲ್‌ಗೆ ಅವಕಾಶ ಸಿಗಲಿಲ್ಲ ಈ ಎಲ್ಲದರ ಮಧ್ಯೆ ವಿರಾಟ್ ಕೊಹ್ಲಿ ಬದಲಿಗೆ ಕೆ.ಎಲ್. ರಾಹುಲ್ ಅವರಿಗೆ ಅವಕಾಶ ಸಿಗುತ್ತದೆ ಎಂಬ ಭರವಸೆ ಇತ್ತು. ಆದರೆ ಆ ಭರವಸೆ ಹುಸಿಯಾಗಿದೆ. ಇದಕ್ಕೆ ಕಾರಣವೆಂದರೆ ಆಡಳಿತ ಮಂಡಳಿ ಹನುಮಾ ವಿಹಾರಿಯನ್ನು 2ನೇ ಟೆಸ್ಟ್​ನಲ್ಲಿ ಆಡಿಸಲು ತೀರ್ಮಾನಿಸಿದ್ದು, ಮೆಲ್ಬೋರ್ನ್ ಟೆಸ್ಟ್ನಲ್ಲಿ ಹನುಮಾ ವಿಹಾರಿ 4 ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಬಹುದು ಎಂದು ವರದಿಯಾಗಿದೆ.

Published On - 12:11 pm, Fri, 25 December 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​