AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Series 2020: ಭಾರತದ ಬೌಲಿಂಗ್​ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ; ಏಳು ವಿಕೆಟ್​ ಪತನ

ಇಂದು ಬ್ಯಾಟಿಂಗ್ ಆರಂಭಿಸಿದ ಆಸ್ಟ್ರೇಲಿಯಾ ಆರಂಭದಲ್ಲೇ ಆಘಾತ ಅನುಭವಿಸಿತು. ಓಪನರ್​ಗಳಾದ ಮ್ಯಾಥೀವ್​ ವೇಡ್​ ಹಾಗೂ ಜೋ ಬರ್ನ್ಸ್​ ತಲಾ 8 ರನ್​ಗಳನ್ನು ಗಳಿಸಲಷ್ಟೇ ಶಕ್ತವಾದರು. ಇನ್ನು ಪ್ರಮುಖ ಆಟಗಾರ ಎನಿಸಿಕೊಂಡಿರುವ ಸ್ಮಿತ್​ ಕೂಡ ಸಿಂಗಲ್​ ಡಿಜಿಟ್​ಗೆ ಔಟ್​ ಆದರು.

India vs Australia Test Series 2020: ಭಾರತದ ಬೌಲಿಂಗ್​ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ; ಏಳು ವಿಕೆಟ್​ ಪತನ
ವಿರಾಟ್​ ಕೊಹ್ಲಿ
ರಾಜೇಶ್ ದುಗ್ಗುಮನೆ
|

Updated on:Dec 18, 2020 | 3:10 PM

Share

ಅಡಿಲೇಡ್​ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್​ನಲ್ಲಿ ಟಾಸ್​ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಭಾರತ 244 ರನ್​ಗಳಿಗೆ ಆಲ್​ಔಟ್​ ಆಗಿತ್ತು. ಈಗ ಕಣಕ್ಕೆ ಇಳಿದಿರುವ ಆಸ್ಟ್ರೇಲಿಯಾ ತಂಡ ಭಾರತದ ಬೌಲಿಂಗ್​ ದಾಳಿಗೆ ತತ್ತರಿಸಿ ಹೋಗಿದೆ. ಕೇವಲ 115 ರನ್​ಗಳಿಗೆ ಏಳು ವಿಕೆಟ್​ ಪತನವಾಗಿದೆ.

ಮೊದಲು ಟಾಸ್​ ಗೆದ್ದು ಬ್ಯಾಟಿಂಗ್​ಗೆ ಇಳಿದಿದ್ದ ಟೀಂ ಇಂಡಿಯಾ ಆರಂಭದಲ್ಲೇ ಆಘಾತ ಅನುಭವಿಸಿತ್ತು. ಪೃಥ್ವಿ ಶಾ ಡಕೌಟ್​ ಆದರೆ, ಮಯಾಂಕ್​ ಅಗರ್​ವಾಲ್​ 17 ರನ್​ಗೆ ಪತನ ಕಂಡರು. ನಂತರ ಪಂದ್ಯಕಟ್ಟಲು ಆರಂಭಿಸಿದ ಪೂಜಾರ ಹಾಗೂ ನಾಯಕ ವಿರಾಟ್​ ಕೊಹ್ಲಿ ಅದ್ಭುತ ಪ್ರದರ್ಶನ ನೀಡಿದರು. ಅಂತಿಮವಾಗಿ ಭಾರತ 244 ರನ್​ಗಳಿಗೆ ಆಲ್​ಔಟ್​ ಆಯಿತು.

ಇಂದು ಬ್ಯಾಟಿಂಗ್ ಆರಂಭಿಸಿದ ಆಸ್ಟ್ರೇಲಿಯಾ ಆರಂಭದಲ್ಲೇ ಆಘಾತ ಅನುಭವಿಸಿತು. ಓಪನರ್​ಗಳಾದ ಮ್ಯಾಥೀವ್​ ವೇಡ್​ ಹಾಗೂ ಜೋ ಬರ್ನ್ಸ್​ ತಲಾ 8 ರನ್​ಗಳನ್ನು ಗಳಿಸಲಷ್ಟೇ ಶಕ್ತವಾದರು. ಸ್ಟೀವ್​ ಸ್ಮಿತ್​ (1), ಹೆಡ್ (7)​, ಗ್ರೀನ್​ (11)  ಮಾರ್ನಸ್ ಲ್ಯಾಬುಸ್ಚಾಗ್ನೆ (47), ಕುಮ್ಮಿಸ್​(0) ಔಟ್​ ಆದರು. ಟಿಮ್​ ಪೇನ್​  ಸದ್ಯ,  ಸ್ಟಾರ್ಕ್​ ಹಾಗೂ ಟಿಮ್​ ಆಡುತ್ತಿದ್ದಾರೆ. ಭಾರತದ ಪರ ಆರ್​​. ಅಶ್ವಿನ್​ ಮೂರು ವಿಕೆಟ್​ ಕಿತ್ತರೆ, ವೇಗದ ಬೌಲರ್​ ಬೂಮ್ರಾ, ಯಾದವ್​ ತಲಾ 2 ವಿಕೆಟ್​ ಕಿತ್ತಿದ್ದಾರೆ.

ಮಧ್ಯಾಹ್ನದ ಟೀ ಬ್ರೇಕ್​​ ವೇಳೆಗೆ ಆಸ್ಟ್ರೇಲಿಯಾ 115 ರನ್​ಗಳಿಗೆ 7 ವಿಕೆಟ್​ ಕಳೆದುಕೊಂಡು ಆಡುತ್ತಿದೆ. ಇನ್ನು ಉಳಿದಿರುವ ಮೂರು ವಿಕೆಟ್​ ಕೀಳಲು ಭಾರತ ರಣತಂತ್ರ ರೂಪಿಸುತ್ತಿದೆ.

India vs Australia Test Series 2020 | ಪೂಜಾರಾರನ್ನು ‘ಸ್ಟೀವ್’ ಅಂತ ಕರೆದು ಅಸಭ್ಯತೆ ಮೆರೆದ ಶೇನ್ ವಾರ್ನ್

Published On - 3:07 pm, Fri, 18 December 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ