AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Series 2020: ಭಾರತಕ್ಕೆ ಆಸರೆಯಾಗಿದ್ದ ಪೂಜಾರ ಔಟ್​.

ಓಪನರ್​ಗಳಾಗಿ ಪೃಥ್ವಿ ಷಾ ಹಾಗೂ ಮಯಾಂಕ್​ ಅಗರ್​ವಾಲ್​ ಕಣಕ್ಕೆ ಇಳಿದಿದ್ದರು. ಸ್ಟಾರ್ಕ್​ ಬೌಲಿಂಗ್​ನಲ್ಲಿ ಪೃಥ್ವಿ ಷಾ ಯಾವುದೇ ರನ್​ ಗಳಿಸದೆ ಔಟ್​ ಆದರು.

India vs Australia Test Series 2020: ಭಾರತಕ್ಕೆ ಆಸರೆಯಾಗಿದ್ದ ಪೂಜಾರ ಔಟ್​.
ವಿರಾಟ್ ಕೊಹ್ಲಿ ಮೈದಾನದಲ್ಲಿ ಬ್ಯಾಟ್​ ಬೀಸಿದ್ದು ಹೀಗೆ
ರಾಜೇಶ್ ದುಗ್ಗುಮನೆ
|

Updated on:Dec 17, 2020 | 5:11 PM

Share

ಆಸ್ಟ್ರೇಲಿಯಾ-ಭಾರತ ನಡುವಣ ಮೊದಲ ಟೆಸ್ಟ್​ ಅಡಿಲೇಡ್​ನಲ್ಲಿ ಆರಂಭವಾಗಿದೆ. ಟಾಸ್​​ ಗೆದ್ದು ಬ್ಯಾಟಿಂಗ್​ ಆಯ್ಕೆ ಮಾಡಿಕೊಂಡ ಭಾರತಕ್ಕೆ ಆಸ್ಟ್ರೇಲಿಯಾ ಶಾಕ್​ ನೀಡಿತ್ತು. ಆದರೆ, ನಾಯಕ ವಿರಾಟ್​ ಕೊಹ್ಲಿ ಹಾಗೂ ಚೇತೇಶ್ವರ ಪೂಜಾರಾ ತಂಡಕ್ಕೆ ಆಸರೆ ಆದರು.

ಓಪನರ್​ಗಳಾಗಿ ಪೃಥ್ವಿ ಶಾ ಹಾಗೂ ಮಯಾಂಕ್​ ಅಗರ್​ವಾಲ್​ ಕಣಕ್ಕೆ ಇಳಿದಿದ್ದರು. ಸ್ಟಾರ್ಕ್​ ಬೌಲಿಂಗ್​ನಲ್ಲಿ ಪೃಥ್ವಿ ಶಾ ಯಾವುದೇ ರನ್​ ಗಳಿಸದೆ ಔಟ್​ ಆದರು. ನಂತರ ಮಯಾಂಕ್​ ಹಾಗೂ ಚೇತೇಶ್ವರ್​ ಪೂಜಾರ ಪಂದ್ಯ ಕಟ್ಟಲು ಮುಂದಾದರು. ಆಗ ಕುಮ್ಮಿನ್ಸ್​ ಬೌಲಿಂಗ್​ಗೆ ಮಯಾಂಕ್​ ಬೌಲ್ಡ್​ ಆದರು.

ನಂತರ ಪಂದ್ಯ ಪ್ರವೇಶಿಸಿದ ವಿರಾಟ್​, ಚೇತೇಶ್ವರ ಜೊತೆಗೂಡಿ ಪಂದ್ಯ ಕಟ್ಟೋಕೆ ಆರಂಭಿಸಿದರು. ಭಾರತ 100 ರನ್​ ಗಳಿಸುತ್ತಿದ್ದಂತೆ ಚೇತೇಶ್ವರ್​ ಪೂಜಾರ (46) ಕ್ಯಾಚ್​ಗೆ ಔಟ್​ ಆದರು. ವಿರಾಟ್​ 100 ಬಾಲ್​ಗಳಿಗೆ 35 ರನ್ ಬಾರಿಸಿದ್ದಾರೆ. ಸದ್ಯ, ರಹಾನೆ ಕಣಕ್ಕೆ ಇಳಿದಿದ್ದಾರೆ. ಆಸ್ಟ್ರೇಲಿಯಾ ಪರ ಮಿಚೆಲ್​ ಸ್ಟಾರ್ಕ್​ ಒಂದು ಹಾಗೂ ಪ್ಯಾಟ್​ ಕುಮ್ಮಿಸ್​ ಒಂದು ವಿಕೆಟ್​ ಕಿತ್ತಿದ್ದಾರೆ.

ವಿರಾಟ್​ ಕೊಹ್ಲಿ ಮೊದಲ ಟೆಸ್ಟ್​ನ ನಾಯಕತ್ವ ವಹಿಸಿಕೊಂಡಿದ್ದಾರೆ. ಅಜಿಂಕ್ಯ ರಹಾನೆ ಉಪನಾಯಕರಾಗಿದ್ದಾರೆ. ಮಯಾಂಕ್​ ಅಗರ್​ವಾಲ್​, ಪೃಥ್ವಿ ಶಾ, ಚೇತೇಶ್ವರ ಪೂಜಾರ​, ಹನುಮ ವಿಹಾರಿ, ವೃದ್ಧಿಮಾನ್​ ಸಾಹಾ, ರವಿಚಂದ್ರನ್​ ಅಶ್ವಿನ್​, ಉಮೇಶ್​ ಯಾದವ್​, ಮೊಹ್ಮದ್​ ಶಮಿ ಹಾಗೂ ಜಸ್ಪ್ರೀತ್​ ಬೂಮ್ರಾ ಪ್ಲೇಯಿಂಗ್​ 11 ನಲ್ಲಿದ್ದಾರೆ.

ರಾಹುಲ್​ಗಿಲ್ಲ ಸ್ಥಾನ: ಕನ್ನಡಿಗ ಕೆಎಲ್​ ರಾಹುಲ್​ ಮೊದಲ ಟೆಸ್ಟ್​ನಲ್ಲಿ ಹೊರಗುಳಿದಿದ್ದಾರೆ. ಇದಕ್ಕೆ ಕಾರಣ ಕೂಡ ಇದೆ. ಏಕದಿನ ಹಾಗೂ ಟಿ20 ಪಂದ್ಯಗಳಲ್ಲಿ ಕೆಲ್​ ರಾಹುಲ್​ ಆಡಿದ್ದಾರೆ. ಹೀಗಾಗಿ ಅವರಿಗೆ ಕೊಂಚ ವಿಶ್ರಾಂತಿಯ ಅಗತ್ಯತೆ ಇದೆ. ಅಲ್ಲದೆ, ಎರಡನೇ ಟೆಸ್ಟ್​ನಿಂದ ವಿರಾಟ್​ ಕೊಹ್ಲಿ ಅಲಭ್ಯರಾಗಲಿದ್ದಾರೆ. ಈ ಕಾರಣಕ್ಕೆ ಮೊದಲ ಟೆಸ್ಟ್​ನಲ್ಲಿ ವಿಶ್ರಾಂತಿ ಕೊಡಲು ನಿರ್ಧರಿಸಲಾಗಿದೆ.

ಗುರುವಾರದಿಂದ ಮೊದಲ ಟೆಸ್ಟ್​: ಭಾರತದ ಪ್ಲೇಯಿಂಗ್​ 11 ಪ್ರಕಟ; ಕನ್ನಡಿಗ ಕೆಎಲ್​ ರಾಹುಲ್​​ ಔಟ್​!

Published On - 1:53 pm, Thu, 17 December 20

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ