AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Cricket 2020 | ಬಾಕ್ಸಿಂಗ್ ಡೇ ಟೆಸ್ಟ್‌; ನಾಲ್ಕು ಬದಲಾವಣೆಗಳೊಂದಿಗೆ ಕಣಕ್ಕಿಳಿಯಲ್ಲಿದೆ ಭಾರತ

ನಾಯಕ ವಿರಾಟ್ ಕೊಹ್ಲಿ ಮತ್ತು ವೇಗಿ ಮೊಹಮ್ಮದ್ ಶಮಿ ಸರಣಿಯಿಂದ ಹೊರಗುಳಿದಿದ್ದು, ತಂಡವನ್ನು ಗೆಲುವಿನ ಟ್ರ್ಯಾಕ್​ಗೆ ಮರಳಿಸಲು ಟೀಂ ಇಂಡಿಯಾ ಪ್ರಮುಖ ನಾಲ್ಕು ಬದಲಾವಣೆಗಳೊಂದಿಗೆ ಕಣಕ್ಕಿಳಿಯುತ್ತಿದೆ.

India vs Australia Test Cricket 2020 | ಬಾಕ್ಸಿಂಗ್ ಡೇ ಟೆಸ್ಟ್‌; ನಾಲ್ಕು ಬದಲಾವಣೆಗಳೊಂದಿಗೆ ಕಣಕ್ಕಿಳಿಯಲ್ಲಿದೆ ಭಾರತ
ಕೋಚ್​ ರವಿಶಾಸ್ತ್ರಿಯೊಂದಿಗೆ ನಾಯಕ ಅಜಿಂಕ್ಯಾ ರಹಾನೆ
ಪೃಥ್ವಿಶಂಕರ
|

Updated on:Dec 25, 2020 | 12:33 PM

Share

ಮೆಲ್ಬೋರ್ನ್‌: ಅಡಿಲೇಡ್‌ನ ಹೀನಾಯ ಸೋಲಿನ ನಂತರ ರಹಾನೆ ನೇತೃತ್ವದ ಭಾರತೀಯ ತಂಡ ಮೆಲ್ಬೋರ್ನ್‌ನಲ್ಲಿ ಡಿಸೆಂಬರ್ 26 ರಿಂದ ಪ್ರಾರಂಭವಾಗುವ ಬಾಕ್ಸಿಂಗ್ ಡೇ ಟೆಸ್ಟ್‌ನತ್ತ ಗಮನ ಹರಿಸುತ್ತಿದೆ. ನಾಯಕ ವಿರಾಟ್ ಕೊಹ್ಲಿ ಮತ್ತು ವೇಗಿ ಮೊಹಮ್ಮದ್ ಶಮಿ ಸರಣಿಯಿಂದ ಹೊರಗುಳಿದಿದ್ದು, ತಂಡವನ್ನು ಗೆಲುವಿನ ಟ್ರ್ಯಾಕ್​ಗೆ ಮರಳಿಸಲು ಟೀಂ ಇಂಡಿಯಾ ನಾಲ್ಕು ಪ್ರಮುಖ ಬದಲಾವಣೆಗಳನ್ನು ಮಾಡಿಕೊಂಡಿದೆ.

ಈಗಾಗಲೇ ಪಿತೃತ್ವದ ರಜೆ ತೆಗೆದುಕೊಂಡಿರುವ ನಾಯಕ ಕೊಹ್ಲಿ ಸರಣಿಯಿಂದ ಹೊರಗುಳಿದಿದ್ದು, ಕೊಹ್ಲಿ ಸ್ಥಾನಕ್ಕೆ ಆಲ್​ರೌಂಡರ್​ ಜಡೇಜಾ ಆಯ್ಕೆಯಾಗಿದ್ದಾರೆ. ಹಾಗೆಯೇ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ವೇಗದ ಬೌಲರ್​ ಶಮಿ ಸ್ಥಾನಕ್ಕೆ ಮಹಮದ್ ಸಿರಾಜ್​ ಆಯ್ಕೆಯಾಗಿದ್ದಾರೆ. ಇನ್ನೂ ಕಳಪೆ ಫಾರ್ಮ್​ನಲ್ಲಿರುವ ಓಪನರ್​ ಪೃಥ್ವಿ ಶಾ ಸ್ಥಾನದಲ್ಲಿ ಗಿಲ್​ ಕಾಣಿಸಿಕೊಳ್ಳಲಿದ್ದು, ಇದು ಗಿಲ್ ಅವರ ಮೊದಲ ಅಂತರರಾಷ್ಟೀಯ ಟೆಸ್ಟ್​ ಪಂದ್ಯವಾಗಿದೆ. ವಿಕೆಟ್​ ಕೀಪರ್ ವೃದ್ಧಿಮಾನ್​ ಸಹಾ ಬದಲಿಗೆ ರಿಶಭ್​ ಪಂತ್​ ಮೈದಾನಕ್ಕಿಳಿಯಲ್ಲಿದ್ದಾರೆ.

ಈ ಕಾರಣದಿಂದಾಗಿ ರಾಹುಲ್‌ಗೆ ಅವಕಾಶ ಸಿಗಲಿಲ್ಲ ಈ ಎಲ್ಲದರ ಮಧ್ಯೆ ವಿರಾಟ್ ಕೊಹ್ಲಿ ಬದಲಿಗೆ ಕೆ.ಎಲ್. ರಾಹುಲ್ ಅವರಿಗೆ ಅವಕಾಶ ಸಿಗುತ್ತದೆ ಎಂಬ ಭರವಸೆ ಇತ್ತು. ಆದರೆ ಆ ಭರವಸೆ ಹುಸಿಯಾಗಿದೆ. ಇದಕ್ಕೆ ಕಾರಣವೆಂದರೆ ಆಡಳಿತ ಮಂಡಳಿ ಹನುಮಾ ವಿಹಾರಿಯನ್ನು 2ನೇ ಟೆಸ್ಟ್​ನಲ್ಲಿ ಆಡಿಸಲು ತೀರ್ಮಾನಿಸಿದ್ದು, ಮೆಲ್ಬೋರ್ನ್ ಟೆಸ್ಟ್ನಲ್ಲಿ ಹನುಮಾ ವಿಹಾರಿ 4 ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಬಹುದು ಎಂದು ವರದಿಯಾಗಿದೆ.

Published On - 12:11 pm, Fri, 25 December 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ