AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Cricket 2020 | ಬಾಕ್ಸಿಂಗ್ ಡೇ ಟೆಸ್ಟ್‌; ನಾಲ್ಕು ಬದಲಾವಣೆಗಳೊಂದಿಗೆ ಕಣಕ್ಕಿಳಿಯಲ್ಲಿದೆ ಭಾರತ

ನಾಯಕ ವಿರಾಟ್ ಕೊಹ್ಲಿ ಮತ್ತು ವೇಗಿ ಮೊಹಮ್ಮದ್ ಶಮಿ ಸರಣಿಯಿಂದ ಹೊರಗುಳಿದಿದ್ದು, ತಂಡವನ್ನು ಗೆಲುವಿನ ಟ್ರ್ಯಾಕ್​ಗೆ ಮರಳಿಸಲು ಟೀಂ ಇಂಡಿಯಾ ಪ್ರಮುಖ ನಾಲ್ಕು ಬದಲಾವಣೆಗಳೊಂದಿಗೆ ಕಣಕ್ಕಿಳಿಯುತ್ತಿದೆ.

India vs Australia Test Cricket 2020 | ಬಾಕ್ಸಿಂಗ್ ಡೇ ಟೆಸ್ಟ್‌; ನಾಲ್ಕು ಬದಲಾವಣೆಗಳೊಂದಿಗೆ ಕಣಕ್ಕಿಳಿಯಲ್ಲಿದೆ ಭಾರತ
ಕೋಚ್​ ರವಿಶಾಸ್ತ್ರಿಯೊಂದಿಗೆ ನಾಯಕ ಅಜಿಂಕ್ಯಾ ರಹಾನೆ
ಪೃಥ್ವಿಶಂಕರ
|

Updated on:Dec 25, 2020 | 12:33 PM

Share

ಮೆಲ್ಬೋರ್ನ್‌: ಅಡಿಲೇಡ್‌ನ ಹೀನಾಯ ಸೋಲಿನ ನಂತರ ರಹಾನೆ ನೇತೃತ್ವದ ಭಾರತೀಯ ತಂಡ ಮೆಲ್ಬೋರ್ನ್‌ನಲ್ಲಿ ಡಿಸೆಂಬರ್ 26 ರಿಂದ ಪ್ರಾರಂಭವಾಗುವ ಬಾಕ್ಸಿಂಗ್ ಡೇ ಟೆಸ್ಟ್‌ನತ್ತ ಗಮನ ಹರಿಸುತ್ತಿದೆ. ನಾಯಕ ವಿರಾಟ್ ಕೊಹ್ಲಿ ಮತ್ತು ವೇಗಿ ಮೊಹಮ್ಮದ್ ಶಮಿ ಸರಣಿಯಿಂದ ಹೊರಗುಳಿದಿದ್ದು, ತಂಡವನ್ನು ಗೆಲುವಿನ ಟ್ರ್ಯಾಕ್​ಗೆ ಮರಳಿಸಲು ಟೀಂ ಇಂಡಿಯಾ ನಾಲ್ಕು ಪ್ರಮುಖ ಬದಲಾವಣೆಗಳನ್ನು ಮಾಡಿಕೊಂಡಿದೆ.

ಈಗಾಗಲೇ ಪಿತೃತ್ವದ ರಜೆ ತೆಗೆದುಕೊಂಡಿರುವ ನಾಯಕ ಕೊಹ್ಲಿ ಸರಣಿಯಿಂದ ಹೊರಗುಳಿದಿದ್ದು, ಕೊಹ್ಲಿ ಸ್ಥಾನಕ್ಕೆ ಆಲ್​ರೌಂಡರ್​ ಜಡೇಜಾ ಆಯ್ಕೆಯಾಗಿದ್ದಾರೆ. ಹಾಗೆಯೇ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ವೇಗದ ಬೌಲರ್​ ಶಮಿ ಸ್ಥಾನಕ್ಕೆ ಮಹಮದ್ ಸಿರಾಜ್​ ಆಯ್ಕೆಯಾಗಿದ್ದಾರೆ. ಇನ್ನೂ ಕಳಪೆ ಫಾರ್ಮ್​ನಲ್ಲಿರುವ ಓಪನರ್​ ಪೃಥ್ವಿ ಶಾ ಸ್ಥಾನದಲ್ಲಿ ಗಿಲ್​ ಕಾಣಿಸಿಕೊಳ್ಳಲಿದ್ದು, ಇದು ಗಿಲ್ ಅವರ ಮೊದಲ ಅಂತರರಾಷ್ಟೀಯ ಟೆಸ್ಟ್​ ಪಂದ್ಯವಾಗಿದೆ. ವಿಕೆಟ್​ ಕೀಪರ್ ವೃದ್ಧಿಮಾನ್​ ಸಹಾ ಬದಲಿಗೆ ರಿಶಭ್​ ಪಂತ್​ ಮೈದಾನಕ್ಕಿಳಿಯಲ್ಲಿದ್ದಾರೆ.

ಈ ಕಾರಣದಿಂದಾಗಿ ರಾಹುಲ್‌ಗೆ ಅವಕಾಶ ಸಿಗಲಿಲ್ಲ ಈ ಎಲ್ಲದರ ಮಧ್ಯೆ ವಿರಾಟ್ ಕೊಹ್ಲಿ ಬದಲಿಗೆ ಕೆ.ಎಲ್. ರಾಹುಲ್ ಅವರಿಗೆ ಅವಕಾಶ ಸಿಗುತ್ತದೆ ಎಂಬ ಭರವಸೆ ಇತ್ತು. ಆದರೆ ಆ ಭರವಸೆ ಹುಸಿಯಾಗಿದೆ. ಇದಕ್ಕೆ ಕಾರಣವೆಂದರೆ ಆಡಳಿತ ಮಂಡಳಿ ಹನುಮಾ ವಿಹಾರಿಯನ್ನು 2ನೇ ಟೆಸ್ಟ್​ನಲ್ಲಿ ಆಡಿಸಲು ತೀರ್ಮಾನಿಸಿದ್ದು, ಮೆಲ್ಬೋರ್ನ್ ಟೆಸ್ಟ್ನಲ್ಲಿ ಹನುಮಾ ವಿಹಾರಿ 4 ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಬಹುದು ಎಂದು ವರದಿಯಾಗಿದೆ.

Published On - 12:11 pm, Fri, 25 December 20

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ