Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: ಇಂಗ್ಲೆಂಡ್​ ವಿರುದ್ಧದ ಎರಡನೇ T20ಗೂ ಮೊದಲು ಟೀಂ ಇಂಡಿಯಾದಲ್ಲಿ ಮೇಜರ್​ ಸರ್ಜರಿ?

India vs England: ಮೊದಲ ಟಿ20ಯಲ್ಲಿ ಟೀಂ ಇಂಡಿಯಾ ಹೀನಾಯವಾಗಿ ಸೋಲಲು ಆರಂಭಿಕರ ವಿಫಲತೆಯೇ ಪ್ರಮುಖ ಕಾರಣ ಎನ್ನಬಹುದಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಟೀಂ ಇಂಡಿಯಾದ ಹಿಟ್‌ಮ್ಯಾನ್ ಎರಡನೇ ಟಿ20 ಪಂದ್ಯಕ್ಕೆ ಪುನರಾಗಮನವನ್ನು ಮಾಡಬಹುದು ಎಂದು ನಿರೀಕ್ಷಿಸಲಾಗಿದೆ.

India vs England: ಇಂಗ್ಲೆಂಡ್​ ವಿರುದ್ಧದ ಎರಡನೇ T20ಗೂ ಮೊದಲು ಟೀಂ ಇಂಡಿಯಾದಲ್ಲಿ ಮೇಜರ್​ ಸರ್ಜರಿ?
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on: Mar 14, 2021 | 4:29 PM

ಅಹಮದಬಾದ್​:ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಟಿ20 ಸರಣಿಯ ಎರಡನೇ ಪಂದ್ಯ ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್​ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಉಭಯ ತಂಡಗಳ ತಯಾರಿ ಜೋರಾಗಿ ಸಾಗಿದೆ. ಭಾರತ ಸೇಡು ತೀರಿಸಿಕೊಳ್ಳೋಕೆ ಪ್ರಯತ್ನಿಸಿದರೆ, ಇಂಗ್ಲೆಂಡ್ ತನ್ನ ಮುನ್ನಡೆ ಹೆಚ್ಚಿಸಲು ಹವಣಿಸುತ್ತಿದೆ. ಮೊದಲ ಟಿ20 ಯ ಸೋಲಿನ ನಂತರ, ಟೀಂ ಇಂಡಿಯಾದ ಆಡುವ ಹನ್ನೊಂದರ ಬಳಗದ ಬಗ್ಗೆ ಸಾಕಷ್ಟು ಪ್ರಶ್ನೆಗಳು ಎದ್ದವು. ಅಭಿಮಾನಿಗಳು ಮತ್ತು ವಿಮರ್ಶಕರ ಪ್ರಶ್ನೆಗಳು ನಾಯಕ ವಿರಾಟ್ ಕೊಹ್ಲಿಯನ್ನು ಇನ್ನಿಲ್ಲದಂತೆ ಕಾಡಿದವು. ಇಂತಹ ಪರಿಸ್ಥಿತಿಯಲ್ಲಿ, ಎರಡನೇ ಟಿ20 ಯಲ್ಲಿ ಭಾರತೀಯ ತಂಡದ ಆಡುವ ಹನ್ನೊಂದರ ಬಳಗ ಸ್ವಲ್ಪ ಬದಲಾಗುವ ಸಾಧ್ಯತೆಗಳಿವೆ.

ಆಡುವ ಇಲೆವೆನ್‌ನಲ್ಲಿ ದೊಡ್ಡ ಬದಲಾವಣೆ? ರೋಹಿತ್ ಶರ್ಮಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವ ಮೂಲಕ ಎರಡನೇ ಟಿ20 ಪಂದ್ಯದಲ್ಲಿ ಭಾರತ ಆಡುವ ಇಲೆವೆನ್‌ನಲ್ಲಿ ದೊಡ್ಡ ಬದಲಾವಣೆಯನ್ನು ಮಾಡಬಹುದು. ಸಹಜವಾಗಿ, ಮೊದಲ ಟಿ20 ಪಂದ್ಯದ ಟಾಸ್ ಸಮಯದಲ್ಲಿ ಮೊದಲ ಎರಡು ಪಂದ್ಯಗಳಿಂದ ರೋಹಿತ್​ ಹೊರಗುಳಿಯಲ್ಲಿದ್ದಾರೆ ಎಂದು ವಿರಾಟ್ ಹೇಳಿದ್ದರು. ಆದರೆ ಈಗ ಪರಿಸ್ಥಿತಿ ವಿಭಿನ್ನವಾಗಿದೆ.

ಮೊದಲ ಟಿ20ಯಲ್ಲಿ ಟೀಂ ಇಂಡಿಯಾ ಹೀನಾಯವಾಗಿ ಸೋಲಲು ಆರಂಭಿಕರ ವಿಫಲತೆಯೇ ಪ್ರಮುಖ ಕಾರಣ ಎನ್ನಬಹುದಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಟೀಂ ಇಂಡಿಯಾದ ಹಿಟ್‌ಮ್ಯಾನ್ ಎರಡನೇ ಟಿ20 ಪಂದ್ಯಕ್ಕೆ ಪುನರಾಗಮನವನ್ನು ಮಾಡಬಹುದು ಎಂದು ನಿರೀಕ್ಷಿಸಲಾಗಿದೆ. ಮೊದಲ ಟಿ20 ಪಂದ್ಯದಲ್ಲಿ 12 ಎಸೆತ ಎದುರಿಸಿದ ಶಿಖರ್ ಧವನ್ ಕೇವಲ 4 ರನ್ ಗಳಿಸಿದರು. ಹೀಗಾಗಿ ಫಾರ್ಮ್​ನಲ್ಲಿಲ್ಲದ ಶಿಖರ್ ಧವನ್ ಬದಲಿಗೆ ರೋಹಿತ್ ತಂಡದಲ್ಲಿ ಸ್ಥಾನ ಪಡೆಯಬಹುದು.

3 ಸ್ಪಿನ್ನರ್‌ಗಳಲ್ಲಿ ಒಬ್ಬರನ್ನು ತೆಗೆದುಹಾಕುವ ಗುಮಾನಿ? 3 ಸ್ಪಿನ್ನರ್‌ಗಳಲ್ಲಿ ಒಬ್ಬರನ್ನು ತೆಗೆದುಹಾಕುವ ಗುಮಾನಿ ಎದ್ದಿದೆ. ಮೊದಲ ಟಿ20 ಪಂದ್ಯದಲ್ಲಿ ಸ್ಪಿನ್ನರ್‌ಗಳು ಅಷ್ಟೇನೂ ಪರಿಣಾಮಕಾರಿ ಎನಿಸಲಿಲ್ಲ. ಹಾಗಾಗಿ ಒಬ್ಬ ಸ್ಪಿನ್ನರ್​ನನ್ನು ತಂಡದಿಂದ ಕೈಬಿಟ್ಟು ಮತ್ತೊಬ್ಬ ವೇಗದ ಬೌಲರ್​ ಆದ ದೀಪಕ್ ಚಹರ್ ಬೌಲಿಂಗ್​ ವಿಭಾಗದಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆ ಇದೆ. ಹೀಗಾಗಿ ಅಕ್ಷರ್ ಪಟೇಲ್ ಅಥವಾ ವಾಷಿಂಗ್ಟನ್ ಸುಂದರ್ ಇಬ್ಬರಲ್ಲಿ ಒಬ್ಬರನ್ನು ಕಣಕ್ಕಿಳಿಸಿ, ಒಬ್ಬರ ಬದಲಿಗೆ ದೀಪಕ್ ಚಹರ್ ಅವರನ್ನು ಮೈದಾನದಕ್ಕಿಳಿಸಲ್ಲಿದ್ದಾರೆ ಕೊಹ್ಲಿ.

ಬೇರೆ ಬದಲಾವಣೆಗಳಿಲ್ಲ! ಈ 2 ಬದಲಾವಣೆಗಳ ಹೊರತಾಗಿ, ಇತರ ಎಲ್ಲಾ ಸ್ಲಾಟ್‌ಗಳಲ್ಲಿ ಬದಲಾವಣೆಯ ವ್ಯಾಪ್ತಿಯು ನಗಣ್ಯ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟಿ20 ಇಂದು ಸಂಜೆ 7 ರಿಂದ ನಡೆಯಲಿದೆ.

ಎರಡನೇ ಟಿ20 ಗಾಗಿ ಟೀಂ ಇಂಡಿಯಾ ರೋಹಿತ್ ಶರ್ಮಾ, ಕೆ.ಎಲ್. ರಾಹುಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, ವಾಷಿಂಗ್ಟನ್ ಸುಂದರ್ / ಅಕ್ಷರ್ ಪಟೇಲ್, ದೀಪಕ್ ಚಹರ್, ಭುವನೇಶ್ವರ ಕುಮಾರ್, ಯುಜ್ವೇಂದ್ರ ಚಾಹಲ್, ಶಾರ್ದುಲ್ ಠಾಕೂರ್

ಇದನ್ನೂ ಓದಿ:India vs England: ಇಂದು 2ನೇ T20 ಪಂದ್ಯ, ಪುಟಿದೇಳುತ್ತಾ ಕೊಹ್ಲಿ ಪಡೆ.. ವೈಫಲ್ಯದಿಂದ ಹೊರಬರ್ತಾರಾ ಆರಂಭಿಕ ಬ್ಯಾಟ್ಸ್​ಮನ್​ಗಳು?

ಹಿಮಾನಿ ಶವವನ್ನು ಸೂಟ್‌ಕೇಸ್‌ನಲ್ಲಿ ಎಳೆದೊಯ್ಯುತ್ತಿರುವ ವಿಡಿಯೋ ಪತ್ತೆ
ಹಿಮಾನಿ ಶವವನ್ನು ಸೂಟ್‌ಕೇಸ್‌ನಲ್ಲಿ ಎಳೆದೊಯ್ಯುತ್ತಿರುವ ವಿಡಿಯೋ ಪತ್ತೆ
ಮಹಿಳೆಯರ ಸ್ಫೂರ್ತಿದಾಯಕ ಪಯಣ ಹಂಚಿಕೊಳ್ಳಲು ಪ್ರಧಾನಿ ಮೋದಿ ಅವಕಾಶ
ಮಹಿಳೆಯರ ಸ್ಫೂರ್ತಿದಾಯಕ ಪಯಣ ಹಂಚಿಕೊಳ್ಳಲು ಪ್ರಧಾನಿ ಮೋದಿ ಅವಕಾಶ
ನಟ್ಟು ಬೋಲ್ಟು ಹೇಳಿಕೆ: ಡಿಕೆಶಿ ಬಳಸಿದ ಭಾಷೆ ಸರಿ ಇಲ್ಲ ಎಂದ ನಾಗಾಭರಣ
ನಟ್ಟು ಬೋಲ್ಟು ಹೇಳಿಕೆ: ಡಿಕೆಶಿ ಬಳಸಿದ ಭಾಷೆ ಸರಿ ಇಲ್ಲ ಎಂದ ನಾಗಾಭರಣ
ಡಾ ರಾಜ್​ಕುಮಾರ್ ಅವರ ಒಂದು ಸನ್ನೆಗೆ ಲಕ್ಷ ಜನ ಸೇರ್ತಿದ್ರು: ಸಾಧು ಕೋಕಿಲ
ಡಾ ರಾಜ್​ಕುಮಾರ್ ಅವರ ಒಂದು ಸನ್ನೆಗೆ ಲಕ್ಷ ಜನ ಸೇರ್ತಿದ್ರು: ಸಾಧು ಕೋಕಿಲ
ಹೆಚ್ಚುವರಿ ಉತ್ತರ ಪತ್ರಿಕೆ ನೀಡದ ಮೇಲ್ವಿಚಾರಕ: ವಿದ್ಯಾರ್ಥಿನಿ ಕಣ್ಣೀರು
ಹೆಚ್ಚುವರಿ ಉತ್ತರ ಪತ್ರಿಕೆ ನೀಡದ ಮೇಲ್ವಿಚಾರಕ: ವಿದ್ಯಾರ್ಥಿನಿ ಕಣ್ಣೀರು
ಪ್ರತಿಭಟನೆಗಳಿಗೆ ಬಂದ್ ಒಂದೇ ಅಸ್ತ್ರವಲ್ಲ, ಅದು ಬ್ರಹ್ಮಾಸ್ತ್ರ: ನಾರಾಯಣಗೌಡ
ಪ್ರತಿಭಟನೆಗಳಿಗೆ ಬಂದ್ ಒಂದೇ ಅಸ್ತ್ರವಲ್ಲ, ಅದು ಬ್ರಹ್ಮಾಸ್ತ್ರ: ನಾರಾಯಣಗೌಡ
ಉತ್ತರ ಕನ್ನಡ ಜಿಲ್ಲೆಲಿ ಅತಿ ಹೆಚ್ಚು ಉಷ್ಣಾಂಶ ದಾಖಲು: ಡಿಸಿ ಹೇಳಿದ್ದಿಷ್ಟು
ಉತ್ತರ ಕನ್ನಡ ಜಿಲ್ಲೆಲಿ ಅತಿ ಹೆಚ್ಚು ಉಷ್ಣಾಂಶ ದಾಖಲು: ಡಿಸಿ ಹೇಳಿದ್ದಿಷ್ಟು
ಗಿರ್‌ನಲ್ಲಿ ಪ್ರಧಾನಿ ಮೋದಿಯ ಸಿಂಹ ಸಫಾರಿಯ ಕ್ಷಣಗಳ ವಿಡಿಯೋ ಇಲ್ಲಿದೆ
ಗಿರ್‌ನಲ್ಲಿ ಪ್ರಧಾನಿ ಮೋದಿಯ ಸಿಂಹ ಸಫಾರಿಯ ಕ್ಷಣಗಳ ವಿಡಿಯೋ ಇಲ್ಲಿದೆ
ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ: ಸಿದ್ದರಾಮಯ್ಯ
ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ: ಸಿದ್ದರಾಮಯ್ಯ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ